AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಮ್ಯೂಸಿಯಮ್​ಗಳಿಗೆ ಬಾಂಬ್ ಬೆದರಿಕೆ ಪ್ರಕರಣ: ಪೊಲೀಸರಿಗೆ ತಲೆನೋವಾದ ಆರೋಪಿಗಳ ಲೊಕೇಷನ್ ​ಟ್ರೇಸ್​ ​

ಕಳೆದ ಕೆಲ ದಿನಗಳ ಹಿಂದೆ ಬೆಂಗಳೂರಿನಲ್ಲಿರುವ ಮ್ಯೂಸಿಯಂಗಳಿಗೆ ಬಾಂಬ್​ ಬೆದರಿಕೆ ಇಮೇಲ್​ ಬಂದಿತ್ತು. ಈ ಪ್ರಕರಣ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಮಹತ್ವದ ವಿಚಾರವೊಂದು ತಿಳಿದಿದೆ. ಅದು ದುಷ್ಕರ್ಮಿಗಳು ವಿಪಿಎನ್ (ವರ್ಚುವಲ್ ಪ್ರೈವೇಟ್ ನೆಟ್ ವರ್ಕ್) ಬಳಸಿ ಇಮೇಲ್. ಇದು ಪೊಲೀಸರಿಗೆ ತಲೆನೋವಾಗಿದೆ.

ಬೆಂಗಳೂರಿನ ಮ್ಯೂಸಿಯಮ್​ಗಳಿಗೆ ಬಾಂಬ್ ಬೆದರಿಕೆ ಪ್ರಕರಣ: ಪೊಲೀಸರಿಗೆ ತಲೆನೋವಾದ ಆರೋಪಿಗಳ ಲೊಕೇಷನ್ ​ಟ್ರೇಸ್​ ​
ಸಾಂದರ್ಭಿಕ ಚಿತ್ರ
Follow us
Jagadisha B
| Updated By: ವಿವೇಕ ಬಿರಾದಾರ

Updated on: Jan 09, 2024 | 8:06 AM

ಬೆಂಗಳೂರು, ಜನವರಿ 09: ನಗರದ ಮ್ಯೂಸಿಯಮ್​ಗಳಿಗೆ (Museum) ಬಾಂಬ್ ಬೆದರಿಕೆ (Bomb Threat Call) ಇಮೇಲ್ ಬಂದಿದ್ದ ಪ್ರಕರಣದ ತನಿಖೆಯಲ್ಲಿ ಪೊಲೀಸರಿಗೆ ಮಹತ್ವದ ವಿಚಾರವೊಂದು ತಿಳಿದುಬಂದಿದೆ. ದುಷ್ಕರ್ಮಿಗಳು ವಿಪಿಎನ್ (ವರ್ಚುವಲ್ ಪ್ರೈವೇಟ್ ನೆಟ್ ವರ್ಕ್) ಬಳಸಿ ಇಮೇಲ್ ಮಾಡಿರುವುದು ಪೊಲೀಸರಿಗೆ ತಿಳಿದಿದೆ. ದುಷ್ಕರ್ಮಿಗಳು ಗೂಗಲ್ ಇ-ಮೇಲ್ ವೆಬ್ ಬಳಸಿಯೇ ಮೇಲ್ ಮಾಡಿದ್ದಾರೆ. ಆದರೆ ನೆಟ್​ವರ್ಕ್ ಮಾತ್ರ ವಿಪಿಎನ್ ಬಳಸಿದ್ದಾರೆ. ಹೀಗಾಗಿ ಕೇಂದ್ರ ವಿಭಾಗದ ಪೊಲೀಸರಿಂದ (Police) ತನಿಖೆ ಮುಂದುವರೆದಿದೆ.

ವಿಪಿಎನ್ ನೆಟ್​ವರ್ಕ್ ಬಳಸಿಕೊಂಡರೇ ಐಪಿ ಅಡ್ರೆಸ್ ಟ್ರೇಸ್ ಮಾಡುವುದು ಕಷ್ಟವಾಗುತ್ತದೆ. ಸಾಧಾರಣವಾಗಿ ಇಂತಹ ಪ್ರಕರಣಗಳಲ್ಲಿ ಐಪಿ ಅಡ್ರೆಸ್ ಟ್ರೇಸ್ ಮಾಡಲು ಕಷ್ಟವಾಗುತ್ತದೆ. ಬೇರೆ ಬೇರೆ ದೇಶಗಳಿಂದ ಮೇಲ್ ಬಂದಿರುವ ಹಾಗೆ ಐಪಿ ಅಡ್ರೆಸ್ ತೋರಿಸುತ್ತದೆ. ಈ ಪ್ರಕರಣದಲ್ಲಿ ಐಪಿ ಅಡ್ರೆಸ್ ಮೂರು ದೇಶದ ಲೊಕೇಷನ್​ಗಳನ್ನು ತೋರಿಸುತ್ತಿದೆ. ಇದರಿಂದ ಪೊಲೀಸರಿಗೆ ತಲೆನೋವಾಗಿದೆ. ಆದರೆ ಅದರ ಸರಿಯಾದ ಐಪಿ ಅಡ್ರೆಸ್ ಹುಡುಕಲು ಕಾಲಾವಕಾಶ ಬೇಕು.

ಇದನ್ನೂ ಓದಿ: Bomb Threat: ದೇಶದ 20ಕ್ಕೂ ಹೆಚ್ಚು ಮ್ಯೂಸಿಯಂಗಳಿಗೆ ಬಾಂಬ್​ ಬೆದರಿಕೆ ಕರೆ

ಏನಿದು ಪ್ರಕರಣ

ಶುಕ್ರವಾರ (ಜ.06) ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್​ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಮ್ಯೂಸಿಯಂನಲ್ಲಿ ಹಲವು ಸ್ಪೋಟಕಗಳನ್ನ ಬಚ್ಚಿಡಲಾಗಿದೆ, ಬೆಳಗ್ಗೆ ಎಲ್ಲವೂ ಸ್ಪೋಟಗೊಳ್ಳುತ್ತವೆ ಎಂದು‘Morgue999lol’ ಎಂಬ ಐಡಿ ಮೂಲಕ ಮೇಲ್ ಮಾಡಿ, ಜೊತೆಗೆ ಉಗ್ರ ಸಂಘಟೆನಯೊಂದರ (Terrorizers 111) ಹೆಸರನ್ನು ದುಷ್ಕರ್ಮಿಗಳು ಉಲ್ಲೇಖಿಸಿ ಬೆದರಿಕೆ ಹಾಕಿದ್ದರು.

ಶಾಲೆಗಳಿಗೆ ಬಾಂಬ್​ ಬೆದರಿಕೆಗೂ ವಿಪಿಎನ್​ ಬಳಕೆ

ಕಳೆದ ವರ್ಷ ಡಿಸೆಂಬರ್​ನಲ್ಲಿ ಬೆಂಗಳೂರಿನ 60 ಖಾಸಗಿ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್​ ಬೆದರಿಕೆ ಬಂದಿತ್ತು. ಈ ಪ್ರಕರಣ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹಾಗೂ ಹೆಚ್ಚುವರಿ ಆಯುಕ್ತ (ಪಶ್ಚಿಮ) ಎನ್. ಸತೀಶ್ ಕುಮಾರ್​ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.

ಹಲವು ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು, ಆರೋಪಿಗಳು ಬಳಸಲಾದ ಇ-ಮೇಲ್​ ಐಡಿ ನಕಲು ಎಂಬುದು ಪತ್ತೆಯಾಗಿತ್ತು. ಕೃತ್ಯ ಎಸಗಲೆಂದೆ ಆರೋಪಿಗಳು ನಕಲಿ ಐಡಿ ಸೃಷ್ಟಿಸಿದ್ದರು. ದುಷ್ಕರ್ಮಿ ವರ್ಚ್ಯುಯಲ್ ಪ್ರವೇಟ್ ನೆಟ್ವರ್ಕ್ (ವಿಪಿಎನ್) ಬಳಸಿ ಇ-ಮೇಲ್ ಸಂದೇಶಗಳನ್ನು ಕಳುಹಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ