AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಮಧ್ಯರಾತ್ರಿ ವಾಹನ ಚಾಲನೆ ಮಾಡುವವರಿಗೆ ಭಯ ಹುಟ್ಟುಸುತ್ತಿದ್ದಾನೆ ಆ ವ್ಯಕ್ತಿ

ಮಧ್ಯರಾತ್ರಿ ವಾಹನ ಚಾಲನೆ ಮಾಡುವವರಿಗೆ ಭಯ ಹುಟ್ಟುಸುತ್ತಿದ್ದಾನಂತೆ ಆ ವ್ಯಕ್ತಿ, ಆ ವಾಹನದಲ್ಲಿದ್ದವರ ಪರಿಸ್ಥಿತಿ ಏನಾಗಬೇಡ ಹೇಳಿ?

Bengaluru: ಮಧ್ಯರಾತ್ರಿ ವಾಹನ ಚಾಲನೆ ಮಾಡುವವರಿಗೆ ಭಯ ಹುಟ್ಟುಸುತ್ತಿದ್ದಾನೆ ಆ ವ್ಯಕ್ತಿ
ಕಾರು ನಿಲ್ಲಿಸುತ್ತಿರುವ ನಿಗೂಢ ವ್ಯಕ್ತಿ
TV9 Web
| Edited By: |

Updated on:Dec 22, 2022 | 8:32 AM

Share

ಬೆಂಗಳೂರು: ನಗರದಲ್ಲಿ ಮಧ್ಯರಾತ್ರಿ ವೇಳೆ ವಾಹನ ಸಚಲಾಯಿಸುವಾಗ ಜಾಗರೂಕರಾಗಿರಿ. ಏಕೆಂದರೆ ನಿಗೂಢ ವ್ಯಕ್ತಿ (Mysterious man)ಯೊಬ್ಬ ಮಧ್ಯರಾತ್ರಿಯಲ್ಲಿ ಸಂಚರಿಸುವ ವಾಹನಗಳನ್ನು ಅಡ್ಡಹಾಕಿ ಭಯ ಹುಟ್ಟಿಸುತ್ತಿದ್ದಾನೆ. ಒಂದೊಮ್ಮೆ ನೀವು ಕಾರು ನಿಲ್ಲಿಸಿದರೆ ಆತ ಏನು ಮಾಡುತ್ತಾನೋ ಆತನಿಗೇ ಗೊತ್ತು. ಈ ಬಗ್ಗೆ ವ್ಯಕ್ತಿಯೊಬ್ಬರು ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಂಡು ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ನಗರದ ಮಹದೇವಪುರ ಠಾಣಾ ಪೊಲೀಸರು, ನಿಗೂಢ ವ್ಯಕ್ತಿಯನ್ನು ಪತ್ತೆಹಚ್ಚಲು ಮುಂದಾಗಿದ್ದಾರೆ.

ಮಹದೇವಪುರ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರು ಕಾರು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಹೆಡ್​ಫೋನ್ ಹಾಕಿ ಕೈಯಲ್ಲೊಂದು ಫೈಲ್ ಹಿಡಿದುಕೊಂಡು ರಸ್ತೆಗೆ ಅಡ್ಡಬಂದು ಕಾರು ನಿಲ್ಲಿಸುವಂತೆ ಎರಡೂ ಕೈಗಳನ್ನು ಚಾಚಿದ್ದಾನೆ. ಕಾರು ನಿಲ್ಲುತ್ತಿದ್ದಂತೆ ಕಾರಿನ ಹತ್ತಿರಕ್ಕೆ ಬಂದಾಗ ಕಾರು ಚಾಲಕನಿಗೆ ಭಯವಾಗಿ ಕಾರು ಚಲಾಯಿಸಲು ಮುಂದಾಗಿದ್ದಾನೆ. ಈ ವೇಳೆ ಕಾರಿಗೆ ಅಡ್ಡಬಂದು ನಿಲ್ಲಿಸುವಂತೆ ಸೂಚಿಸುತ್ತಾನೆ. ಮತ್ತೆ ಕಾರನ್ನು ನಿಲ್ಲಿಸಿದಾಗ ಎಡಬದಿಯ ಬಾಗಿಲ ಬಳಿ ಬರುತ್ತಾನೆ. ಈ ವೇಳೆ ಚಾಲಕ ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಹೋಗಿದ್ದಾರೆ.

ಇದನ್ನೂ ಓದಿ: Bengaluru House Rent: ಬೆಂಗಳೂರಿನ ಬಾಡಿಗೆ ನಿವಾಸಿಗಳಿಗೆ ದರ ಏರಿಕೆಯ ಶಾಕ್; ಮನೆ ಬಾಡಿಗೆ ಶೇ 45ರವರೆಗೆ ಹೆಚ್ಚಳ

ಡಿಸೆಂಬರ್ 18ರಂದು ಮಧ್ಯರಾತ್ರಿ ನಡೆದ ಘಟನೆಯ ವಿಡಿಯೋವನ್ನು ThirdEye ಎಂಬ ಟ್ವಿಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಮಧ್ಯರಾತ್ರಿ ಕಾರು ನಿಲ್ಲಿಸುವ ಆ ವ್ಯಕ್ತಿ ಯಾರು? ಯಾಕಾಗಿ ಕಾರು ನಿಲ್ಲಿಸಿದ್ದ ಅನ್ನೋದು ಗೊತ್ತಿಲ್ಲ. ಆದರೆ ಈ ನಿಗೂಢ ವ್ಯಕ್ತಿಯನ್ನು ಪತ್ತೆಹಚ್ಚಲು ಮಹದೇಪುರ ಠಾಣೆ ಪೊಲೀಸರು ಮುಂದಾಗಿದ್ದು, ಆ ವ್ಯಕ್ತಿ ಸಿಕ್ಕ ಬಳಿಕವಷ್ಟೇ ಘಟನೆಗೆ ಸ್ಪಷ್ಟತೆ ಸಿಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:54 am, Thu, 22 December 22

2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!
ಬಾಲರಾಮನ ವಿಗ್ರಹವನ್ನು ರಾಮ ಮಂದಿರಕ್ಕೆ ದಾನ ಮಾಡಿದ ಕರ್ನಾಟಕದ ಭಕ್ತ
ಬಾಲರಾಮನ ವಿಗ್ರಹವನ್ನು ರಾಮ ಮಂದಿರಕ್ಕೆ ದಾನ ಮಾಡಿದ ಕರ್ನಾಟಕದ ಭಕ್ತ