AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು- ಮೈಸೂರು ಮಾರ್ಗದ ರೈಲುಗಳು ನಾಯಂಡಹಳ್ಳಿಯಲ್ಲಿ ನಿಲುಗಡೆಗೆ ಗ್ರೀನ್​ ಸಿಗ್ನಲ್​, ಬಹುದಿನಗಳ ಬೇಡಿಕೆ ಈಡೇರಿಕೆ

ಪ್ರಯಾಣಿಕರ ಬಹುದಿನಗಳ ಬೇಡಿಕೆಯನ್ನು ರೈಲ್ವೇ ಇಲಾಖೆ ಈಡೇರಿಸಿದ್ದು, ಇನ್ಮುಂದೆ ನಾಲ್ಕು ರೈಲುಗಳು ಬೆಂಗಳೂರಿನ ನಾಯಂಡಹಳ್ಳಿಯಲ್ಲಿ ನಿಲ್ಲಿಸಲಿವೆ. ಆ ಟ್ರೈನ್​ಗಳು ಯಾವುವು ಎನ್ನುವ ಮಾಹಿತಿ ಇಲ್ಲಿದೆ ನೋಡಿ.

ಬೆಂಗಳೂರು- ಮೈಸೂರು ಮಾರ್ಗದ ರೈಲುಗಳು ನಾಯಂಡಹಳ್ಳಿಯಲ್ಲಿ ನಿಲುಗಡೆಗೆ ಗ್ರೀನ್​ ಸಿಗ್ನಲ್​, ಬಹುದಿನಗಳ ಬೇಡಿಕೆ ಈಡೇರಿಕೆ
ರೈಲು
ರಮೇಶ್ ಬಿ. ಜವಳಗೇರಾ
|

Updated on:Jun 22, 2023 | 7:22 AM

Share

ಬೆಂಗಳೂರು: ಮೈಸೂರನಿಂದ(Mysuru) ಬರುವ ಪ್ರತಿನಿತ್ಯ ಸೂಪರ್‌ ಫಾಸ್ಟ್‌ ಹಾಗೂ ಎಕ್ಸ್‌ಪ್ರೆಸ್‌ ರೈಲುಗಳು (Trains) ಬೆಂಗಳೂರಿನ(Bengaluru) ನಾಯಂಡಹಳ್ಳಿಯಲ್ಲಿ(Nayandahalli) ನಿಲುಗಡೆಯಾಗಲಿವೆ. ಬೆಂಗಳೂರಿನಿಂದ ತೆರಳುವ ಹಾಗೂ ನಗರಕ್ಕೆ ಆಗಮಿಸುವ ನಾಲ್ಕು ರೈಲುಗಳು ನಾಯಂಡಹಳ್ಳಿಯಲ್ಲಿ ನಿಲುಗಡೆಯಾಗಲಿದ್ದು, ಪ್ರಯಾಣಿಕರು ಇದರ ಉಪಯೋಗ ಪಡೆದುಕೊಳ್ಳಬಹುದಾಗಿದೆ. ಇದರೊಂದಿಗೆ ರೈಲು ಪ್ರಯಾಣಿಕರ ಬಹುದಿನಗಳ ಬೇಡಿಕೆಯನ್ನು ರೈಲ್ವೆ ಇಲಾಖೆ ಈಡೇರಿಸಿದೆ. ಈ ಸೇವೆ ಸೆಪ್ಟೆಂಬರ್ 20 ರವರೆಗೆ ಪ್ರಾಯೋಗಿಕವಾಗಿ ನಿಲುಗಡೆ ಆಗಲಿವೆ. ಮುಖ್ಯವಾಗಿ ನಾಯಂಡಹಳ್ಳಿಯಲ್ಲಿ ರೈಲುಗಳು ಕೇವಲ ಒಂದು ನಿಮಿಷ ಮಾತ್ರ ನಿಲ್ಲಿಸಲಿವೆ. ಹೀಗಾಗಿ ಪ್ರಯಾಣಿಕರು ಇದರ ಬಗ್ಗೆ ಎಚ್ಚರಿಕೆ ವಹಿಸಬೇಕು. ಹಾಗಾದ್ರೆ ಯಾವೆಲ್ಲ ರೈಲುಗಳು ನಾಯಂಡಹಳ್ಳಿಯಲ್ಲಿ ಸ್ಟಾಪ್ ಕೊಡಲಿವೆ ಎನ್ನುವ ವಿವರ ಈ ಕೆಳಗಿನಂತಿದೆ ನೀಡಿ.

ಇದನ್ನೂ ಓದಿ: ಕರ್ನಾಟಕದಲ್ಲಿ ಕಾವೇರಿ 2.0 ಜಾರಿ, ಆಸ್ತಿ ನೋಂದಾಣಿ ಸರಳ: ಇದು ಹೇಗೆ ಕಾರ್ಯನಿರ್ವಹಿಸುತ್ತೆ? ಇದರ ಅನುಕೂಲಗಳೇನು?

ರೈಲು ಸಂಖ್ಯೆ 06525 ಬೆಂಗಳೂರು – ಮೈಸೂರು ವಿಶೇಷ ಎಕ್ಸ್‌ಪ್ರೆಸ್‌ ರೈಲು ಸಂಜೆ 5.04 ನಿಮಿಷಕ್ಕೆ ನಾಯಂಡನಹಳ್ಳಿಗೆ ಆಗಮಿಸಿ, ಒಂದು ನಿಮಿಷ ನಿಲುಗಡೆ ನಂತರ 5.05 ನಿಮಿಷಕ್ಕೆ ಅಲ್ಲಿಂದ ತೆರಳುತ್ತದೆ. ಮೈಸೂರು-ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್‌ ರೈಲು ರಾತ್ರಿ 10.27 ಕ್ಕೆ ನಾಯಂಡಹಳ್ಳಿಗೆ ಆಗಮಿಸಿ, ಒಂದು ನಿಮಿಷದ ನಿಲುಗಡೆ ನಂತರ 10.28 ಕ್ಕೆ ಅಲ್ಲಿಂದ ತೆರಳಲಿದೆ.

ಮೈಸೂರು – ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್‌ ರೈಲು ಸಂಖ್ಯೆ 06269 ನಾಯಂಡಹಳ್ಳಿಗೆ ತಡರಾತ್ರಿ 12.17 ಕ್ಕೆ ಆಗಮಿಸಿ ಅಲ್ಲಿಂದ 12.18 ನಿಮಿಷಕ್ಕೆ ಹೊರಡಲಿದೆ. ರೈಲು ಸಂಖ್ಯೆ 06270 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಡುವೆ ಸಂಚರಿಸುವ ವಿಶೇಷ ಎಕ್ಸ್‌ಪ್ರೆಸ್‌ ರೈಲು, ತಡರಾತ್ರಿ 12.27ಕ್ಕೆ ನಾಯಂಡಹಳ್ಳಿಗೆ ಆಗಮಿಸಲಿದ್ದು, ಒಂದು ನಿಮಿಷದ ನಿಲುಗಡೆ ನಂತರ 12.28 ಕ್ಕೆ ಅಲ್ಲಿಂದ ಹೊರಡಲಿದೆ.

ಈ ಮೇಲೆ ತಿಳಿಸಲಾದ ರೈಲುಗಳು ನಾಯಂಡಹಳ್ಳಿಯಲ್ಲಿ ಒಂದು ನಿಮಿಷ ಕಾಲ ನಿಲ್ಲಿಸಲಿದ್ದು, ಇದೇ ಸೆಪ್ಟೆಂಬರ್ 20ರ ವರೆಗೆ ಪ್ರಾಯೋಗಿಕವಾಗಿ ರೈಲು ನಿಲುಗಡೆಯಾಗಲಿವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಇದರಿಂದ ಬೆಂಗಳೂರಿನ ಪಶ್ಚಿಮ ಉಪನಗರಗಳಲ್ಲಿ ವಾಸಿಸುವ ಜನರಿಗೆ ಅನುಕೂಲವಾಗಲಿದೆ.

ಇನ್ನಷ್ಟು ಬೆಂಗಳೂರು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 7:20 am, Thu, 22 June 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್