AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು- ಮೈಸೂರು ಮಾರ್ಗದ ರೈಲುಗಳು ನಾಯಂಡಹಳ್ಳಿಯಲ್ಲಿ ನಿಲುಗಡೆಗೆ ಗ್ರೀನ್​ ಸಿಗ್ನಲ್​, ಬಹುದಿನಗಳ ಬೇಡಿಕೆ ಈಡೇರಿಕೆ

ಪ್ರಯಾಣಿಕರ ಬಹುದಿನಗಳ ಬೇಡಿಕೆಯನ್ನು ರೈಲ್ವೇ ಇಲಾಖೆ ಈಡೇರಿಸಿದ್ದು, ಇನ್ಮುಂದೆ ನಾಲ್ಕು ರೈಲುಗಳು ಬೆಂಗಳೂರಿನ ನಾಯಂಡಹಳ್ಳಿಯಲ್ಲಿ ನಿಲ್ಲಿಸಲಿವೆ. ಆ ಟ್ರೈನ್​ಗಳು ಯಾವುವು ಎನ್ನುವ ಮಾಹಿತಿ ಇಲ್ಲಿದೆ ನೋಡಿ.

ಬೆಂಗಳೂರು- ಮೈಸೂರು ಮಾರ್ಗದ ರೈಲುಗಳು ನಾಯಂಡಹಳ್ಳಿಯಲ್ಲಿ ನಿಲುಗಡೆಗೆ ಗ್ರೀನ್​ ಸಿಗ್ನಲ್​, ಬಹುದಿನಗಳ ಬೇಡಿಕೆ ಈಡೇರಿಕೆ
ರೈಲು
ರಮೇಶ್ ಬಿ. ಜವಳಗೇರಾ
|

Updated on:Jun 22, 2023 | 7:22 AM

Share

ಬೆಂಗಳೂರು: ಮೈಸೂರನಿಂದ(Mysuru) ಬರುವ ಪ್ರತಿನಿತ್ಯ ಸೂಪರ್‌ ಫಾಸ್ಟ್‌ ಹಾಗೂ ಎಕ್ಸ್‌ಪ್ರೆಸ್‌ ರೈಲುಗಳು (Trains) ಬೆಂಗಳೂರಿನ(Bengaluru) ನಾಯಂಡಹಳ್ಳಿಯಲ್ಲಿ(Nayandahalli) ನಿಲುಗಡೆಯಾಗಲಿವೆ. ಬೆಂಗಳೂರಿನಿಂದ ತೆರಳುವ ಹಾಗೂ ನಗರಕ್ಕೆ ಆಗಮಿಸುವ ನಾಲ್ಕು ರೈಲುಗಳು ನಾಯಂಡಹಳ್ಳಿಯಲ್ಲಿ ನಿಲುಗಡೆಯಾಗಲಿದ್ದು, ಪ್ರಯಾಣಿಕರು ಇದರ ಉಪಯೋಗ ಪಡೆದುಕೊಳ್ಳಬಹುದಾಗಿದೆ. ಇದರೊಂದಿಗೆ ರೈಲು ಪ್ರಯಾಣಿಕರ ಬಹುದಿನಗಳ ಬೇಡಿಕೆಯನ್ನು ರೈಲ್ವೆ ಇಲಾಖೆ ಈಡೇರಿಸಿದೆ. ಈ ಸೇವೆ ಸೆಪ್ಟೆಂಬರ್ 20 ರವರೆಗೆ ಪ್ರಾಯೋಗಿಕವಾಗಿ ನಿಲುಗಡೆ ಆಗಲಿವೆ. ಮುಖ್ಯವಾಗಿ ನಾಯಂಡಹಳ್ಳಿಯಲ್ಲಿ ರೈಲುಗಳು ಕೇವಲ ಒಂದು ನಿಮಿಷ ಮಾತ್ರ ನಿಲ್ಲಿಸಲಿವೆ. ಹೀಗಾಗಿ ಪ್ರಯಾಣಿಕರು ಇದರ ಬಗ್ಗೆ ಎಚ್ಚರಿಕೆ ವಹಿಸಬೇಕು. ಹಾಗಾದ್ರೆ ಯಾವೆಲ್ಲ ರೈಲುಗಳು ನಾಯಂಡಹಳ್ಳಿಯಲ್ಲಿ ಸ್ಟಾಪ್ ಕೊಡಲಿವೆ ಎನ್ನುವ ವಿವರ ಈ ಕೆಳಗಿನಂತಿದೆ ನೀಡಿ.

ಇದನ್ನೂ ಓದಿ: ಕರ್ನಾಟಕದಲ್ಲಿ ಕಾವೇರಿ 2.0 ಜಾರಿ, ಆಸ್ತಿ ನೋಂದಾಣಿ ಸರಳ: ಇದು ಹೇಗೆ ಕಾರ್ಯನಿರ್ವಹಿಸುತ್ತೆ? ಇದರ ಅನುಕೂಲಗಳೇನು?

ರೈಲು ಸಂಖ್ಯೆ 06525 ಬೆಂಗಳೂರು – ಮೈಸೂರು ವಿಶೇಷ ಎಕ್ಸ್‌ಪ್ರೆಸ್‌ ರೈಲು ಸಂಜೆ 5.04 ನಿಮಿಷಕ್ಕೆ ನಾಯಂಡನಹಳ್ಳಿಗೆ ಆಗಮಿಸಿ, ಒಂದು ನಿಮಿಷ ನಿಲುಗಡೆ ನಂತರ 5.05 ನಿಮಿಷಕ್ಕೆ ಅಲ್ಲಿಂದ ತೆರಳುತ್ತದೆ. ಮೈಸೂರು-ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್‌ ರೈಲು ರಾತ್ರಿ 10.27 ಕ್ಕೆ ನಾಯಂಡಹಳ್ಳಿಗೆ ಆಗಮಿಸಿ, ಒಂದು ನಿಮಿಷದ ನಿಲುಗಡೆ ನಂತರ 10.28 ಕ್ಕೆ ಅಲ್ಲಿಂದ ತೆರಳಲಿದೆ.

ಮೈಸೂರು – ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್‌ ರೈಲು ಸಂಖ್ಯೆ 06269 ನಾಯಂಡಹಳ್ಳಿಗೆ ತಡರಾತ್ರಿ 12.17 ಕ್ಕೆ ಆಗಮಿಸಿ ಅಲ್ಲಿಂದ 12.18 ನಿಮಿಷಕ್ಕೆ ಹೊರಡಲಿದೆ. ರೈಲು ಸಂಖ್ಯೆ 06270 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಡುವೆ ಸಂಚರಿಸುವ ವಿಶೇಷ ಎಕ್ಸ್‌ಪ್ರೆಸ್‌ ರೈಲು, ತಡರಾತ್ರಿ 12.27ಕ್ಕೆ ನಾಯಂಡಹಳ್ಳಿಗೆ ಆಗಮಿಸಲಿದ್ದು, ಒಂದು ನಿಮಿಷದ ನಿಲುಗಡೆ ನಂತರ 12.28 ಕ್ಕೆ ಅಲ್ಲಿಂದ ಹೊರಡಲಿದೆ.

ಈ ಮೇಲೆ ತಿಳಿಸಲಾದ ರೈಲುಗಳು ನಾಯಂಡಹಳ್ಳಿಯಲ್ಲಿ ಒಂದು ನಿಮಿಷ ಕಾಲ ನಿಲ್ಲಿಸಲಿದ್ದು, ಇದೇ ಸೆಪ್ಟೆಂಬರ್ 20ರ ವರೆಗೆ ಪ್ರಾಯೋಗಿಕವಾಗಿ ರೈಲು ನಿಲುಗಡೆಯಾಗಲಿವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಇದರಿಂದ ಬೆಂಗಳೂರಿನ ಪಶ್ಚಿಮ ಉಪನಗರಗಳಲ್ಲಿ ವಾಸಿಸುವ ಜನರಿಗೆ ಅನುಕೂಲವಾಗಲಿದೆ.

ಇನ್ನಷ್ಟು ಬೆಂಗಳೂರು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 7:20 am, Thu, 22 June 23

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು