AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ತೆರವಾಗಲಿದೆಯಾ ಟೋಲ್ ಬೂತ್? ಸದ್ಯದಲ್ಲೇ ಜಿಎನ್​ಎಸ್​ಎಸ್ ಪ್ರಾಯೋಗಿಕ ಅಳವಡಿಕೆ

ದೇಶದಾದ್ಯಂತ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಬೂತ್​ಗಳನ್ನು ತೆಗೆದುಹಾಕಲಾಗುವುದು ಎಂದು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಈ ಹಿಂದೆ ಹಲವು ಬಾರಿ ಹೇಳಿದ್ದರು. ಆದರೆ, ಅದು ಜಾರಿಗೆ ಬಂದಿರಲಿಲ್ಲ. ಈಗ ಆ ನಿಟ್ಟಿನಲ್ಲಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕ್ರಮಕ್ಕೆ ಮುಂದಾಗಿದೆ. ಬೆಂಗಳೂರು ಮೈಸೂರು ಹೆದ್ದಾರಿ ಬಗ್ಗೆ ಹೊಸ ಅಪ್​ಡೇಟ್ ನೀಡಿದೆ. ವಿವರಗಳಿಗೆ ಮುಂದೆ ಓದಿ.

ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ತೆರವಾಗಲಿದೆಯಾ ಟೋಲ್ ಬೂತ್? ಸದ್ಯದಲ್ಲೇ ಜಿಎನ್​ಎಸ್​ಎಸ್ ಪ್ರಾಯೋಗಿಕ ಅಳವಡಿಕೆ
ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ ಟೋಲ್ ಬೂತ್
ಗಣಪತಿ ಶರ್ಮಾ
|

Updated on:Jul 30, 2024 | 9:28 AM

Share

ಬೆಂಗಳೂರು, ಜುಲೈ 30: ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಉಪಗ್ರಹ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಕುರಿತು ಪ್ರಾಯೋಗಿಕ ಅಧ್ಯಯನ ಶೀಘ್ರದಲ್ಲೇ ಆರಂಭವಾಗಲಿದೆ. ದೇಶದಾದ್ಯಂತ ಟೋಲ್ ಬೂತ್‌ಗಳನ್ನು ತೆಗೆದುಹಾಕುವ ಯೋಜನೆಯ ಅಂಗವಾಗಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಅಸ್ತಿತ್ವದಲ್ಲಿರುವ ಫಾಸ್ಟ್ಯಾಗ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಉಪಗ್ರಹ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಗೆ ವರ್ಗಾಯಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ.

ಬೆಂಗಳೂರು ಮೈಸೂರು ಎಕ್ಸ್​​​ಪ್ರೆಸ್​​ ವೇನಲ್ಲಿ ಉಪಗ್ರಹ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯ ಪ್ರಾಯೋಗಿಕ ಅನುಷ್ಠಾದ ಬಗ್ಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್​​ಪ್ರೆಸ್’ ವರದಿ ಮಾಡಿದೆ. ಪ್ರಾಯೋಗಿಕ ಅಧ್ಯಯನಕ್ಕಾಗಿ ಆಯ್ಕೆ ಮಾಡಲಾದ ಎರಡು ಹೆದ್ದಾರಿಗಳಲ್ಲಿ, ಕರ್ನಾಟಕದ ಬೆಂಗಳೂರು-ಮೈಸೂರು ಹೆದ್ದಾರಿ ಕೂಡ ಒಂದು. ಪ್ರಯೋಗಗಳಿಗೆ ಸಿದ್ಧತೆಗಳು ನಡೆಯುತ್ತಿವೆ. ಆಗಸ್ಟ್‌ನಲ್ಲಿ ಪ್ರಾಯೋಗಿಕ ಅನುಷ್ಠಾನ ಪ್ರಾರಂಭವಾಗುವ ನಿರೀಕ್ಷೆಯಿದೆ ಎಂದು ಅವರು ತಿಳಿಸಿದ್ದಾರೆ.

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬೆಂಬಲಿತ ಇಂಡಿಯನ್ ಹೈವೇಸ್ ಮ್ಯಾನೇಜ್‌ಮೆಂಟ್ ಕಂಪನಿ ಲಿಮಿಟೆಡ್ ಜಿಎನ್​ಎಸ್​ಎಸ್ ಪ್ರಾಯೋಗಿಕ ಅನುಷ್ಠಾನದ ಹೊಣೆ ಹೊತ್ತುಕೊಂಡಿದೆ.

ಎಲ್ಲೆಲ್ಲ ಜಿಎನ್​ಎಸ್​ಎಸ್ ಪ್ರಾಯೋಗಿಕ ಅನುಷ್ಠಾನ?

ಬೆಂಗಳೂರು ಮೈಸೂರು ಹೆದ್ದಾರಿಯ ಒಂದು ನಿರ್ದಿಷ್ಟ ಭಾಗದಲ್ಲಿ ಮಾತ್ರ ಜಿಎನ್​ಎಸ್​ಎಸ್ ವ್ಯವಸ್ಥೆಯ ಪ್ರಾಯೋಗಿಕ ಅನುಷ್ಠಾನ ಮಾಡಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ. ಅಸ್ತಿತ್ವದಲ್ಲಿರುವ ಫಾಸ್ಟ್ಯಾಗ್ ಆಧಾರಿತ ಟೋಲ್ ಸಂಗ್ರಹವು ಮುಂದುವರಿಯಲಿದೆ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ. ಜಿಎನ್​ಎಸ್​ಎಸ್ ವ್ಯವಸ್ಥೆ ಪೂರ್ಣ ಪ್ರಮಾಣದಲ್ಲಿ ಜಾರಿಗೆ ಬರುವ ವರೆಗೆ ಟೋಲ್ ಬೂತ್‌ಗಳು ಇರುತ್ತವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಹೊಸ ವ್ಯವಸ್ಥೆಯಡಿ ಟೋಲ್ ಸಂಗ್ರಹ ಹೇಗೆ?

ಜಿಎನ್‌ಎಸ್‌ಎಸ್ ವ್ಯವಸ್ಥೆಯಡಿಯಲ್ಲಿ ಟೋಲ್ ಕಡಿತ ಹೇಗೆ ಎಂಬುದನ್ನು ವಿವರಿಸಿದ ಅಧಿಕಾರಿ, ಹೆದ್ದಾರಿಯನ್ನು ಜಿಯೋ ಫೆನ್ಸಿಂಗ್ ಮಾಡಲಾಗುವುದು. ವಾಹನವು ಹೆದ್ದಾರಿಯನ್ನು ಪ್ರವೇಶಿಸಿದ ನಂತರ, ವಾಹನದಲ್ಲಿ ಅಳವಡಿಸಲಾಗಿರುವ ಜಿಪಿಎಸ್ ಸಾಧನದ ಮೂಲಕ ಸಾಫ್ಟ್‌ವೇರ್ ಅದನ್ನು ಪತ್ತೆಮಾಡುತ್ತದೆ. ವಾಹನವು ಹೆದ್ದಾರಿಯಿಂದ ನಿರ್ಗಮಿಸಿದ ನಂತರ, ಅದು ಪ್ರವೇಶಿಸಿದ ಮತ್ತು ನಿರ್ಗಮಿಸಿದ ವ್ಯಾಪ್ತಿಯ ಪ್ರಯಾಣದ ದೂರವನ್ನು ಲೆಕ್ಕಹಾಕುತ್ತದೆ ಮತ್ತು ಅಸ್ತಿತ್ವದಲ್ಲಿರುವ ವ್ಯವಸ್ಥೆಯ ಅಡಿಯಲ್ಲಿ ಟೋಲ್ ಕಡಿತ ಮಾಡುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಟ್ರಾಫಿಕ್ ಕಡಿಮೆ ಮಾಡಲು ಸಿದ್ಧವಾಗಲಿವೆ 17 ಸಿಗ್ನಲ್ ಮುಕ್ತ ಕಾರಿಡಾರ್‌ಗಳು

ವಾಹನಗಳಿಗೆ ಜಿಪಿಎಸ್ ಕಡ್ಡಾಯ

ಜಿಎನ್​ಎಸ್​ಎಸ್ ಟೋಲ್ ಸಂಗ್ರಹಣೆಯೊಂದಿಗೆ, ವಾಹನಗಳಿಗೆ ಜಿಪಿಎಸ್ ಸಾಧನ ಅಳವಡಿಸುವುದು ಕಡ್ಡಾಯವಾಗಲಿದೆ. ಹೆದ್ದಾರಿ ಪ್ರಾಧಿಕಾರವು ಸದ್ಯ ನಂಬರ್ ಪ್ಲೇಟ್‌ಗಳ ಮೂಲಕ ಟೋಲ್ ಸಂಗ್ರಹಿಸುವ ಆಯ್ಕೆಗಳನ್ನೂ ಅನ್ವೇಷಿಸುತ್ತಿದೆ. ಒಂದು ವೇಳೆ ಇದು ಯಶಸ್ವಿಯಾದಲ್ಲಿ, ವಾಹನಗಳು ಜಿಪಿಎಸ್ ಸಾಧನವನ್ನು ಹೊಂದಿರಬೇಕಾಗಿಲ್ಲ. ಆಗ ಸ್ವಯಂಚಾಲಿತ ನಂಬರ್ ಪ್ಲೇಟ್ ರೆಕಗ್ನಿಷನ್ ಕ್ಯಾಮೆರಾಗಳನ್ನು ಬಳಸಿಕೊಂಡು ಪ್ರವೇಶ ಮತ್ತು ನಿರ್ಗಮನವನ್ನು ಲೆಕ್ಕಹಾಕಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:13 am, Tue, 30 July 24

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ