AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru-Mysuru Expressway: ಟೋಲ್ ದರ ಹೆಚ್ಚಳ ಖಂಡಿಸಿ ಜೂ.24 ರಂದು ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಟೋಲ್ ದರ ಹೆಚ್ಚಳಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ವಾಹನ ಚಾಲಕರು ಕೇಂದ್ರ ಸರ್ಕಾರದ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ. ಅಲ್ಲದೇ ಟೋಲ್​ ದರ ಏರಿಕೆಯನ್ನು ಖಂಡಿಸಿ ಕನ್ನಡ ಸಂಘಟನೆಗಳು ಪ್ರತಿಭಟನೆ ಮಾಡಲು ನಿರ್ಧರಿಸಿವೆ.

Bengaluru-Mysuru Expressway: ಟೋಲ್ ದರ ಹೆಚ್ಚಳ ಖಂಡಿಸಿ ಜೂ.24 ರಂದು ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on: Jun 23, 2023 | 3:32 PM

Share

ಬೆಂಗಳೂರು: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ (Bengaluru-Mysuru Expressway) ಟೋಲ್ ದರ ಹೆಚ್ಚಳ ಖಂಡಿಸಿ ನಾಳೆ (ಜೂ.24) ರಂದು ರಸ್ತೆ ಬಂದ್​ (Band) ಮಾಡಿ ಬೆಳಿಗ್ಗೆ 10:30 ರಿಂದ ಸಂಜೆ 6 ಗಂಟೆಯವರೆಗೆ ಕಣ್ಮಿಣಿಕೆ ಟೋಲ್ (Kanaminike Toll) ಮುಂಭಾಗ ಪ್ರತಿಭಟನೆ ನಡೆಸಲು ಕನ್ನಡಪರ ಸಂಘಟನೆಗಳು (Kannadapar Sangatanegalu) ನಿರ್ಧರಿಸಿವೆ. ಶನಿವಾರದ ಪ್ರತಿಭಟನೆಯಲ್ಲಿ ಕನ್ನಡಪರ ಸಂಘಟನೆಗಳು, ಚಾಲಕಪರ ಹಾಗೂ ರೈತಪರ ಸಂಘಟನೆಗಳ ನೂರಾರು ಕಾರ್ಯಕರ್ತರು ಭಾಗಿಯಾಗಲಿದ್ದಾರೆ.

ಟೋಲ್​ ದರ ಎಷ್ಟು ಏರಿಕೆ

ಕಾರು, ವ್ಯಾನ್‌, ಜೀಪ್‌ ಏಕಮುಖ ಸಂಚಾರಕ್ಕೆ 135 ರಿಂದ 165ಕ್ಕೆ (30 ರೂ.) ಏರಿಕೆಯಾಗಿದ್ದು, ಲಘು ವಾಹನಗಳು, ಮಿನಿ ಬಸ್‌ಗಳ ಏಕಮುಖ ಸಂಚಾರಕ್ಕೆ 220 ರಿಂದ 270ಕ್ಕೆ (50 ರೂ.) ಏರಿಕೆಯಾಗಿದೆ. ಟ್ರಕ್‌, ಬಸ್, 2 ಆ್ಯಕ್ಸೆಲ್‌ ವಾಹನ ಏಕಮುಖ ಸಂಚಾರಕ್ಕೆ 460 ರಿಂದ 565 ರೂ. (105 ರೂ.) ಹೆಚ್ಚಳ ವಾಗಿದೆ.

3 ಆ್ಯಕ್ಸೆಲ್‌ ವಾಹನಗಳ ಏಕಮುಖ ಸಂಚಾರಕ್ಕೆ 500 ರಿಂದ 615ಕ್ಕೆ ಏರಿಕೆ (115 ರೂ.), ಭಾರಿ ವಾಹನಗಳ ಏಕಮುಖ ಸಂಚಾರಕ್ಕೆ 720 ರಿಂದ 885ಕ್ಕೆ (165 ರೂ.), 7 ಅಥವಾ ಅದಕ್ಕಿಂತ ಹೆಚ್ಚಿನ ಆ್ಯಕ್ಸೆಲ್‌ ವಾಹನಗಳ ಸಂಚಾರಕ್ಕೆ 880 ರಿಂದ 1,080ಕ್ಕೆ (200 ರೂ.) ಹೆಚ್ಚಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು- ಮೈಸೂರು ಮಾರ್ಗದ ರೈಲುಗಳು ನಾಯಂಡಹಳ್ಳಿಯಲ್ಲಿ ನಿಲುಗಡೆಗೆ ಗ್ರೀನ್​ ಸಿಗ್ನಲ್​, ಬಹುದಿನಗಳ ಬೇಡಿಕೆ ಈಡೇರಿಕೆ

ಟೋಲ್​ ದರ ಸಮರ್ಥಿಸಿಕೊಂಡಿದ್ದ ಸಂಸದ ಪ್ರತಾಪ್​ ಸಿಂಹ

ಇನ್ನು ಟೋಲ್​ ದರ ಏರಿಕೆಯನ್ನು ಸಂಸದ ಪ್ರತಾಪ್​ ಸಿಂಹ ಸಮರ್ಥಿಸಿಕೊಂಡಿದ್ದರು. ಇಡೀ ದೇಶದಲ್ಲಿ ಆರ್ಥಿಕ ವರ್ಷ ಶುರುವಾದಾಗ ಟೋಲ್ ಹೆಚ್ಚಳ ಸಹಜ. ಈ ಹೈವೆಗೆ ಏಪ್ರಿಲ್​ನಲ್ಲಿ ಟೋಲ್ ದರ ಏರಿಕೆಯಾಗಬೇಕಿತ್ತು. ಆಗ ಆಗಿರಲಿಲ್ಲ. ಈಗ ಶೇ.22ರಷ್ಟು ಏರಿಕೆಯಾಗಿದೆ. ಹಾಗೂ ಟೋಲ್ ಸಂಗ್ರಹದ ಆರಂಭದಲ್ಲಿ ಫಾಸ್ಟ್​​ ಟ್ಯಾಗ್ ಸಮಸ್ಯೆ ಇತ್ತು, ಈಗ ಸಮಸ್ಯೆ ಇಲ್ಲ. ಫಾಸ್ಟ್​ ಟ್ಯಾಗ್ ಇರದಿದ್ದರೆ ಡಬಲ್ ಚಾರ್ಜ್ ಕಟ್ಟುವುದು ಕಡ್ಡಾಯವಾಗಿದೆ ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್