ಬೆಂಗಳೂರು: ನಗರ್ತಪೇಟೆ ಅಗ್ನಿ ಅವಘಡ, ಕಟ್ಟಡ ಮಾಲೀಕ ಸೇರಿ ಇಬ್ಬರ ಬಂಧನ

ಬೆಂಗಳೂರಿನ ನಗರ್ತಪೇಟೆಯ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೆ ಸಂಬಂಧಿಸಿ ಕಟ್ಟಡದ ಮಾಲೀಕ ಮತ್ತು ಆತನ ಪುತ್ರನನ್ನು ಹಲಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ನಿಯಮಗಳನ್ನು ಉಲ್ಲಂಘಿಸಿ ಹೆಚ್ಚು ಮಹಡಿಗಳ ಕಟ್ಟಡ ಕಟ್ಟಿದ ಆರೋಪ ಕೇಳಿ ಬಂದಿದೆ. ಅಲ್ಲದೆ, ಕಟ್ಟಡದಲ್ಲಿ ಇಕ್ಕಟ್ಟಿನ ಜಾಗ ಇದ್ದುದರಿಂದ ರಕ್ಷಣೆಗೆ ಅಡ್ಡಿಯಾಗಿತ್ತು ಎನ್ನಲಾಗಿದೆ.

ಬೆಂಗಳೂರು: ನಗರ್ತಪೇಟೆ ಅಗ್ನಿ ಅವಘಡ, ಕಟ್ಟಡ ಮಾಲೀಕ ಸೇರಿ ಇಬ್ಬರ ಬಂಧನ
ನಗರ್ತಪೇಟೆ ಅಗ್ನಿ ಅವಘಡ

Updated on: Aug 18, 2025 | 9:24 AM

ಬೆಂಗಳೂರು, ಆಗಸ್ಟ್ 18: ಬೆಂಗಳೂರಿನ (Bengaluru) ಕೆ.ಆರ್. ಮಾರುಕಟ್ಟೆ ಬಳಿಯ ನಗರ್ತಪೇಟೆಯಲ್ಲಿ ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಐವರು ಮೃತಪಟ್ಟ ಘಟನೆ ಸಂಬಂಧ ಕಟ್ಟಡದ ಮಾಲೀಕ ಮತ್ತು ಆತನ ಮಗನನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಅನಧಿಕೃತವಾಗಿ ನಿರ್ಮಾಣ ಕಾಮಗಾರಿ ಮಾಡಿರುವುದು, ಸುರಕ್ಷತಾ ಕ್ರಮಗಳ ಕೊರತೆ ಮತ್ತು ಅಗ್ನಿ ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಷ್ಠಾನಗೊಳಿಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದಕ್ಕಾಗಿ ಕಟ್ಟಡ ಮಾಲೀಕ ಬಾಲಕೃಷ್ಣಯ್ಯ ಶೆಟ್ಟಿ ಮತ್ತು ಅವರ ಪುತ್ರ ಸಂದೀಪ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಶನಿವಾರ ನಸುಕಿನಲ್ಲಿ 2.30 ರ ಸುಮಾರಿಗೆ ಕಟ್ಟಡದ ನೆಲಮಹಡಿಯಲ್ಲಿ ಹೊತ್ತಿಕೊಂಡಿದ್ದ ಬೆಂಕಿ ಬಹುಬೇಗನೆ ಮೇಲಿನ ಮಹಡಿಗೆ ವ್ಯಾಪಿಸಿತ್ತು. ಘಟನೆಯಲ್ಲಿ ಐವರು ಮೃತಪಟ್ಟಿದ್ದರು. ಅದೃಷ್ಟವಶಾತ್, ಕಟ್ಟಡದಲ್ಲಿದ್ದ ಹೆಚ್ಚಿವರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು.

ಕಟ್ಟಡದ ಮೂರನೇ ಮಹಡಿಯಲ್ಲಿ ಕುಟುಂಬವೊಂದು ವಾಸವಿತ್ತು. ದುರದೃಷ್ಟವಶಾತ್ ಆ ಕುಟುಂಬದ ಮದನ್ ಸಿಂಗ್ (38) ಮತ್ತು ಅವರ ಪತ್ನಿ ಸಂಗೀತಾ (33) ಮತ್ತು ಅವರ ಇಬ್ಬರು ಮಕ್ಕಳಾದ ಮಿಥೇಶ್ (7) ಮತ್ತು ವಿಹಾನ್ (5) ಮತ್ತು ಅವರ ನೆರೆಯ ಸುರೇಶ್ ಕುಮಾರ್ (26) ಮೃತಪಟ್ಟಿದ್ದರು. ಮದನ್ ಸಿಂಗ್ ರಾಜಸ್ಥಾನದವರಾಗಿದ್ದು, ಸುಮಾರು 10 ವರ್ಷಗಳಿಂದ ಕಟ್ಟಡವನ್ನು ಬಾಡಿಗೆಗೆ ಪಡೆದು ವಾಸವಿದ್ದರು.

ಇದನ್ನೂ ಓದಿ
ಕೆಆರ್​ಎಸ್ ಡ್ಯಾಂನಿಂದ ಬರೋಬ್ಬರಿ 50 ಸಾವಿರ ಕ್ಯೂಸೆಕ್ ನೀರು ಬಿಡುಗಡೆ!
ಯೆಲ್ಲೋ ಲೈನ್ ಮೆಟ್ರೋ ನಿಲ್ದಾಣಗಳಲ್ಲಿ ಕುರ್ಚಿ ವ್ಯವಸ್ಥೆಯೇ ಇಲ್ಲ!
ಬೆಂಗಳೂರು ಅಗ್ನಿ ದುರಂತ: ಪರಮೇಶ್ವರ್​ ಹೇಳಿದ್ದಿಷ್ಟು
ಬೆಂಗಳೂರು: ಕೃಷ್ಣ ಜನ್ಮಾಷ್ಟಮಿಯಂದೇ ಅಗ್ನಿ ಅವಘಡ, ಐವರು ಸಾವು

ಅವರು ಪ್ಲಾಸ್ಟಿಕ್ ಸಾಮಗ್ರಿಗಳು ಹಾಗೂ ಚಾಪೆಗಳು ಮತ್ತು ಉಕ್ಕಿನ ಅಡುಗೆ ಪಾತ್ರೆಗಳನ್ನು ತಯಾರಿಸುವ ಸಣ್ಣ ಉತ್ಪಾದನಾ ಘಟಕವನ್ನು ನಡೆಸುತ್ತಿದ್ದರು. ಅವರ ಕುಟುಂಬ ಕಟ್ಟಡದ ಮೇಲಿನ ಮಹಡಿಯಲ್ಲಿ ವಾಸಿಸುತ್ತಿದ್ದರು. ಸದ್ಯ, ಕಟ್ಟಡದ ಮಾಲೀಕ ಹಾಗೂ ಆತನ ಮಗನನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಕೃಷ್ಣ ಜನ್ಮಾಷ್ಟಮಿಯಂದೇ ಅಗ್ನಿ ಅವಘಡ, ಐವರು ಸಾವು

30/40 ಜಾಗದಲ್ಲಿ ನಿಯಮ ಉಲ್ಲಂಘಿಸಿ ಐದಾರು ಅಂತಸ್ತುಗಳ ಕಟ್ಟಡ ಕಟ್ಟಿದ್ದಾರೆ. ತುಂಬಾ ಚಿಕ್ಕ ಜಾಗ ಆಗಿರುವುದರಿಂದ ರಕ್ಷಣೆಯೂ ಕಷ್ಟವಾಗಿತ್ತು ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಗೃಹ ಸಚಿವ ಡಾ. ಜಿ ಪರಮೇಶ್ವರ ಭಾನುವಾರ ಹೇಳಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ