AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಆಗಸ್ಟ್ 15 ರಂದು ಮೆಟ್ರೋ ಪ್ರಯಾಣ ದರ 30 ರೂ. ನಿಗದಿ ಮಾಡಿದ ಬಿಎಂಆರ್​ಸಿಎಲ್

76 ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಬೆಂಗಳೂರು ನಮ್ಮ ಮೆಟ್ರೋ ಪೇಪರ್ ಟಿಕೆಟ್ ಪರಿಚಯಿಸಿದೆ. ಅಲ್ಲದೆ, ಫಲಪುಷ್ಪ ಪ್ರದರ್ಶನ ಹಿನ್ನೆಲೆ ಲಾಲ್​ಬಾಗ್​ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಟಿಕೆಟ್ ದರವನ್ನು 30 ರೂಪಾಯಿಗೆ ನಿಗದಿ ಮಾಡಿದೆ.

ಬೆಂಗಳೂರು: ಆಗಸ್ಟ್ 15 ರಂದು ಮೆಟ್ರೋ ಪ್ರಯಾಣ ದರ 30 ರೂ. ನಿಗದಿ ಮಾಡಿದ ಬಿಎಂಆರ್​ಸಿಎಲ್
ಆಗಸ್ಟ್ 15 ರಂದು ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ಬರುವವರ ಅನೂಕೂಲಕ್ಕಾಗಿ ಬಿಎಂಆರ್​ಸಿಎಲ್ ಮೆಟ್ರೋ ಪ್ರಯಾಣದ ದರ 30 ರೂ. ನಿಗದಿ ಮಾಡಿದೆ
ಕಿರಣ್​ ಸೂರ್ಯ
| Edited By: Rakesh Nayak Manchi|

Updated on: Aug 11, 2023 | 7:40 PM

Share

ಬೆಂಗಳೂರು, ಆಗಸ್ಟ್ 11: ಸ್ವಾತಂತ್ರ್ಯ ದಿನಾಚರಣೆಯಂದು (Independence Day) ಫಲಪುಷ್ಪ ಪ್ರದರ್ಶನ (Flower Show) ವೀಕ್ಷಣೆಗೆ ಬರುವ ಸಾರ್ವಜನಿಕರ ಅನುಕೂಲಕ್ಕಾಗಿ ಬೆಂಗಳೂರು ನಮ್ಮ ಮೆಟ್ರೋ ಸಂಸ್ಥೆ, ಪೇಪರ್ ಟಿಕೆಟ್ ಪರಿಚಯಿಸಿದೆ. ಅದರಂತೆ, ಲಾಲ್​ಬಾಗ್ ನಿಲ್ದಾಣದಿಂದ (Lal Bagh Metro Station) ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಟಿಕೆಟ್ ದರವನ್ನು 30 ರೂಪಾಯಿಗೆ ನಿಗದಿ ಮಾಡಿದೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ ಬಿಎಂಆರ್​ಸಿಎಲ್, ಲಾಲ್‌ ಬಾಗ್‌ನಲ್ಲಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಬರುವ ಸಾರ್ವಜನಿಕ ಪ್ರಯಾಣಕ್ಕೆ ಅನುಕೂಲವಾಗಲೆಂದು ನಮ್ಮ ಮೆಟ್ರೋ 15ರ ಆಗಸ್ಟ್ ಮಂಗಳವಾರ ಸ್ವಾತಂತ್ರ್ಯ ದಿನಾಚರಣೆದಂದು ಲಾಲ್‌ಬಾಗ್‌ನಿಂದ ಪ್ರಯಾಣಿಸಲು ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳನ್ನು ಪರಿಚಯಿಸಲಿದೆ ಎಂದು ತಿಳಿಸಿದೆ.

ಇದನ್ನೂ ಓದಿ: Bengaluru Traffic advisory: ಲಾಲ್​ಬಾಗ್ ಫಲಪುಷ್ಪ ಪ್ರದರ್ಶನ; ವಾಹನ ನಿಲುಗಡೆ, ಪಾರ್ಕಿಂಗ್ ನಿಷೇಧಿತ ಸ್ಥಳಗಳ ಮಾಹಿತಿ ಇಲ್ಲಿದೆ

15 ರಂದು ಬೆಳಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಲಾಲ್‌ಬಾಗ್‌ ಮೆಟ್ರೋ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಟಿಕೆಟ್ ದರವನ್ನು 30 ರುಪಾಯಿಗೆ ನಿಗಧಿಪಡಿಸಲಾಗಿದೆ. ಪೇಪರ್ ಟಿಕೆಟ್ ಆ ದಿನದ ಒಂದು ಪ್ರಯಾಣಕ್ಕೆ ಮಾತ್ರ ಮಾನ್ಯವಾಗಿರುತ್ತದೆ ಎಂದು ಬಿಎಂಆರ್​ಸಿಎಲ್ ತಿಳಿಸಿದೆ.

ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಎಲ್ಲ ಮೆಟ್ರೋ ನಿಲ್ದಾಣಗಲ್ಲಿ ಖರೀದಿಸಬಹುದಾಗಿದೆ. ಲಾಲ್‌ಬಾಗ್ ಮೆಟ್ರೋ ನಿಲ್ದಾಣದಲ್ಲಿ ಸದರಿ ಪೇಪರ್ ಟಿಕೆಟ್ ರಾತ್ರಿ 8 ಗಂಟೆಯವರೆಗೆ ಲಭ್ಯವಿರುತ್ತದೆ ಎಂದು ಬಿಎಂಆರ್​ಸಿಎಲ್ ತಿಳಿಸಿದೆ.

ಮೆಟ್ರೋ ಪಯಾಣಿಕರು ಲಾಲ್‌ಬಾಗ್ ನಿಲ್ದಾಣದ ಎಎಫ್​​ಸಿ ಗೇಟ್‌ಗಳಲ್ಲಿ ಪುವೇಶಿಸಲು ಹಾಗೂ ಯಾವುದೇ ನಿಲ್ದಾಣದಿಂದ ನಿರ್ಗಮಿಸಲು ಪೇಪರ್ ಟಿಕೆಟ್‌ಗಳನ್ನು ಹಾಜರಿಪಡಿಸಬೇಕಾಗುತ್ತದೆ. ನಮ್ಮ ಮೆಟ್ರೋ ಪಯಾಣಿಕರ ಸುಗಮ ಪ್ರಯಾಣಕ್ಕಾಗಿ ಈ ಸೌಲಭ್ಯವನ್ನು ಬಳಸಿಕೊಳ್ಳಬೇಕೆಂದು ಬಿಎಂಆರ್​ಸಿಎಲ್ ಮನವಿ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್