AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಭದ ಹಾದಿಗೆ ಮರಳಿದ ನಮ್ಮ ಮೆಟ್ರೋ: 9 ತಿಂಗಳಲ್ಲಿ ಬರೋಬ್ಬರಿ 450 ಕೋಟಿ ರೂ. ಆದಾಯ

ಜೂನ್, ಜುಲೈ, ಆಗಸ್ಟ್, ಸೆಪ್ಟೆಂಬರ್ ವರೆಗೆ 4 ತಿಂಗಳಿನಲ್ಲಿ ನಮ್ಮ ಮೆಟ್ರೋಗೆ ಬರೋಬ್ಬರಿ 8 ಕೋಟಿ ರೂಪಾಯಿ ನಷ್ಟವಾಗಿತ್ತು. ಆದರೆ, ಅಕ್ಟೋಬರ್ ಬಳಿಕ ಬಿಎಂಆರ್​​​​ಸಿಎಲ್ ನಷ್ಟದಿಂದ ಲಾಭಕ್ಕೆ ಮರಳಿದೆ. ಅಕ್ಟೋಬರ್​​ನಲ್ಲಿ 6.8 ಕೋಟಿ ರೂ., ನವೆಂಬರ್ ಹಾಗೂ ಡಿಸೆಂಬರ್‌ನಲ್ಲಿ ತಲಾ 4 ಕೋಟಿ ರೂ. ಲಾಭ ಆಗಿದೆ.

ಲಾಭದ ಹಾದಿಗೆ ಮರಳಿದ ನಮ್ಮ ಮೆಟ್ರೋ: 9 ತಿಂಗಳಲ್ಲಿ ಬರೋಬ್ಬರಿ 450 ಕೋಟಿ ರೂ. ಆದಾಯ
ನಮ್ಮ ಮೆಟ್ರೋ
ಕಿರಣ್​ ಸೂರ್ಯ
| Edited By: |

Updated on: Jan 11, 2024 | 10:09 AM

Share

ಬೆಂಗಳೂರು, ಜನವರಿ 11: ನಷ್ಟದಲ್ಲಿ ಸಾಗುತ್ತಿರುವ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ನಡುವೆ ನಮ್ಮ ಮೆಟ್ರೋ ಲಾಭದ ಹಳಿಗೆ ಮರಳಿದೆ. ಮೊದಲ ಬಾರಿಗೆ ನಷ್ಟದ ಹಾದಿಯಿಂದ ಲಾಭದ ಹಾದಿಗೆ ಬಂದಿರುವ ನಮ್ಮ ಮೆಟ್ರೋ, ಕಳೆದ 9 ತಿಂಗಳಿನಲ್ಲಿ ಬಿಎಂಆರ್​ಸಿಎಲ್​​ಗೆ (BMRCL) ಬರೊಬ್ಬರಿ 450 ಕೋಟಿ ರೂ. ಆದಾಯ ಗಳಿಸಿಕೊಟ್ಟಿದೆ. ಮೆಟ್ರೋ ಜಾಲ ವಿಸ್ತರಣೆ, ನಿಲ್ದಾಣ ಹಾಗೂ ರೈಲಿನ ಒಳಗೆ ಜಾಹೀರಾತಿಗೆ ಅವಕಾಶ ನೀಡಿರುವುದು ಆದಾಯ ಏರಿಕೆಗೆ ನೆರವಾಗಿದೆ ಎನ್ನಲಾಗಿದೆ.

ನಮ್ಮ ಮೆಟ್ರೋ ಏಪ್ರಿಲ್​​​ನಿಂದ ಡಿಸೆಂಬರ್​​​ವರೆಗೆ ಜಾಹೀರಾತಿನ‌ ಮೂಲಕ ಬರೊಬ್ಬರಿ 50 ಕೋಟಿ‌ ರೂ. ಆದಾಯ ಗಳಿಸಿದೆ. ಮೆಟ್ರೋ ಜಾಲ ವಿಸ್ತರಣೆಯಿಂದ ಟಿಕೆಟ್ ಮೂಲಕ ಸಿಗುವ ಆದಾಯವೂ ಹೆಚ್ಚಾಗಿದೆ. ಕೇವಲ ಟಿಕೆಟ್ ಮಾರಾಟದಿಂದಲೇ ನಮ್ಮ ಮೆಟ್ರೋಗೆ 9 ತಿಂಗಳಿನಲ್ಲಿ 400 ಕೋಟಿ‌ ಆದಾಯ ದೊರೆತಿದೆ.

ಕಳೆದ ಮಾರ್ಚ್​​ನಲ್ಲಿ ಐಟಿ ಕಾರಿಡರ್​​ಗೆ‌ ಸಂಪರ್ಕ ಕಲ್ಪಿಸುವ ಮೆಟ್ರೋ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದರು. ಕೆ.ಆರ್. ಪುರದಿಂದ ವೈಟ್ ಫಿಲ್ಡ್ ಮಾರ್ಗಕ್ಕೆ ಚಾಲನೆ ನೀಡಲಾಗಿತ್ತು. ಪ್ರಯಾಣಿಕರ‌‌ ಸಂಖ್ಯೆ ಹೆಚ್ಚಳವಾದರೂ, ಬೈಯಪ್ಪನಹಳ್ಳಿಯಿಂದ ಕೆ.ಆರ್ ಪುರಕ್ಕೆ ಕನೆಕ್ಟಿವಿಟಿ ಇಲ್ಲದೆ ತೊಂದರೆ ಆಗುತ್ತಿತ್ತು. ಆದರೆ, ಅಕ್ಟೋಬರ್​​​ನಲ್ಲಿ ಬೈಯಪ್ಪನಹಳ್ಳಿಯಿಂದ ಕೆ.ಆರ್ ಪುರ ಮೆಟ್ರೋ ಮಾರ್ಗಕ್ಕೆ ಚಾಲನೆ ದೊರೆತಿದೆ. ನಂತರ ಐಟಿ ಕಾರಿಡಾರ್​​ನಲ್ಲಿ ಪ್ರಯಾಣಿಕರ ಓಡಾಟ ಹೆಚ್ಚಳವಾಗಿದೆ.

ಜೂನ್, ಜುಲೈ, ಆಗಸ್ಟ್, ಸೆಪ್ಟೆಂಬರ್ ವರೆಗೆ 4 ತಿಂಗಳಿನಲ್ಲಿ ನಮ್ಮ ಮೆಟ್ರೋಗೆ ಬರೋಬ್ಬರಿ 8 ಕೋಟಿ ರೂಪಾಯಿ ನಷ್ಟವಾಗಿತ್ತು. ಆದರೆ, ಅಕ್ಟೋಬರ್ ಬಳಿಕ ಬಿಎಂಆರ್​​​​ಸಿಎಲ್ ನಷ್ಟದಿಂದ ಲಾಭಕ್ಕೆ ಮರಳಿದೆ. ಅಕ್ಟೋಬರ್​​ನಲ್ಲಿ 6.8 ಕೋಟಿ ರೂ., ನವೆಂಬರ್ ಹಾಗೂ ಡಿಸೆಂಬರ್‌ನಲ್ಲಿ ತಲಾ 4 ಕೋಟಿ ರೂ. ಲಾಭ ಆಗಿದೆ.

ಇದನ್ನೂ ಓದಿ: ಬೆಂಗಳೂರಿಗರೇ ಹುಷಾರ್, ನೀವು ಓಡಾಡ್ತಿರುವ ಜಾಗ ಎಷ್ಟು ಸೇಫ್? ಬೆಸ್ಕಾಂ ವ್ಯಾಪ್ತಿಯಲ್ಲಿವೇ 30,243 ಅಪಾಯಕಾರಿ ಸ್ಥಳಗಳು

ಮೆಟ್ರೋ ಫಿಡರ್ ಬಸ್ ಹೆಚ್ಚಳ ಮಾಡಿದ್ದು ಕೂಡ ಪ್ರಯಾಣಿಕರ ಹೆಚ್ಚಳಕ್ಕೆ ಕಾರಣವಾಗಿದೆ. 2023ರ ಜನವರಿಯಲ್ಲಿ ಪ್ರತಿ ನಿತ್ಯ ಸುಮಾರು 5.32 ಲಕ್ಷ ಜನರು ಪ್ರಯಾಣ ಮಾಡುತ್ತಿದ್ದರು. ಬೆಂಗಳೂರಿನಲ್ಲಿ ವರ್ಷದಿಂದ ವರ್ಷಕ್ಕೆ ಮೆಟ್ರೋ ಪ್ರಯಾಣಿಕರ ಸಂಖ್ಯೆ ಏರಿಕೆ ಆಗುತ್ತಿದೆ. ಪ್ರಯಾಣಿಕರ ಸಂಖ್ಯೆಯಲ್ಲಿ ಕಳೆದ ಒಂದೇ ವರ್ಷದಲ್ಲಿ ಸುಮಾರು ಶೇಕಡಾ 30 ರಷ್ಟು ಏರಿಕೆಯಾಗಿದೆ. ಈಗ ಪ್ರತಿನಿತ್ಯ ಸರಾಸರಿ 6.88 ಲಕ್ಷ ಪ್ರಯಾಣಿಕರು ಮೆಟ್ರೋದಲ್ಲಿ ಸಂಚರಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ