AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋ ಅಧಿಕಾರಿಯಿಂದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ; FIR ದಾಖಲು

ನಮ್ಮ ಮೆಟ್ರೋ ಮಹಿಳಾ ಸಿಬ್ಬಂದಿಗೆ ಕಿರುಕುಳ ನೀಡಿದ್ದಲ್ಲದೇ ಅಶ್ಲೀಲ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಗೆ ಮಹಿಳಾ ಸಿಬ್ಬಂದಿ ರಾಜಾಜಿನಗರದ ಮೆಟ್ರೋ ನಿಲ್ದಾಣದ Assistant Section Officer ಗಜೇಂದ್ರ.ಪಿ ಅವರ ವಿರುದ್ಧ ದೂರು ನೀಡಿದ್ದು ಎಫ್​ಐಆರ್​ ದಾಖಲಾಗಿದೆ.

ಮೆಟ್ರೋ ಅಧಿಕಾರಿಯಿಂದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ; FIR ದಾಖಲು
ನಮ್ಮ ಮೆಟ್ರೋ
Kiran Surya
| Updated By: ಆಯೇಷಾ ಬಾನು|

Updated on:Mar 16, 2024 | 1:04 PM

Share

ಬೆಂಗಳೂರು, ಮಾರ್ಚ್​.16: ನಗರದ ಮೆಟ್ರೋ ರೈಲಿನಲ್ಲಿ (Namma Metro) ಮಹಿಳಾ ಪ್ರಯಾಣಿಕರಿಗೆ ಸುರಕ್ಷತೆ ಇಲ್ಲ, ಕಿರುಕುಳ ಪ್ರಕರಣಗಳು ಹೆಚ್ಚಾಗಿವೆ ಎಂಬ ಬಗ್ಗೆ ವರದಿಗಳು ಬರುತ್ತಿವೆ. ಆದರೆ ಇದೀಗ ಮೆಟ್ರೋ ಅಧಿಕಾರಿಯಿಂದಲೇ ಮಹಿಳಾ ಸೆಕ್ಯೂರಿಟಿಗಳಿಗೆ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಮಹಿಳಾ ಭದ್ರತಾ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರೋ ಬಗ್ಗೆ ರಾಜಾಜಿನಗರದ ಮೆಟ್ರೋ ನಿಲ್ದಾಣದ Assistant Section Officer ಗಜೇಂದ್ರ.ಪಿ ಅವರ ಮೇಲೆ ದೂರು ದಾಖಲಾಗಿದೆ. ಸುಬ್ರಮ್ಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ಗಜೇಂದ್ರ. ಪಿ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಮಹಿಳಾ ಸಿಬ್ಬಂದಿಗಳಿಗೆ ಅಶ್ಲೀಲ ಪದಗಳಿಂದ ನಿಂದಿಸೋದಲ್ಲದೆ, ಮೈಕೈ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ. ಸಹಕರಿಸದ ಮಹಿಳೆಯರಿಗೆ ಬೇರೆ ಕಡೆ ವರ್ಗಾವಣೆ ಮಾಡುವುದಾಗಿ ಬೆದರಿಕೆ‌ ಹಾಕಿದ್ದಾರೆ ಎಂಬ ಆರೋಪ ಕೂಡ ಗಜೇಂದ್ರ ವಿರುದ್ಧ ಕೇಳಿ ಬಂದಿದೆ. ಸೆಕ್ಯೂರಿಟಿ ಏಜೆನ್ಸಿ ಮಾಲೀಕನಿಂದಲೂ ಸಹಕರಿಸುವಂತೆ ಒತ್ತಾಯ ಮಾಡಿದ ಆರೋಪ ಕೇಳಿ ಬಂದಿದೆ. ಸಹಕರಿಸಿ ಇಲ್ಲ ಕೆಲಸದಿಂದ ತೆಗೆಯುತ್ತೇನೆ ಅಂತಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಮಹಿಳಾ ಸಿಬ್ಬಂದಿ ಬಿಎಂಆರ್​ಸಿಎಲ್ ಹಿರಿಯ ಅಧಿಕಾರಿಗಳಿಗೂ ದೂರು ನೀಡಿದ್ದಾರೆ.

ಇದನ್ನೂ ಓದಿ: ನಮ್ಮ ಮೆಟ್ರೋದಲ್ಲಿ ಮತ್ತೊಂದು ಲೈಂಗಿಕ ಕಿರುಕುಳ ಪ್ರಕರಣ; ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ದುರ್ವರ್ತನೆ

ದೂರಿನಲ್ಲಿ ಏನಿದೆ?

ರಾಜಾಜಿನಗರದ ಮೆಟ್ರೋ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡ್ತಿರುವ ಮಹಿಳಾ ಸಿಬ್ಬಂದಿಗೆ ನಿಲ್ದಾಣದ ಎಎಸ್ಓ ಗಜೇಂದ್ರ.ಪಿ ನಿಂದಿಸಿದ್ದಾರೆ.  ಒತ್ತಾಯ ಪೂರ್ವಕವಾಗಿ ಮೈಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾರೆ. ವಿರೋಧ ವ್ಯಕ್ತಪಡಿಸಿದ್ರೆ ಸುಳ್ಳು ಕೇಸ್ ಹಾಕಿ ವರ್ಗಾವಣೆ ಮಾಡ್ತೀವಿ ಅಂತ ಬೆದರಿಸ್ತಾರೆ. ನಮ್ಮ ಏಜೆನ್ಸಿ ಮಾಲೀಕರಿಗೆ ದೂರು ನೀಡಿದ್ರೆ ಸಹಕರಿಸಿ, ಇಲ್ಲ ಕೆಲಸ ಬಿಡಿ ಅಂತಾರೇ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:04 pm, Sat, 16 March 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ