Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Metro: ಜುಲೈ 2ರಂದು ಬೆಳಗ್ಗೆ ಎರಡು ಗಂಟೆ ಕಾಲ ನೇರಳೆ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಇರಲ್ಲ

ಭಾನುವಾರ (ಜುಲೈ 02) ನೇರಳೆ ಮಾರ್ಗದಲ್ಲಿ ನಮ್ಮ ಮೆಟ್ರೋ(Metro Rail)ಸಂಚಾರ ತಾತ್ಕಾಲಿಕವಾಗಿ ಸ್ಥಗಿತವಾಗಲಿದೆ. ಕಾರಣವೇನು? ಈ ಬಗ್ಗೆ ಬಿಎಂಆರ್​ಸಿಎಲ್ ಪ್ರಕಟಣೆ ಹೊರಡಿಸಿದ್ದು, ಇದು ಈ ಕೆಳಗಿನಂತಿದೆ ನೊಡಿ.

Bangalore Metro: ಜುಲೈ 2ರಂದು ಬೆಳಗ್ಗೆ ಎರಡು ಗಂಟೆ ಕಾಲ ನೇರಳೆ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಇರಲ್ಲ
Follow us
Kiran Surya
| Updated By: ರಶ್ಮಿ ಕಲ್ಲಕಟ್ಟ

Updated on:Jun 30, 2023 | 3:22 PM

ಬೆಂಗಳೂರು: ನೇರಳೆ ಮಾರ್ಗದಲ್ಲಿ ಭಾನುವಾರ (ಜುಲೈ 02) ನಮ್ಮ ಮೆಟ್ರೋ(Metro Rail)ಸಂಚಾರ ತಾತ್ಕಾಲಿಕವಾಗಿ ಎರಡು ಗಂಟೆ ಸ್ಥಗಿತವಾಗಲಿದೆ. ಟ್ರಿನಿಟಿ-ಎಂ.ಜಿ ರಸ್ತೆ ಮೆಟ್ರೋ ನಡುವೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ MG ರಸ್ತೆ ಮೆಟ್ರೋದಿಂದ ಬೈಯಪ್ಪನಹಳ್ಳಿ ನಿಲ್ದಾಣದವರೆಗೆ ಭಾನುವಾರ ಎರಡು ಗಂಟೆಗಳ ಕಾಲ  ನಮ್ಮ ಮೆಟ್ರೋ ಸಂಚರಿಸುವುದಿಲ್ಲ. ಈ ಬಗ್ಗೆ ಇಂದು( ಜೂನ್ 30) ಬಿಎಂಆರ್​ಸಿಎಲ್ (BMRCL) ಪ್ರಕಟಣೆ ಮೂಲಕ ಮಾಹಿತಿ ನಿಡಿದೆ.

ಇದನ್ನೂ ಓದಿ: Employees Transfer: 2023-24ನೇ ಸಾಲಿನ ಸಾರ್ವತ್ರಿಕ ವರ್ಗಾವಣೆ ಅವಧಿ ವಿಸ್ತರಣೆ

ಬೆಂಗಳೂರು ಮೆಟ್ರೋ ರೈಲು ನಿಗಮವು ಜುಲೈ 2 ರಂದು (ಭಾನುವಾರ) ಟ್ರಿನಿಟಿ ಮತ್ತು ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ನೇರಳೆ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳುತ್ತಿದೆ. ಈ ಕಾಮಗಾರಿಯನ್ನು ನಿರ್ವಹಿಸಲು ನೇರಳೆ ಮಾರ್ಗದ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ಬೆಳಗ್ಗೆ 7 ಗಂಟೆಯಿಂದ 9 ಗಂಟೆ (ಎರಡು ಗಂಟೆ ಮಾತ್ರ) ಮೆಟ್ರೋ ಸಂಚಾರ ಇರುವುದಿಲ್ಲ. ಪ್ರಯಾಣಿಕರಿಗೆ ಇದರಿಂದಾಗುವ ಅನಾನುಕೂಲತೆಗೆ ನಮ್ಮ ಮೆಟ್ರೋ ವಿಷಾದಿಸಿದೆ ಎಂದು ಬಿಎಂಆರ್​ಸಿಎಲ್​ ಪ್ರಕಟಣೆಯಲ್ಲಿ ತಿಳಿಸಿದೆ.

ಕೆಂಗೇರಿ ಮತ್ತು ಎಂ.ಜಿ ರಸ್ತೆ, ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ಕೃಷ್ಣರಾಜಪುರ ಮತ್ತು ವೈಟ್ ಫೀಲ್ಡ್ (ಕಾಡುಗೋಡಿ) ವಿಭಾಗಗಳ ರೈಲುಗಳ ಸೇವೆಯು ಆಯಾ ಟರ್ಮಿನಲ್ ನಿಲ್ದಾಣಗಳಿಂದ ಬೆಳಿಗ್ಗೆ 07:00 ಗಂಟೆಗೆ ವೇಳಾಪಟ್ಟಿಯ ಪ್ರಕಾರ ಸಂಚರಿಸಲಿದೆ. ನಮ್ಮ ಮೆಟ್ರೋ ಪ್ರಯಾಣಿಕರು ಸದರಿ ಬದಲಾವಣೆಯನ್ನು ಗಮನಿಸಬೇಕೆಂದು ಕೋರಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 2:38 pm, Fri, 30 June 23

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​