AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Metro: ಜುಲೈ 2ರಂದು ಬೆಳಗ್ಗೆ ಎರಡು ಗಂಟೆ ಕಾಲ ನೇರಳೆ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಇರಲ್ಲ

ಭಾನುವಾರ (ಜುಲೈ 02) ನೇರಳೆ ಮಾರ್ಗದಲ್ಲಿ ನಮ್ಮ ಮೆಟ್ರೋ(Metro Rail)ಸಂಚಾರ ತಾತ್ಕಾಲಿಕವಾಗಿ ಸ್ಥಗಿತವಾಗಲಿದೆ. ಕಾರಣವೇನು? ಈ ಬಗ್ಗೆ ಬಿಎಂಆರ್​ಸಿಎಲ್ ಪ್ರಕಟಣೆ ಹೊರಡಿಸಿದ್ದು, ಇದು ಈ ಕೆಳಗಿನಂತಿದೆ ನೊಡಿ.

Bangalore Metro: ಜುಲೈ 2ರಂದು ಬೆಳಗ್ಗೆ ಎರಡು ಗಂಟೆ ಕಾಲ ನೇರಳೆ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಇರಲ್ಲ
ಕಿರಣ್​ ಸೂರ್ಯ
| Edited By: ರಶ್ಮಿ ಕಲ್ಲಕಟ್ಟ|

Updated on:Jun 30, 2023 | 3:22 PM

Share

ಬೆಂಗಳೂರು: ನೇರಳೆ ಮಾರ್ಗದಲ್ಲಿ ಭಾನುವಾರ (ಜುಲೈ 02) ನಮ್ಮ ಮೆಟ್ರೋ(Metro Rail)ಸಂಚಾರ ತಾತ್ಕಾಲಿಕವಾಗಿ ಎರಡು ಗಂಟೆ ಸ್ಥಗಿತವಾಗಲಿದೆ. ಟ್ರಿನಿಟಿ-ಎಂ.ಜಿ ರಸ್ತೆ ಮೆಟ್ರೋ ನಡುವೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ MG ರಸ್ತೆ ಮೆಟ್ರೋದಿಂದ ಬೈಯಪ್ಪನಹಳ್ಳಿ ನಿಲ್ದಾಣದವರೆಗೆ ಭಾನುವಾರ ಎರಡು ಗಂಟೆಗಳ ಕಾಲ  ನಮ್ಮ ಮೆಟ್ರೋ ಸಂಚರಿಸುವುದಿಲ್ಲ. ಈ ಬಗ್ಗೆ ಇಂದು( ಜೂನ್ 30) ಬಿಎಂಆರ್​ಸಿಎಲ್ (BMRCL) ಪ್ರಕಟಣೆ ಮೂಲಕ ಮಾಹಿತಿ ನಿಡಿದೆ.

ಇದನ್ನೂ ಓದಿ: Employees Transfer: 2023-24ನೇ ಸಾಲಿನ ಸಾರ್ವತ್ರಿಕ ವರ್ಗಾವಣೆ ಅವಧಿ ವಿಸ್ತರಣೆ

ಬೆಂಗಳೂರು ಮೆಟ್ರೋ ರೈಲು ನಿಗಮವು ಜುಲೈ 2 ರಂದು (ಭಾನುವಾರ) ಟ್ರಿನಿಟಿ ಮತ್ತು ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ನೇರಳೆ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳುತ್ತಿದೆ. ಈ ಕಾಮಗಾರಿಯನ್ನು ನಿರ್ವಹಿಸಲು ನೇರಳೆ ಮಾರ್ಗದ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ಬೆಳಗ್ಗೆ 7 ಗಂಟೆಯಿಂದ 9 ಗಂಟೆ (ಎರಡು ಗಂಟೆ ಮಾತ್ರ) ಮೆಟ್ರೋ ಸಂಚಾರ ಇರುವುದಿಲ್ಲ. ಪ್ರಯಾಣಿಕರಿಗೆ ಇದರಿಂದಾಗುವ ಅನಾನುಕೂಲತೆಗೆ ನಮ್ಮ ಮೆಟ್ರೋ ವಿಷಾದಿಸಿದೆ ಎಂದು ಬಿಎಂಆರ್​ಸಿಎಲ್​ ಪ್ರಕಟಣೆಯಲ್ಲಿ ತಿಳಿಸಿದೆ.

ಕೆಂಗೇರಿ ಮತ್ತು ಎಂ.ಜಿ ರಸ್ತೆ, ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ಕೃಷ್ಣರಾಜಪುರ ಮತ್ತು ವೈಟ್ ಫೀಲ್ಡ್ (ಕಾಡುಗೋಡಿ) ವಿಭಾಗಗಳ ರೈಲುಗಳ ಸೇವೆಯು ಆಯಾ ಟರ್ಮಿನಲ್ ನಿಲ್ದಾಣಗಳಿಂದ ಬೆಳಿಗ್ಗೆ 07:00 ಗಂಟೆಗೆ ವೇಳಾಪಟ್ಟಿಯ ಪ್ರಕಾರ ಸಂಚರಿಸಲಿದೆ. ನಮ್ಮ ಮೆಟ್ರೋ ಪ್ರಯಾಣಿಕರು ಸದರಿ ಬದಲಾವಣೆಯನ್ನು ಗಮನಿಸಬೇಕೆಂದು ಕೋರಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 2:38 pm, Fri, 30 June 23

Follow Us
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು