AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರೇ ಗಮನಿಸಿ: ನಾಳೆ ಸಂಜೆಯಿಂದ ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ; ಸಂಪೂರ್ಣ ಮಾಹಿತಿ ಇಲ್ಲಿದೆ

Metro Purple Line Timings: ನಾಳೆ (ಡಿಸೆಂಬರ್ 04) ಸಂಜೆ 5ರಿಂದ ಭಾನುವಾರ ಮುಂಜಾನೆ 7ರವರೆಗೆ ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಪ್ರಯಾಣಿಕರೇ ಗಮನಿಸಿ: ನಾಳೆ ಸಂಜೆಯಿಂದ ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ; ಸಂಪೂರ್ಣ ಮಾಹಿತಿ ಇಲ್ಲಿದೆ
ನಮ್ಮ ಮೆಟ್ರೋ (ಸಂಗ್ರಹ ಚಿತ್ರ)
TV9 Web
| Edited By: |

Updated on:Dec 03, 2021 | 4:23 PM

Share

ಬೆಂಗಳೂರು: ನಾಳೆ ಸಂಜೆಯಿಂದ ನೇರಳೆ ಮಾರ್ಗದ (Purple Line) ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಬಿಎಂಆರ್‌ಸಿಎಲ್‌ (BMRCL) ತಿಳಿಸಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಸಂಸ್ಥೆ, ನೇರಳೆ ಮಾರ್ಗದ ಮೆಟ್ರೋ ಸಂಚಾರ ಭಾಗಶಃ ಸ್ಥಗಿತವಾಗಲಿದೆ. ಟ್ರಿನಿಟಿಯಿಂದ ಹಲಸೂರು ಮೆಟ್ರೋ ಮಾರ್ಗದಲ್ಲಿ ದುರಸ್ತಿಯ ಕಾರಣ ಸಂಚಾರ ವ್ಯತ್ಯಯ ಆಗಲಿದೆ. ನಾಳೆ ಅಂದರೆ ಶನಿವಾರ ಸಂಜೆ 5ರಿಂದ (ಡಿಸೆಂಬರ್ 04) ಭಾನುವಾರ ಬೆಳಗ್ಗೆ 7ರವರೆಗೆ (ಡಿಸೆಂಬರ್ 05) ಸಂಚಾರ ಸ್ಥಗಿತವಾಗಲಿದೆ ಎಂದು ತಿಳಿಸಿದೆ. ಇದೇ ವೇಳೆ ಕೆಂಗೇರಿಯಿಂದ ಎಂಜಿ ರಸ್ತೆಯವರೆಗೆ ಸಂಚಾರ ಇರಲಿದೆ ಎಂದೂ ಅದು ಸ್ಪಷ್ಟಪಡಿಸಿದೆ. ಭಾನುವಾರ ಬೆಳಗ್ಗೆ 7ರಿಂದ ನೇರಳೆ ಮಾರ್ಗ ಸಂಪೂರ್ಣವಾಗಿ ಎಂದಿನಂತೆ ಕಾರ್ಯ ನಿರ್ವಹಿಸಲಿದೆ ಎಂದು ಅದು ತಿಳಿಸಿದೆ.

ನೇರಳೆ ಮಾರ್ಗದ ಸಂಚಾರ ಹೇಗೆ? ನೇರಳೆ ಮಾರ್ಗದ ಟ್ರಿನಿಟಿ ಇಂದ ಹಲಸೂರು ಮಾರ್ಗದಲ್ಲಿ ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ಎಂಜಿ ರಸ್ತೆಯಿಂದ ಬಯ್ಯಪ್ಪನಹಳ್ಳಿ ನಿಲ್ದಾಣದವರೆಗೆ ಸೇವೆಯಲ್ಲಿ ವ್ಯತ್ಯಯವಾಗಲಿದೆ. ನಾಳೆ ಸಂಜೆ 5 ಗಂಟೆಯಿಂದ ಭಾನುವಾರ ಬೆಳಿಗ್ಗೆ 7 ಗಂಟೆಯವರೆಗೆ ತಾತ್ಕಾಲಿಕವಾಗಿ ಸ್ಥಗಿತವಾಗಲಿದೆ. ಇದೇ ವೇಳೆ, ಎಂಜಿ ರೋಡ್ ಇಂದ ಕೆಂಗೇರಿವರೆಗೆ ಸಂಚಾರ ಇರಲಿದೆ ಎಂದು ತಿಳಿಸಲಾಗಿದೆ.

ಮೆಟ್ರೋದಲ್ಲಿ ಮಾಸ್ಕ್ ಕಡ್ಡಾಯ: ಬೆಂಗಳೂರು: ಕೊರೊನಾ ರೂಪಾಂತರಿ ಒಮಿಕ್ರಾನ್ (omicron) ಆತಂಕ ಹಿನ್ನೆಲೆಯಲ್ಲಿ ಬೆಂಗಳೂರು ಮೆಟ್ರೋ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕಟ್ಟುನಿಟ್ಟಿನ ಕ್ರಮಕ್ಕೆ ನಮ್ಮ ಮೆಟ್ರೋ ಮುಂದಾಗಿದ್ದು, ಮಾಸ್ಕ್ ಇಲ್ಲದೆ ಮೆಟ್ರೋದಲ್ಲಿ ಪ್ರಯಾಣಕ್ಕೆ ಅವಕಾಶ ಇಲ್ಲ ಎಂಬ ನಿಯಮವನ್ನು ಅನುಸರಿಸಲಾಗುತ್ತಿದೆ. ಕೊವಿಡ್ ಮಾರ್ಗಸೂಚಿ ಪಾಲನೆಗೆ ಹೆಚ್ಚಿನ ಒತ್ತು ನೀಡಿದ ಬೆಂಗಳೂರು ಮೆಟ್ರೋ ನಿಗಮ (BMRCL) ಮೆಟ್ರೋ ಸ್ಟೇಷನ್, ಮೆಟ್ರೋ ಬೋಗಿ ಒಳಗೆ ಮಾಸ್ಕ್ ಇಲ್ಲದೆ ಬರುವ ಪ್ರಯಾಣಿಕರ ಪ್ರವೇಶಕ್ಕೆ ನಿರ್ಬಂಧ ಹೇರಿದೆ. ರೂಪಾಂತರಿ ಒಮಿಕ್ರಾನ್ ಆತಂಕದಿಂದ ಪ್ರಯಾಣಿಕರ ಮೇಲೆ ಮೆಟ್ರೋ ಸಿಬ್ಬಂದಿಗಳು ಹೆಚ್ಚಿನ ನಿಗಾ ವಹಿಸಿದ್ದಾರೆ.

ಇದನ್ನೂ ಓದಿ:

New Guidelines: ಪೋಷಕರು 2 ಡೋಸ್ ಲಸಿಕೆ ಪಡೆದಿದ್ದರೆ ಮಾತ್ರ ಮಕ್ಕಳಿಗೆ ಶಾಲೆ ಪ್ರವೇಶ

ಕೊವಿಡ್ ಮಾರ್ಗಸೂಚಿ ಪಾಲನೆಗೆ ಹೆಚ್ಚಿನ ಒತ್ತು ನೀಡಿದ ಬಿಎಂಆರ್​ಸಿಎಲ್​; ಮೆಟ್ರೋದಲ್ಲಿ ಓಡಾಟಕ್ಕೆ ಮಾಸ್ಕ್ ಕಡ್ಡಾಯ

Published On - 4:22 pm, Fri, 3 December 21

ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​