AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಮೂರು ದಿನ ಬೆಳಗ್ಗೆ ಕೆಲ ಗಂಟೆಗಳ ಸಮಯ ನಮ್ಮ ಮೆಟ್ರೋ ಸೇವೆಯಲ್ಲಿ ವ್ಯತ್ಯಯ

ಇಂದಿನಿಂದ ಅಂದರೆ ಆಗಸ್ಟ್ 10ರಿಂದ ಆಗಸ್ಟ್ 14ರ ವರೆಗೆ ನೇರಳೆ(ಪರ್ಪಲ್ ಲೈನ್) ಮಾರ್ಗದಲ್ಲಿ ನಮ್ಮ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಬೆಳಗ್ಗೆ 5 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ (ಕೇವಲ ಎರಡು ಗಂಟೆ ಮಾತ್ರ) ರೈಲು ಸಂಚಾರ ಸ್ಥಗಿತಗೊಳ್ಳಲಿದೆ.

ಇಂದಿನಿಂದ ಮೂರು ದಿನ ಬೆಳಗ್ಗೆ ಕೆಲ ಗಂಟೆಗಳ ಸಮಯ ನಮ್ಮ ಮೆಟ್ರೋ ಸೇವೆಯಲ್ಲಿ ವ್ಯತ್ಯಯ
ನಮ್ಮ ಮೆಟ್ರೋ
Shivaprasad B
| Edited By: |

Updated on:Aug 10, 2023 | 6:37 AM

Share

ಬೆಂಗಳೂರು, (ಆಗಸ್ಟ್ 10): ಇಂದಿನಿಂದ ಅಂದರೆ ಆಗಸ್ಟ್ 10ರಿಂದ ಆಗಸ್ಟ್ 14ರ ವರೆಗೆ ಬೆಂಗಳುರಿನ (Bengaluru) ನಮ್ಮ ಮೆಟ್ರೋ  (Namma Metro) ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ನೇರಳೆ(ಪರ್ಪಲ್ ಲೈನ್) ಮಾರ್ಗದಲ್ಲಿ ಬೆಳಗ್ಗೆ 5 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ (ಕೇವಲ ಎರಡು ಗಂಟೆ ಮಾತ್ರ) ರೈಲು ಸಂಚಾರ ಸ್ಥಗಿತಗೊಳ್ಳಲಿದೆ. ಬೈಯಪ್ಪನಹಳ್ಳಿ ಟರ್ಮಿನಲ್‌ನಿಂದ ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣ, ಕೃಷ್ಣರಾಜಪುರ, ವೈಟ್‌ಫೀಲ್ಡ್‌ವರೆಗೆ ಮೆಟ್ರೋ ಸಂಚಾರ ವಿಸ್ತರಿತ ಮಾರ್ಗದಲ್ಲಿ ಸಿಗ್ನಲಿಂಗ್‌ ಸೇರಿದಂತೆ ಇತರೆ ಕಾಮಗಾರಿಗಳು ನಡೆಯಲಿವೆ. ಬೈಯಪ್ಪನಹಳ್ಳಿವರೆಗೆ ಎಂದಿನಂತೆ ಮೆಟ್ರೋ ರೈಲುಗಳು ಸಂಚರಿಸಲಿದ್ದು, ಅಲ್ಲಿಂದ ಮುಂದಕ್ಕೆ ವೈಟ್‌ಫೀಲ್ಡ್‌ವರೆಗೆ ಬೆಳಗ್ಗೆ 7 ಗಂಟೆಯವರೆಗೆ ಸಂಚಾರ ಇರುವುದಿಲ್ಲ ಎಂದು ಬಿಎಂಆರ್‌ಸಿಎಲ್‌ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಪ್ರವಾಸಿಗರ ಪ್ರವಾಸದ ಕನಸು ನನಸು ಮಾಡಲು ಮುಂದೆ ಬಂದ ಕೆಎಸ್ಆರ್​ಟಿಸಿ, ಟೂರ್ ಪ್ಯಾಕೇಜ್ ಮಾಹಿತಿ ಇಲ್ಲಿದೆ

ಬೆಳ್ಳಗೆ 5.00 ಗಂಟೆಯಿಂದ 7.00 ಗಂಟೆಯವರೆಗೆ ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ನಿಲ್ದಾಣದವರೆಗೆ ಮೆಟ್ರೋ ರೈಲು ಸೇವೆಗಳು ಲಭ್ಯವಿರುತ್ತದೆ. ಇದಲ್ಲದೆ, ಕೆಂಗೇರಿ ನಿಲ್ದಾಣದಿಂದ ರೈಲು ಸೇವೆಯನ್ನು ಚಲ್ಲಘಟ್ಟ ನಿಲ್ದಾಣದವರೆಗೆ ವಿಸ್ತರಿಸಲು ಸಿಗ್ನಲಿಂಗ್ ಮತ್ತು ಇತರ ಸಂಬಂಧಿತ ಕಾಮಗಾರಿಗಳಿಗಾಗಿ ಆಗಸ್ಟ್​​ 14 ರಂದು ಬೆಳಗ್ಗೆ 5.00 ಗಂಟೆಯಿಂದ ಬೆಳಗ್ಗೆ 7.00 ಗಂಟೆಯವರೆಗೆ ಕೆಂಗೇರಿ ಮತ್ತು ವಿಜಯನಗರ ಮೆಟ್ರೋ ನಿಲ್ದಾಣಗಳ ನಡುವೆ ಯಾವುದೇ ಮೆಟ್ರೋ ಸೇವೆಗಳು ಇರುವುದಿಲ್ಲ.

ಈ ಸಮಯದಲ್ಲಿ ಬೈಯಪ್ಪನಹಳ್ಳಿ ಮತ್ತು ವಿಜಯನಗರ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸೇವೆ ಲಭ್ಯವಿರುತ್ತದೆ. ಬೆಳಿಗ್ಗೆ 7.00 ಗಂಟೆಯ ನಂತರ, ಬೈಯಪ್ಪನಹಳ್ಳಿ ಮತ್ತು ಕೆಂಗೇರಿ, ಕೃಷ್ಣರಾಜಪುರ ಮತ್ತು ವೈಟ್‌ಫೀಲ್ಡ್ (ಕಾಡುಗೋಡಿ) ಮೆಟ್ರೋ ನಿಲ್ದಾಣಗಳ ನಡುವೆ ಎಂದಿನಂತೆ ಮೆಟ್ರೋ ರೈಲು ಸೇವೆಗಳು ರಾತ್ರಿ 11.00 ರವರೆಗೆ ಲಭ್ಯವಿರುತ್ತವೆ. ಇನ್ನು ಹಸಿರು ಮಾರ್ಗದ ರೈಲು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ನಮ್ಮ ಮೆಟ್ರೋ ಪುಯಾಣಿಕರು ಬದಲಾವಣೆಯನ್ನು ಗಮನಿಸಿ ಹಾಗೂ ಸಹಕರಿಸುವಂತೆ ಬಿಎಂಆರ್​ಸಿಎಲ್ ಪ್ರಕರಣೆ ಮೂಲಕ ಮನವಿ ಮಾಡಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 6:35 am, Thu, 10 August 23

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು