ಜು.6ರಂದು ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ರೈಲು ಸಂಚಾರ ವ್ಯತ್ಯಯ, ಎಲ್ಲಿಂದ ಎಲ್ಲಿಗೆ

Bengaluru Namma Metro: ನಮ್ಮ ಮೆಟ್ರೋ ಕಾಮಗಾರಿ ಹಿನ್ನೆಲೆ ಭಾನುವಾರ ಅಂದರೆ ಜುಲೈ 06 ನೇರಳೆ ಮಾರ್ಗದಲ್ಲಿ ರೈಲುಗಳ ಸಂಚಾರದಲ್ಲಿ ಕೊಂಚ ವ್ಯತ್ಯಯವಾಗಲಿದೆ. ನೇರಳೆ ಮಾರ್ಗದ(ಪರ್ಪಲ್ ಲೈನ್) ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸೇವೆಯು ತಾತ್ಕಾಲಿಕವಾಗಿ ಸ್ವಗಿತಗೊಳಿಸಲಾಗುತ್ತದೆ. ಈ ಬಗ್ಗೆ ಬಿಎಂಆರ್ ಸಿಎಲ್ ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದೆ.

ಜು.6ರಂದು ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ರೈಲು ಸಂಚಾರ ವ್ಯತ್ಯಯ, ಎಲ್ಲಿಂದ ಎಲ್ಲಿಗೆ
Namma Metro
Updated By: ರಮೇಶ್ ಬಿ. ಜವಳಗೇರಾ

Updated on: Jul 04, 2025 | 7:58 PM

ಬೆಂಗಳೂರು, (ಜುಲೈ 04): ನಮ್ಮ ಮೆಟ್ರೋದ (Namma Metr0) ನೇರಳೆ (ಪರ್ಪಲ್ ಲೈನ್) ಮಾರ್ಗದ ಸ್ವಾಮಿ ವಿವೇಕಾನಂದ ಹಾಗೂ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದ ನಡುವೆ ಅಗತ್ಯ ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಈ ಕಾಮಗಾರಿಗಳನ್ನು ನಿರ್ವಹಿಸಲು ಭಾನುವಾರ (ಜುಲೈ 06) ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ಸ್ವಗಿತಗೊಳಿಸಲಾಗುತ್ತದೆ. ಅಂದು ಬೆಳಗ್ಗೆ 7 ರಿಂದ ಬೆಳಗ್ಗೆ 8ರ ವರೆಗೆ ಒಂದು ಗಂಟೆ ಕಾಲ ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸಂಚಾರ ಇರುವುದಿಲ್ಲ. ಈ ಬಗ್ಗೆ ಬಿಎಂಆರ್​ ಸಿಎಲ್ (Bangalore Metro Rail Corporation Limited (BMRCL))​ ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದೆ.

ನೇರಳೆ ಮಾರ್ಗದಲ್ಲಿ ಜುಲೈ 06 ಭಾನುವಾರ ಬೆಳಿಗ್ಗೆ 7 ರಿಂದ 8ರವರೆಗೆ ಅಂದರೆ ಒಂದು ಗಂಟೆಯ ಅವಧಿಗೆ ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣ ಟು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದ ನಡುವಿನ ಅಗತ್ಯ ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳಲಿದೆ. ಹೀಗಾಗಿ ಬೆಳಗ್ಗೆ 7 ರಿಂದ 8ರವರೆಗೆ ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ಮಾರ್ಗದಲ್ಲಿ ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತವಾಗಲಿದ್ದು, ಬೆಳಿಗೆ 8 ರಿಂದ ಸಾಮಾನ್ಯ ರೈಲು ಸಂಚಾರ ಸೇವೆ ಎಂದಿನಂತೆ ಸಾಮಾನ್ಯವಾಗಿ ಪುನರಾರಂಭಿಸುತ್ತದೆ.

ಇದನ್ನೂ ಓದಿ: ನೀರಜ್ ಚೋಪ್ರಾ ಕ್ಲಾಸಿಕ್ 2025: ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ ಬದಲಾವಣೆ, ಪಾರ್ಕಿಂಗ್ ನಿಷೇಧ

ಇತರೆ ಎಲ್ಲಾ ಮಾರ್ಗಗಳಲ್ಲಿ ಯಾವುದೇ ಅಡೆತಡೆಯಿಲ್ಲದೆ ಕಾರ್ಯನಿರ್ವಹಿಸಲಿದ್ದು, ಚಲ್ಲಘಟ್ಟದಿಂದ ಇಂದಿರಾನಗರ, ಬೈಯಪ್ಪನಹಳ್ಳಿಯಿಂದ ವೈಟ್ ಫೀಲ್ಡ್ (ಕಾಡುಗೋಡಿ), ಮಾದಾವರದಿಂದ ರೇಷ್ಮೆ ಸಂಸ್ಥೆ ವರೆಗಿನ ಸೇವೆಗಳು ಬೆಳಿಗ್ಗೆ 7 ಗಂಟೆಯಿಂದ ಮೆಟ್ರೋ ಸಂಚಾರವಿರಲಿದೆ ಎಂದು ಬಿಎಂಆರ್ ಸಿಎಲ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಈ ತಾತ್ಕಾಲಿಕ ತೊಂದರೆಗೆ ವಿಷಾದ ವ್ಯಕ್ತಪಡಿಸಿರುವ ಬಿಎಂಆರ್‌ಸಿಎಲ್, ಪ್ರಯಾಣಿಕರು ತಮ್ಮ ದಿನಚರಿ ಪ್ರವಾಸದ ಯೋಜನೆಯನ್ನು ಮುಂಚಿತವಾಗಿ ರೂಪಿಸಿಕೊಳ್ಳುವಂತೆ ವಿನಂತಿಸಿದೆ. ಮೆಟ್ರೋ ಸೇವೆಗಳ ಕುರಿತ ಹೆಚ್ಚಿನ ಮಾಹಿತಿಗಾಗಿ ಪ್ರಯಾಣಿಕರು ಬಿಎಂಆರ್‌ಸಿಎಲ್ ವೆಬ್‌ಸೈಟ್ ಅಥವಾ ಅಧಿಕೃತ ಸಾಮಾಜಿಕ ಜಾಲತಾಣಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಹೇಳಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ