AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Metro: ಬೆಂಗಳೂರು ಮೆಟ್ರೋ ರೈಲು ಸೇವೆ ಅವಧಿ ವಿಸ್ತರಣೆ; ವಿವರ ಇಲ್ಲಿದೆ

Bengaluru Metro Timings: ಇದೀಗ ಕೊರೊನಾ ಪ್ರಕರಣಗಳು ಇಳಿಕೆ ಆಗುತ್ತಿದ್ದು ಜನಜೀವನ ಬಹುತೇಕ ಸಹಜ ಸ್ಥಿತಿಗೆ ಮರಳುವ ಹಂತದಲ್ಲಿದೆ. ಹೀಗಾಗಿ, ಜನರ ಪ್ರಯಾಣಕ್ಕೆ ಅನುಕೂಲವಾಗುವಂತೆ ಮೆಟ್ರೋ ಕಾರ್ಯನಿರ್ವಹಿಸುವ ಅವಧಿಯನ್ನು ಪರಿಷ್ಕರಿಸಲಾಗಿದೆ.

Bengaluru Metro: ಬೆಂಗಳೂರು ಮೆಟ್ರೋ ರೈಲು ಸೇವೆ ಅವಧಿ ವಿಸ್ತರಣೆ; ವಿವರ ಇಲ್ಲಿದೆ
ನಮ್ಮ ಮೆಟ್ರೋ (ಸಂಗ್ರಹ ಚಿತ್ರ)
TV9 Web
| Edited By: |

Updated on:Sep 17, 2021 | 7:26 PM

Share

ಬೆಂಗಳೂರು: ಬೆಂಗಳೂರು ನಮ್ಮ ಮೆಟ್ರೋ ರೈಲು ಸೇವೆಯ ಅವಧಿಯನ್ನು ವಿಸ್ತರಿಸಲಾಗಿದೆ. ಮೆಟ್ರೋ ರೈಲು ಓಡಾಟದ ಅವಧಿಯನ್ನು ಬೆಳಗ್ಗೆ 6 ರಿಂದ ರಾತ್ರಿ 9.30 ರ ವರೆಗೆ ವಿಸ್ತರಣೆ ಮಾಡಲಾಗಿದೆ. ಈ ಮೊದಲು ರೈಲು ಓಡಾಟದ ಅವಧಿ ಬೆಳಗ್ಗೆ 7 ಗಂಟೆಯಿಂದ ಸಂಜೆ 8 ಗಂಟೆ ವರೆಗೆ ಮಾತ್ರ ಇತ್ತು. ಕೊರೊನಾ ಸಾಂಕ್ರಾಮಿಕ ಸೋಂಕು ಕಾಣಿಸಿಕೊಂಡ ಬಳಿಕ ಜನಜೀವನ ಅಸ್ತವ್ಯಸ್ತವಾಗಿತ್ತು. ಲಾಕ್​ಡೌನ್ ವಿಧಿಸಿದ್ದರಿಂದ ಹಾಗೂ ಆ ನಂತರವೂ ಮೆಟ್ರೋ ಸೇವೆ ಸಮಯದಲ್ಲಿ ವ್ಯತ್ಯಾಸ ಆಗಿತ್ತು. ಇದೀಗ, ಕೊರೊನಾ ಪ್ರಕರಣಗಳು ಇಳಿಕೆ ಆಗುತ್ತಿದ್ದು ಜನಜೀವನ ಬಹುತೇಕ ಸಹಜ ಸ್ಥಿತಿಗೆ ಮರಳುವ ಹಂತದಲ್ಲಿದೆ. ಹೀಗಾಗಿ, ಜನರ ಪ್ರಯಾಣಕ್ಕೆ ಅನುಕೂಲವಾಗುವಂತೆ ಮೆಟ್ರೋ ಕಾರ್ಯನಿರ್ವಹಿಸುವ ಅವಧಿಯನ್ನು ಪರಿಷ್ಕರಿಸಲಾಗಿದೆ.

ನಮ್ಮ ಮೆಟ್ರೋ ಸೇವಾ ಅವಧಿಯನ್ನು ವಿಸ್ತರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಬಿಜೆಪಿ ಶಾಸಕ, ಮಾಜಿ ಸಚಿವ ಸುರೇಶ್‌ಕುಮಾರ್‌ ಪತ್ರ ಬರೆದಿದ್ದರು. ನೈಟ್ ಕರ್ಫ್ಯೂ ಹಿನ್ನೆಲೆ ರಾತ್ರಿ 9ರವರೆಗೆ ಮಾತ್ರ ಮೆಟ್ರೋ ಸಂಚಾರವಿದೆ. ರಾತ್ರಿ 9 ಗಂಟೆಯ ಬಳಿಕ ಮೆಟ್ರೋ ಸಂಚಾರ ಇರುವುದಿಲ್ಲ. ಇದರಿಂದ ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ರಾತ್ರಿ 10 ಗಂಟೆಯವರೆಗೆ ಮೆಟ್ರೋ ಸೌಲಭ್ಯ ಕಲ್ಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಶಾಸಕ ಸುರೇಶ್‌ಕುಮಾರ್ ಪತ್ರ ಬರೆದಿದ್ದರು.

ನೈಟ್ ಕರ್ಫ್ಯೂ 11 ಗಂಟೆಯ ನಂತರ ವಿಧಿಸುವ ಬಗ್ಗೆ ಪರಿಶೀಲನೆ ನಡೆಸಬೇಕು. ಲಾಕ್​ಡೌನ್ ಮುಂಚೆ ಮೆಟ್ರೋ ನಿಲ್ದಾಣಗಳಲ್ಲಿ ಎರಡು ಕಡೆ ದ್ವಾರಗಳು ಇದ್ದವು. ಈಗ ಒಂದು ಕಡೆ ಮಾತ್ರ ದ್ವಾರ ಇದ್ದು, ಸಮಸ್ಯೆಯಾಗುತ್ತಿದೆ. ಹೀಗಾಗಿ ಎರಡು ಕಡೆ ಪ್ರವೇಶ ದ್ವಾರ ತೆರೆದು ಸಾರ್ವಜನಿಕರಿಗೆ ಅನುಕೂಲ‌ ಮಾಡಿ ಕೊಡಿ‌ ಎಂದು ಸುರೇಶ್ ಕುಮಾರ್ ಬರೆದ ಪತ್ರದಲ್ಲಿ ವಿನಂತಿ ಮಾಡಿದ್ದರು. ಸುರೇಶ್ ಕುಮಾರ್ ಹೊರತಾಗಿ ಇತರ ಕೆಲವು ರಾಜಕಾರಣಿಗಳು ಕೂಡ ಈ ಬಗ್ಗೆ ಒತ್ತಾಯಿಸಿದ್ದರು. ಇದೀಗ, ಮೆಟ್ರೋ ಕಾರ್ಯನಿರ್ವಹಿಸುವ ಅವಧಿ ವಿಸ್ತರಣೆ ಮಾಡಲಾಗಿದೆ.

ಇದನ್ನೂ ಓದಿ: Namma Metro: ನಮ್ಮ ಮೆಟ್ರೋ ಸೇವಾ ಅವಧಿ ವಿಸ್ತರಿಸುವಂತೆ ಸಿಎಂಗೆ ಸುರೇಶ್ ಕುಮಾರ್ ಪತ್ರ

ಇದನ್ನೂ ಓದಿ: ಬೆಂಗಳೂರು ಮೆಟ್ರೋ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣನೆ: ಎಂಡಿಗೆ ಸರ್ಕಾರದಿಂದ ನೋಟಿಸ್

Published On - 7:08 pm, Fri, 17 September 21

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?