AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ವಾಟ್ಸಪ್ ​ಆಧಾರಿತ QR ಕೋಡ್ ಟಿಕೆಟಿಂಗ್ ಮೂಲಕ ತಿಂಗಳಿಗೆ ಎಷ್ಟು ಜನ ಪ್ರಯಾಣಿಸುತ್ತಾರೆ? ಇಲ್ಲಿದೆ ಅಂಕಿ-ಅಂಶ

ಏಪ್ರಿಲ್​ ತಿಂಗಳ ಅಂತ್ಯದ ವೇಳೆಗೆ ನಮ್ಮ ಮೆಟ್ರೋ ವಾಟ್ಸಪ್ ​ಆಧಾರಿತ QR ಕೋಡ್ ಟಿಕೆಟಿಂಗ್ ವ್ಯವಸ್ಥೆಯನ್ನು ಬಳಸಿಕೊಂಡು 3 ಲಕ್ಷ ಜನ ಪ್ರಯಾಣಿಕರು ಸಂಚರಿಸಲಿದ್ದಾರೆ.

Namma Metro: ವಾಟ್ಸಪ್ ​ಆಧಾರಿತ QR ಕೋಡ್ ಟಿಕೆಟಿಂಗ್ ಮೂಲಕ ತಿಂಗಳಿಗೆ ಎಷ್ಟು ಜನ ಪ್ರಯಾಣಿಸುತ್ತಾರೆ? ಇಲ್ಲಿದೆ ಅಂಕಿ-ಅಂಶ
ನಮ್ಮ ಮೆಟ್ರೋ ಕ್ಯೂರ್​ ಕೋಡ್​ ಟಿಕೆಟ್​
ವಿವೇಕ ಬಿರಾದಾರ
|

Updated on:Apr 25, 2023 | 8:50 AM

Share

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ನಮ್ಮ ಮೆಟ್ರೋ (Namma Metro) ಪ್ರಾರಂಭವಾಗಿ 11 ವರ್ಷವಾಯಿತು. ಅತಿ ವೇಗದ ಮತ್ತು ಟ್ರಾಫಿಕ್‌ ಮುಕ್ತ ಪ್ರಯಾಣವನ್ನು ನಮ್ಮ ಮೆಟ್ರೋ ಒದಗಿಸುತ್ತಿದೆ. ಇದು ಅತಿದೊಡ್ಡ ಸಂಪರ್ಕ ಜಾಲವಾಗಿ ಬೆಳದು ನಿಂತಿದೆ. ಮೆಟ್ರೋ ಕಳೆದ ವರ್ಷ 2022ರ ನವೆಂಬರ್​ನಲ್ಲಿ WhatsApp ಆಧಾರಿತ QR ಕೋಡ್ ಟಿಕೆಟಿಂಗ್ ವ್ಯವಸ್ಥೆಯನ್ನು ಬಳಸಿಕೊಂಡು ಸುಲಭವಾಗಿ ಟಿಕೆಟ್ ಖರೀದಿ ವ್ಯವಸ್ಥೆಯನ್ನು ಆರಂಭಿಸಿತ್ತು. ಏಪ್ರಿಲ್​ ತಿಂಗಳ ಅಂತ್ಯದ ವೇಳೆಗೆ QR ಕೋಡ್ ಟಿಕೆಟಿಂಗ್ ವ್ಯವಸ್ಥೆಯನ್ನು ಬಳಸಿಕೊಂಡು 3 ಲಕ್ಷ ಜನ ಪ್ರಯಾಣಿಕರು ಸಂಚರಿಸಲಿದ್ದಾರೆ ಎಂದು ಖಾಸಗಿ ಸುದ್ದಿ ಸಂಸ್ಥೆ ದಿ ಹಿಂದೂ ವರದಿ ಮಾಡಿದೆ.

ಫೆಬ್ರವರಿಯಲ್ಲಿ 2,45,219, ಕಳೆದ ತಿಂಗಳು ಮಾರ್ಚ್‌ನಲ್ಲಿ 2,96,765 ಪ್ರಯಾಣಿಕರು QR ಕೋಡ್ ಟಿಕೆಟಿಂಗ್ ವ್ಯವಸ್ಥೆಯನ್ನು ಬಳಸಿದ್ದರು. ಇನ್ನು ಈ ತಿಂಗಳು ಏಪ್ರಿಲ್ 1 ರಿಂದ 15ರ ವರೆಗೆ, 1,76,061 ಪ್ರಯಾಣಿಕರು WhatsApp QR ಕೋಡ್ ಟಿಕೆಟ್‌ಗಳನ್ನು ಖರೀದಿಸುತ್ತಿದ್ದಾರೆ. ಈ ಅಂಕಿ-ಸಂಖ್ಯೆಗಳನ್ನು ನೋಡಿದರೇ ಇದೇ ತಿಂಗಳು 3 ಲಕ್ಷ ಪ್ರಯಾಣಿಕರು ಈ ವ್ಯವಸ್ಥೆಯನ್ನು ಬಳಸುವ ಸಾಧ್ಯತೆ ಇದೆ.

ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​​: ಕ್ಯೂಆರ್ ಕೋಡ್ ಆಧಾರಿತ ಟಿಕೆಟ್​ ವ್ಯವಸ್ಥೆ

ದೈನಂದಿನ ಪ್ರಯಾಣಿಕರಿಗೆ ಹೋಲಿಸಿದರೇ ಈ ಅಂಕಿ ಸಂಖ್ಯೆ ಕಡಿಮೆ. ಹೌದು ಪ್ರತಿದಿನ ನಮ್ಮ ಮೆಟ್ರೋದಲ್ಲಿ 5 ಲಕ್ಷ ಜನರು ಸಂಚರಿಸುತ್ತಾರೆ. ಫೆಬ್ರವರಿಯಲ್ಲಿ ಒಂದು ದಿನಕ್ಕೆ ಕ್ಯೂಆರ್ ಕೋಡ್ ಟಿಕೆಟ್ ಖರೀದಿಸುವವರ ಸಂಖ್ಯೆ 83,813 ಆಗಿತ್ತು. ಸದ್ಯ ಪ್ರತಿದಿನ 10 ಸಾವಿರ ಪ್ರಯಾಣಿಕರು ಕ್ಯೂಆರ್ ಕೋಡ್​ ಟಿಕೆಟಿಂಗ್​ ವ್ಯವಸ್ಥೆಯನ್ನು ಉಯೋಗಿಸುತ್ತಿದ್ದಾರೆ.

5.9 ಲಕ್ಷ ದೈನಂದಿನ ಪ್ರಯಾಣಿಕರ ಸಂಖ್ಯೆಯನ್ನು ಆಧರಿಸಿದರೇ, ಮೆಟ್ರೋ ತಿಂಗಳಿಗೆ ಸುಮಾರು 1.5 ಕೋಟಿ ಜನರು ಸಂಚರಿಸುತ್ತಾರೆ. ಅಂದರೆ ಪ್ರಸ್ತುತ ವಾಟ್ಸಾಪ್ ಕ್ಯೂಆರ್ ಕೋಡ್ ಟಿಕೆಟ್‌ಗಳನ್ನು ಶೇ 60 ರಷ್ಟು ಜನರು ಮಾತ್ರ ಬಳಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:09 am, Tue, 25 April 23

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ