AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ವಾಟ್ಸಪ್ ​ಆಧಾರಿತ QR ಕೋಡ್ ಟಿಕೆಟಿಂಗ್ ಮೂಲಕ ತಿಂಗಳಿಗೆ ಎಷ್ಟು ಜನ ಪ್ರಯಾಣಿಸುತ್ತಾರೆ? ಇಲ್ಲಿದೆ ಅಂಕಿ-ಅಂಶ

ಏಪ್ರಿಲ್​ ತಿಂಗಳ ಅಂತ್ಯದ ವೇಳೆಗೆ ನಮ್ಮ ಮೆಟ್ರೋ ವಾಟ್ಸಪ್ ​ಆಧಾರಿತ QR ಕೋಡ್ ಟಿಕೆಟಿಂಗ್ ವ್ಯವಸ್ಥೆಯನ್ನು ಬಳಸಿಕೊಂಡು 3 ಲಕ್ಷ ಜನ ಪ್ರಯಾಣಿಕರು ಸಂಚರಿಸಲಿದ್ದಾರೆ.

Namma Metro: ವಾಟ್ಸಪ್ ​ಆಧಾರಿತ QR ಕೋಡ್ ಟಿಕೆಟಿಂಗ್ ಮೂಲಕ ತಿಂಗಳಿಗೆ ಎಷ್ಟು ಜನ ಪ್ರಯಾಣಿಸುತ್ತಾರೆ? ಇಲ್ಲಿದೆ ಅಂಕಿ-ಅಂಶ
ನಮ್ಮ ಮೆಟ್ರೋ ಕ್ಯೂರ್​ ಕೋಡ್​ ಟಿಕೆಟ್​
ವಿವೇಕ ಬಿರಾದಾರ
|

Updated on:Apr 25, 2023 | 8:50 AM

Share

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ನಮ್ಮ ಮೆಟ್ರೋ (Namma Metro) ಪ್ರಾರಂಭವಾಗಿ 11 ವರ್ಷವಾಯಿತು. ಅತಿ ವೇಗದ ಮತ್ತು ಟ್ರಾಫಿಕ್‌ ಮುಕ್ತ ಪ್ರಯಾಣವನ್ನು ನಮ್ಮ ಮೆಟ್ರೋ ಒದಗಿಸುತ್ತಿದೆ. ಇದು ಅತಿದೊಡ್ಡ ಸಂಪರ್ಕ ಜಾಲವಾಗಿ ಬೆಳದು ನಿಂತಿದೆ. ಮೆಟ್ರೋ ಕಳೆದ ವರ್ಷ 2022ರ ನವೆಂಬರ್​ನಲ್ಲಿ WhatsApp ಆಧಾರಿತ QR ಕೋಡ್ ಟಿಕೆಟಿಂಗ್ ವ್ಯವಸ್ಥೆಯನ್ನು ಬಳಸಿಕೊಂಡು ಸುಲಭವಾಗಿ ಟಿಕೆಟ್ ಖರೀದಿ ವ್ಯವಸ್ಥೆಯನ್ನು ಆರಂಭಿಸಿತ್ತು. ಏಪ್ರಿಲ್​ ತಿಂಗಳ ಅಂತ್ಯದ ವೇಳೆಗೆ QR ಕೋಡ್ ಟಿಕೆಟಿಂಗ್ ವ್ಯವಸ್ಥೆಯನ್ನು ಬಳಸಿಕೊಂಡು 3 ಲಕ್ಷ ಜನ ಪ್ರಯಾಣಿಕರು ಸಂಚರಿಸಲಿದ್ದಾರೆ ಎಂದು ಖಾಸಗಿ ಸುದ್ದಿ ಸಂಸ್ಥೆ ದಿ ಹಿಂದೂ ವರದಿ ಮಾಡಿದೆ.

ಫೆಬ್ರವರಿಯಲ್ಲಿ 2,45,219, ಕಳೆದ ತಿಂಗಳು ಮಾರ್ಚ್‌ನಲ್ಲಿ 2,96,765 ಪ್ರಯಾಣಿಕರು QR ಕೋಡ್ ಟಿಕೆಟಿಂಗ್ ವ್ಯವಸ್ಥೆಯನ್ನು ಬಳಸಿದ್ದರು. ಇನ್ನು ಈ ತಿಂಗಳು ಏಪ್ರಿಲ್ 1 ರಿಂದ 15ರ ವರೆಗೆ, 1,76,061 ಪ್ರಯಾಣಿಕರು WhatsApp QR ಕೋಡ್ ಟಿಕೆಟ್‌ಗಳನ್ನು ಖರೀದಿಸುತ್ತಿದ್ದಾರೆ. ಈ ಅಂಕಿ-ಸಂಖ್ಯೆಗಳನ್ನು ನೋಡಿದರೇ ಇದೇ ತಿಂಗಳು 3 ಲಕ್ಷ ಪ್ರಯಾಣಿಕರು ಈ ವ್ಯವಸ್ಥೆಯನ್ನು ಬಳಸುವ ಸಾಧ್ಯತೆ ಇದೆ.

ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​​: ಕ್ಯೂಆರ್ ಕೋಡ್ ಆಧಾರಿತ ಟಿಕೆಟ್​ ವ್ಯವಸ್ಥೆ

ದೈನಂದಿನ ಪ್ರಯಾಣಿಕರಿಗೆ ಹೋಲಿಸಿದರೇ ಈ ಅಂಕಿ ಸಂಖ್ಯೆ ಕಡಿಮೆ. ಹೌದು ಪ್ರತಿದಿನ ನಮ್ಮ ಮೆಟ್ರೋದಲ್ಲಿ 5 ಲಕ್ಷ ಜನರು ಸಂಚರಿಸುತ್ತಾರೆ. ಫೆಬ್ರವರಿಯಲ್ಲಿ ಒಂದು ದಿನಕ್ಕೆ ಕ್ಯೂಆರ್ ಕೋಡ್ ಟಿಕೆಟ್ ಖರೀದಿಸುವವರ ಸಂಖ್ಯೆ 83,813 ಆಗಿತ್ತು. ಸದ್ಯ ಪ್ರತಿದಿನ 10 ಸಾವಿರ ಪ್ರಯಾಣಿಕರು ಕ್ಯೂಆರ್ ಕೋಡ್​ ಟಿಕೆಟಿಂಗ್​ ವ್ಯವಸ್ಥೆಯನ್ನು ಉಯೋಗಿಸುತ್ತಿದ್ದಾರೆ.

5.9 ಲಕ್ಷ ದೈನಂದಿನ ಪ್ರಯಾಣಿಕರ ಸಂಖ್ಯೆಯನ್ನು ಆಧರಿಸಿದರೇ, ಮೆಟ್ರೋ ತಿಂಗಳಿಗೆ ಸುಮಾರು 1.5 ಕೋಟಿ ಜನರು ಸಂಚರಿಸುತ್ತಾರೆ. ಅಂದರೆ ಪ್ರಸ್ತುತ ವಾಟ್ಸಾಪ್ ಕ್ಯೂಆರ್ ಕೋಡ್ ಟಿಕೆಟ್‌ಗಳನ್ನು ಶೇ 60 ರಷ್ಟು ಜನರು ಮಾತ್ರ ಬಳಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:09 am, Tue, 25 April 23

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ