AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ನೇರಳೆ ಮಾರ್ಗದ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರಿನ ಕೆಂಗೇರಿ-ಚಲ್ಲಘಟ್ಟ ಹಾಗೂ ಬೈಯಪ್ಪನಹಳ್ಳಿ- ಕೃಷ್ಣರಾಜಪುರ ಮೆಟ್ರೋ ಉದ್ಘಾಟನೆಗೆ ಸಿದ್ಧವಾಗಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಈ ಬಗ್ಗೆ ಬಿಎಂಆರ್​ಸಿಎಲ್ ಪ್ರಕಟಣೆ ಹೊರಡಿಸಿದ್ದು, ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ ನೋಡಿ.

ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ನೇರಳೆ ಮಾರ್ಗದ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ
ನಮ್ಮ ಮೆಟ್ರೋ
ರಮೇಶ್ ಬಿ. ಜವಳಗೇರಾ
|

Updated on:Aug 17, 2023 | 11:38 AM

Share

ಬೆಂಗಳೂರು, (ಆಗಸ್ಟ್ 17): ಬೆಂಗಳೂರಿನ ನಮ್ಮ ಮೆಟ್ರೋ (Namma Metro) ನೇರಳೆ ಮಾರ್ಗ ವಿಸ್ತರಣೆಯ ಕಾಮಗಾರಿ ನಡೆದಿದೆ. ಕೆಂಗೇರಿ-ಚಲ್ಲಘಟ್ಟ ಹಾಗೂ ಬೈಯಪ್ಪನಹಳ್ಳಿ- ಕೃಷ್ಣರಾಜಪುರ ಮೆಟ್ರೋ ಉದ್ಘಾಟನೆಗೆ ಸಿದ್ಧವಾಗಿದೆ. ಹೀಗಾಗಿ ಸಿಗ್ನಲಿಂಗ್‌ ಪರೀಕ್ಷೆ ನಡೆಸಲಾಗುತ್ತಿದೆ. ಇದರಿಂದ ಈ ಮಾರ್ಗದಲ್ಲಿ ಇಂದಿನಿಂದ ಅಂದರೆ ಆಗಸ್ಟ್ 17ರಿಂದ ಆ.29ರವರೆಗೆ ನಮ್ಮ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ಕೋ-ಆಪರೇಷನ್ ಲಿಮಿಟೆಡ್  (BMRLC) ತಿಳಿಸಿದೆ. ಇನ್ನು ಗುರುವಾರ (ಆ.17) ಕೆಂಗೇರಿ ಮತ್ತು ಮೈಸೂರು ರಸ್ತೆಯ ಮೆಟ್ರೋ ನಿಲ್ದಾಣಗಳ ನಡುವೆ ಯಾವುದೇ ರೈಲು ಸೇವೆ ಲಭ್ಯವಿರುವುದಿಲ್ಲ. ಮೈಸೂರು ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ಬೆಳಗ್ಗೆ 5 ರಿಂದ ರಾತ್ರಿ 11 ಗಂಟೆಯವರೆಗೆ ರೈಲು ಸೇವೆಗಳು ಲಭ್ಯವಿರುತ್ತವೆ ಎಂದು ಬಿಎಂಆರ್‌ಸಿಎಲ್‌ ಮಾಹಿತಿ ನೀಡಿದೆ.

ಬೈಯಪ್ಪನಹಳ್ಳಿ-ಮೈಸೂರು ರಸ್ತೆ ಮತ್ತು ಮೈಸೂರು ರಸ್ತೆ- ಬೈಯಪ್ಪನ ಹಳ್ಳಿ ನಡುವೆ ಮೆಟ್ರೋ ರೈಲು ಸಂಚಾರ ಎಂದಿನಂತೆ ಇರಲಿದೆ. ಅದೇ ರೀತಿ, ಆಗಸ್ಟ್ 23 ಮತ್ತು ಆ. 24ರಂದು ಬೆಳಗ್ಗೆ 5 ಗಂಟೆಯಿಂದ ಬೆಳಗ್ಗೆ 7 ಗಂಟೆ ವರೆಗೆ ಈ ಮಾರ್ಗದಲ್ಲಿ ಮೆಟ್ರೋ ಸಂಚಾರ ಇರುವುದಿಲ್ಲ. ಬೆಳಗ್ಗೆ 7 ಗಂಟೆ ನಂತರ ಎಂದಿನಂತೆ ಮೆಟ್ರೋ ಸಂಚಾರ ಇರಲಿದೆ.

ಇದನ್ನೂ ಓದಿ: ಸಿಗ್ನಲಿಂಗ್ ವ್ಯವಸ್ಥೆ ಪರೀಕ್ಷೆ: ಆ 17, 20, 23, 24 ಮತ್ತು 29ರಂದು ನೇರಳೆ ಮಾರ್ಗದ ಮೆಟ್ರೋ ಸಂಚಾರ ಸಮಯದಲ್ಲಿ ಬದಲಾವಣೆ

ಇನ್ನು ಆಗಸ್ಟ್ 20 ರಿಂದ 29ರ ತನಕ ನೇರಳೆ ಮಾರ್ಗದಲ್ಲಿ ಸ್ವಾಮಿ ವಿವೇಕಾನಂದ ರಸ್ತೆ- ಬೈಯಪ್ಪನಹಳ್ಳಿ, ಕೆ.ಆರ್.ಪುರ, ವೈಟ್‍ಫೀಲ್ಡ್ (ಕಾಡುಗೋಡಿ) ನಡುವೆ ಬೆಳಗ್ಗೆ 5 ರಿಂದ 7 ರ ತನಕ ರೈಲು ಸಂಚಾರ ಇರುವುದಿಲ್ಲ ಎಂದು ಬಿಎಂಆರ್​ಸಿಎಲ್​ ಪ್ರಕರಣಯಣೆಯಲ್ಲಿ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:37 am, Thu, 17 August 23

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!