AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ನೇರಳೆ ಮಾರ್ಗದ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರಿನ ಕೆಂಗೇರಿ-ಚಲ್ಲಘಟ್ಟ ಹಾಗೂ ಬೈಯಪ್ಪನಹಳ್ಳಿ- ಕೃಷ್ಣರಾಜಪುರ ಮೆಟ್ರೋ ಉದ್ಘಾಟನೆಗೆ ಸಿದ್ಧವಾಗಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಈ ಬಗ್ಗೆ ಬಿಎಂಆರ್​ಸಿಎಲ್ ಪ್ರಕಟಣೆ ಹೊರಡಿಸಿದ್ದು, ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ ನೋಡಿ.

ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ನೇರಳೆ ಮಾರ್ಗದ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ
ನಮ್ಮ ಮೆಟ್ರೋ
ರಮೇಶ್ ಬಿ. ಜವಳಗೇರಾ
|

Updated on:Aug 17, 2023 | 11:38 AM

Share

ಬೆಂಗಳೂರು, (ಆಗಸ್ಟ್ 17): ಬೆಂಗಳೂರಿನ ನಮ್ಮ ಮೆಟ್ರೋ (Namma Metro) ನೇರಳೆ ಮಾರ್ಗ ವಿಸ್ತರಣೆಯ ಕಾಮಗಾರಿ ನಡೆದಿದೆ. ಕೆಂಗೇರಿ-ಚಲ್ಲಘಟ್ಟ ಹಾಗೂ ಬೈಯಪ್ಪನಹಳ್ಳಿ- ಕೃಷ್ಣರಾಜಪುರ ಮೆಟ್ರೋ ಉದ್ಘಾಟನೆಗೆ ಸಿದ್ಧವಾಗಿದೆ. ಹೀಗಾಗಿ ಸಿಗ್ನಲಿಂಗ್‌ ಪರೀಕ್ಷೆ ನಡೆಸಲಾಗುತ್ತಿದೆ. ಇದರಿಂದ ಈ ಮಾರ್ಗದಲ್ಲಿ ಇಂದಿನಿಂದ ಅಂದರೆ ಆಗಸ್ಟ್ 17ರಿಂದ ಆ.29ರವರೆಗೆ ನಮ್ಮ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ಕೋ-ಆಪರೇಷನ್ ಲಿಮಿಟೆಡ್  (BMRLC) ತಿಳಿಸಿದೆ. ಇನ್ನು ಗುರುವಾರ (ಆ.17) ಕೆಂಗೇರಿ ಮತ್ತು ಮೈಸೂರು ರಸ್ತೆಯ ಮೆಟ್ರೋ ನಿಲ್ದಾಣಗಳ ನಡುವೆ ಯಾವುದೇ ರೈಲು ಸೇವೆ ಲಭ್ಯವಿರುವುದಿಲ್ಲ. ಮೈಸೂರು ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ಬೆಳಗ್ಗೆ 5 ರಿಂದ ರಾತ್ರಿ 11 ಗಂಟೆಯವರೆಗೆ ರೈಲು ಸೇವೆಗಳು ಲಭ್ಯವಿರುತ್ತವೆ ಎಂದು ಬಿಎಂಆರ್‌ಸಿಎಲ್‌ ಮಾಹಿತಿ ನೀಡಿದೆ.

ಬೈಯಪ್ಪನಹಳ್ಳಿ-ಮೈಸೂರು ರಸ್ತೆ ಮತ್ತು ಮೈಸೂರು ರಸ್ತೆ- ಬೈಯಪ್ಪನ ಹಳ್ಳಿ ನಡುವೆ ಮೆಟ್ರೋ ರೈಲು ಸಂಚಾರ ಎಂದಿನಂತೆ ಇರಲಿದೆ. ಅದೇ ರೀತಿ, ಆಗಸ್ಟ್ 23 ಮತ್ತು ಆ. 24ರಂದು ಬೆಳಗ್ಗೆ 5 ಗಂಟೆಯಿಂದ ಬೆಳಗ್ಗೆ 7 ಗಂಟೆ ವರೆಗೆ ಈ ಮಾರ್ಗದಲ್ಲಿ ಮೆಟ್ರೋ ಸಂಚಾರ ಇರುವುದಿಲ್ಲ. ಬೆಳಗ್ಗೆ 7 ಗಂಟೆ ನಂತರ ಎಂದಿನಂತೆ ಮೆಟ್ರೋ ಸಂಚಾರ ಇರಲಿದೆ.

ಇದನ್ನೂ ಓದಿ: ಸಿಗ್ನಲಿಂಗ್ ವ್ಯವಸ್ಥೆ ಪರೀಕ್ಷೆ: ಆ 17, 20, 23, 24 ಮತ್ತು 29ರಂದು ನೇರಳೆ ಮಾರ್ಗದ ಮೆಟ್ರೋ ಸಂಚಾರ ಸಮಯದಲ್ಲಿ ಬದಲಾವಣೆ

ಇನ್ನು ಆಗಸ್ಟ್ 20 ರಿಂದ 29ರ ತನಕ ನೇರಳೆ ಮಾರ್ಗದಲ್ಲಿ ಸ್ವಾಮಿ ವಿವೇಕಾನಂದ ರಸ್ತೆ- ಬೈಯಪ್ಪನಹಳ್ಳಿ, ಕೆ.ಆರ್.ಪುರ, ವೈಟ್‍ಫೀಲ್ಡ್ (ಕಾಡುಗೋಡಿ) ನಡುವೆ ಬೆಳಗ್ಗೆ 5 ರಿಂದ 7 ರ ತನಕ ರೈಲು ಸಂಚಾರ ಇರುವುದಿಲ್ಲ ಎಂದು ಬಿಎಂಆರ್​ಸಿಎಲ್​ ಪ್ರಕರಣಯಣೆಯಲ್ಲಿ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:37 am, Thu, 17 August 23

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!