AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ನೇರಳೆ ಮಾರ್ಗದ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರಿನ ಕೆಂಗೇರಿ-ಚಲ್ಲಘಟ್ಟ ಹಾಗೂ ಬೈಯಪ್ಪನಹಳ್ಳಿ- ಕೃಷ್ಣರಾಜಪುರ ಮೆಟ್ರೋ ಉದ್ಘಾಟನೆಗೆ ಸಿದ್ಧವಾಗಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಈ ಬಗ್ಗೆ ಬಿಎಂಆರ್​ಸಿಎಲ್ ಪ್ರಕಟಣೆ ಹೊರಡಿಸಿದ್ದು, ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ ನೋಡಿ.

ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ನೇರಳೆ ಮಾರ್ಗದ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ
ನಮ್ಮ ಮೆಟ್ರೋ
ರಮೇಶ್ ಬಿ. ಜವಳಗೇರಾ
|

Updated on:Aug 17, 2023 | 11:38 AM

Share

ಬೆಂಗಳೂರು, (ಆಗಸ್ಟ್ 17): ಬೆಂಗಳೂರಿನ ನಮ್ಮ ಮೆಟ್ರೋ (Namma Metro) ನೇರಳೆ ಮಾರ್ಗ ವಿಸ್ತರಣೆಯ ಕಾಮಗಾರಿ ನಡೆದಿದೆ. ಕೆಂಗೇರಿ-ಚಲ್ಲಘಟ್ಟ ಹಾಗೂ ಬೈಯಪ್ಪನಹಳ್ಳಿ- ಕೃಷ್ಣರಾಜಪುರ ಮೆಟ್ರೋ ಉದ್ಘಾಟನೆಗೆ ಸಿದ್ಧವಾಗಿದೆ. ಹೀಗಾಗಿ ಸಿಗ್ನಲಿಂಗ್‌ ಪರೀಕ್ಷೆ ನಡೆಸಲಾಗುತ್ತಿದೆ. ಇದರಿಂದ ಈ ಮಾರ್ಗದಲ್ಲಿ ಇಂದಿನಿಂದ ಅಂದರೆ ಆಗಸ್ಟ್ 17ರಿಂದ ಆ.29ರವರೆಗೆ ನಮ್ಮ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ಕೋ-ಆಪರೇಷನ್ ಲಿಮಿಟೆಡ್  (BMRLC) ತಿಳಿಸಿದೆ. ಇನ್ನು ಗುರುವಾರ (ಆ.17) ಕೆಂಗೇರಿ ಮತ್ತು ಮೈಸೂರು ರಸ್ತೆಯ ಮೆಟ್ರೋ ನಿಲ್ದಾಣಗಳ ನಡುವೆ ಯಾವುದೇ ರೈಲು ಸೇವೆ ಲಭ್ಯವಿರುವುದಿಲ್ಲ. ಮೈಸೂರು ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ಬೆಳಗ್ಗೆ 5 ರಿಂದ ರಾತ್ರಿ 11 ಗಂಟೆಯವರೆಗೆ ರೈಲು ಸೇವೆಗಳು ಲಭ್ಯವಿರುತ್ತವೆ ಎಂದು ಬಿಎಂಆರ್‌ಸಿಎಲ್‌ ಮಾಹಿತಿ ನೀಡಿದೆ.

ಬೈಯಪ್ಪನಹಳ್ಳಿ-ಮೈಸೂರು ರಸ್ತೆ ಮತ್ತು ಮೈಸೂರು ರಸ್ತೆ- ಬೈಯಪ್ಪನ ಹಳ್ಳಿ ನಡುವೆ ಮೆಟ್ರೋ ರೈಲು ಸಂಚಾರ ಎಂದಿನಂತೆ ಇರಲಿದೆ. ಅದೇ ರೀತಿ, ಆಗಸ್ಟ್ 23 ಮತ್ತು ಆ. 24ರಂದು ಬೆಳಗ್ಗೆ 5 ಗಂಟೆಯಿಂದ ಬೆಳಗ್ಗೆ 7 ಗಂಟೆ ವರೆಗೆ ಈ ಮಾರ್ಗದಲ್ಲಿ ಮೆಟ್ರೋ ಸಂಚಾರ ಇರುವುದಿಲ್ಲ. ಬೆಳಗ್ಗೆ 7 ಗಂಟೆ ನಂತರ ಎಂದಿನಂತೆ ಮೆಟ್ರೋ ಸಂಚಾರ ಇರಲಿದೆ.

ಇದನ್ನೂ ಓದಿ: ಸಿಗ್ನಲಿಂಗ್ ವ್ಯವಸ್ಥೆ ಪರೀಕ್ಷೆ: ಆ 17, 20, 23, 24 ಮತ್ತು 29ರಂದು ನೇರಳೆ ಮಾರ್ಗದ ಮೆಟ್ರೋ ಸಂಚಾರ ಸಮಯದಲ್ಲಿ ಬದಲಾವಣೆ

ಇನ್ನು ಆಗಸ್ಟ್ 20 ರಿಂದ 29ರ ತನಕ ನೇರಳೆ ಮಾರ್ಗದಲ್ಲಿ ಸ್ವಾಮಿ ವಿವೇಕಾನಂದ ರಸ್ತೆ- ಬೈಯಪ್ಪನಹಳ್ಳಿ, ಕೆ.ಆರ್.ಪುರ, ವೈಟ್‍ಫೀಲ್ಡ್ (ಕಾಡುಗೋಡಿ) ನಡುವೆ ಬೆಳಗ್ಗೆ 5 ರಿಂದ 7 ರ ತನಕ ರೈಲು ಸಂಚಾರ ಇರುವುದಿಲ್ಲ ಎಂದು ಬಿಎಂಆರ್​ಸಿಎಲ್​ ಪ್ರಕರಣಯಣೆಯಲ್ಲಿ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:37 am, Thu, 17 August 23

Follow Us
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ