AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಬರ್ಬರ ಹತ್ಯೆ ಕೇಸ್: ಸಿಕ್ಕಿಬಿದ್ದ 6 ಆರೋಪಿಗಳು

ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಂದಿನಿ ಲೇಔಟ್ ಪೊಲೀಸರು ಆರು ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಗಳೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಬರ್ಬರ ಹತ್ಯೆ ಕೇಸ್: ಸಿಕ್ಕಿಬಿದ್ದ 6 ಆರೋಪಿಗಳು
ಸಾಂದರ್ಭಿಕ ಚಿತ್ರ
ರಮೇಶ್ ಬಿ. ಜವಳಗೇರಾ
|

Updated on: May 29, 2023 | 10:45 AM

Share

ಬೆಂಗಳೂರು: ನಗರದ ಚೌಡೇಶ್ವರಿನಗರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತ ರವಿ ಅಲಿಯಾಸ್​ ಮತ್ತಿ ರವಿ ಕೊಲೆ(Bengaluru Congress Worker Murder Case) ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೇ.24ರ ಬುಧವಾರ ರಾತ್ರಿ 11 ಗಂಟೆಗೆ ಬೆಂಗಳೂರಿನ (Bengaluru)  ಲಗ್ಗೆರೆ ಸಮೀಪದ ಚೌಡೇಶ್ವರಿ ನಗರದ ಹಳ್ಳಿ ರುಚಿ ಹೋಟೆಲ್ ಮುಂಭಾಗ ರವಿ ಅಲಿಯಾಸ್ ಮತ್ತಿ ರವಿಯನ್ನು ದುರ್ಷರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದರು. ಈ ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ನಂದಿನಿ ಲೇಔಟ್ ಠಾಣೆ ಪೊಲೀಸರು, ಮಂಜ, ಸ್ಪಾಟ್ ನಾಗ, ಗೋಪಿ ಸೇರಿ ಒಟ್ಟು ಆರು ಜನರನ್ನು ನಂದಿನಿ ಬಂಧಿಸಿದ್ದಾರೆ.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

ಮತ್ತಿರವಿ ವೃತ್ತಿಯಲ್ಲಿ ಟೆಂಪೋ ಟ್ರಾವೆಲರ್ ಚಾಲಕ ಹಾಗೂ ಮೇಕೆ ಸಾಕಾಣಿಕೆದಾರನಾಗಿದ್ದ. ಮೇ.24ರ ಬುಧವಾರ ಸಂಜೆ ಕೆಲಸ ಮುಗಿಸಿದ ಬಳಿಕ ಬಾರ್‌ನಲ್ಲಿ ಮದ್ಯ ಸೇವಿಸಿ ಅದೇ ಏರಿಯಾದ ಕೃಷ್ಣಮೂರ್ತಿ ಎಂಬ ಕಾಂಗ್ರೆಸ್ ಮುಖಂಡನ ಬರ್ತಡೇ ಪಾರ್ಟಿಯಲ್ಲಿ ಭಾಗಿಯಾಗಿದ್ದ. ಪಾರ್ಟಿ ಮುಗಿಸಿದ ಬಳಿಕ ಮನೆ ಕಡೆ ರವಿ ಹೊರಟಿದ್ದ, ಇದೇ ಸಮಯಕ್ಕೆ ಕಾದು ಕುಳಿತಿದ್ದ ಹಂತಕರು ಬೈಕ್‌ನಲ್ಲಿ ಬಂದು ದಾಳಿ ನಡೆಸಿದ್ದರು. ತಪ್ಪಿಸಿಕೊಳ್ಳುವುದಕ್ಕಾಗಿ ರವಿ ಓಡಿದ್ದು, ಹಂತಕರು ಅಟ್ಟಾಡಿಸಿ ಹತ್ಯೆಗೈದಿದ್ದರು. ಅದಲ್ಲದೇ ಆತನ ತಲೆಯ ಮೇಲೆ ಸೈಜ್ ಕಲ್ಲು ಎತ್ತಾಕಿ ಪರಾರಿಯಾಗಿದ್ದರು.ಈ ಬಗ್ಗೆ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಘಟನೆ ಹಿನ್ನೆಲೆ

ರವಿ ಕೊಲೆ ಮಾಡಿದ ಹಂತಕರು ಕೊಲೆಗೂ ಮುನ್ನ ಏರಿಯಾದಲ್ಲಿ ಹಾಕಿದ್ದ ರವಿಕುಮಾರ್ ಅವರ ಫ್ಲೆಕ್ಸ್ ಹರಿದು ಹಾಕಿದ್ದರು. ಬಳಿಕ ರವಿ ಮನೆ ಮುಂದೆ ಬಂದು ಕಾದು ಕುಳಿತಿದ್ದರು. ಮೇ 24ರಂದು ಕಾಂಗ್ರೆಸ್ ಮುಖಂಡ ಹಾಗೂ ಫೈನಾನ್ಷಿಯರ್ ಕೃಷ್ಣ ಮೂರ್ತಿ ಹುಟ್ಟುಹಬ್ಬ ಇತ್ತು. ಈ ಹಿನ್ನೆಲೆ ಕಾರ್ಯಕ್ರಮಕ್ಕೆ ನೂರಾರು ಕಾರ್ಯಕರ್ತರು ಆಗಮಿಸಿದ್ದರು. ಇದೇ ಹುಟ್ಟುಹಬ್ಬಕ್ಕೆ ಹಾಜರಾಗಲು ರವಿ ಖುಷಿ ಖುಷಿಯಿಂದ ಮನೆಯಿಂದ ಆಚೆ ಬಂದಾಗ ದುಷ್ಕರ್ಮಿಗಳು ಅಟ್ಯಾಕ್ ಮಾಡಿದ್ದರು. ತಪ್ಪಿಸಿಕೊಳ್ಳೋ ಭರದಲ್ಲಿ ಓಡಿದ ರವಿಯನ್ನ ಅಟ್ಟಾಡಿಸಿಕೊಂಡು ಹಲ್ಲೆ ಮಾಡಿದ್ದರು. ಕೊನೆಗೆ ಕೊಚ್ಚಿ ಕೊಲೆ ಮಾಡಿ ಕಲ್ಲು ಎತ್ತಿ ಹಾಕಿ ಪರಾರಿಯಾಗಿದ್ದರು. ಸ್ಥಳಕ್ಕೆ ಆಗಮಿಸಿದ್ದ ನಂದಿನಿ ಲೇಔಟ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಹಂಕತರ ಪತ್ತೆಗೆ ಬಲೆ ಬೀಸಿದ್ದರು. ಇದೀಗ ಘಟನೆ ನಡೆದು ಐದು ದಿನಗಳಲ್ಲಿ ಕೊಲೆಗಾರರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!