AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷದಂದು ಬಿಎಂಟಿಸಿಗೆ ಭರ್ಜರಿ ಆದಾಯ: ನಿನ್ನೆ ಒಂದೇ ದಿನ ಗಳಿಸಿದ್ದೆಷ್ಟು ಗೊತ್ತಾ?

ಹೊಸ ವರ್ಷಾಚರಣೆಗೆ ಬೆಂಗಳೂರಿನ ಬಿಎಂಟಿಸಿ ಹೆಚ್ಚುವರಿ ಬಸ್ ಸೇವೆಗಳನ್ನು ಒದಗಿಸಿ ಯಶಸ್ವಿಯಾಗಿದೆ. ರಾತ್ರಿ 11 ರಿಂದ ಮಧ್ಯರಾತ್ರಿ 3 ರವರೆಗೆ 200 ವಿಶೇಷ ಬಸ್​​ಗಳು ಸಂಚಾರ ಮಾಡಿವೆ. ನಿನ್ನೆ ಒಂದೇ ದಿನ ಸರಿಸುಮಾರು 1 ಲಕ್ಷ ಅಧಿಕ ಪ್ರಯಾಣಿಕರು ಸಂಚಾರ ಮಾಡಿದ್ದು, ಬಿಎಂಟಿಸಿ ಬೊಕ್ಕಸಕ್ಕೆ ಲಕ್ಷ ಲಕ್ಷ ರೂ ಆದಾಯ ಹರಿದುಬಂದಿದೆ.

ಹೊಸ ವರ್ಷದಂದು ಬಿಎಂಟಿಸಿಗೆ ಭರ್ಜರಿ ಆದಾಯ: ನಿನ್ನೆ ಒಂದೇ ದಿನ ಗಳಿಸಿದ್ದೆಷ್ಟು ಗೊತ್ತಾ?
ಬಿಎಂಟಿಸಿ ಬಸ್​​
ಕಿರಣ್​ ಸೂರ್ಯ
| Edited By: |

Updated on: Jan 01, 2026 | 3:25 PM

Share

ಬೆಂಗಳೂರು, ಜನವರಿ 1: 2025ಕ್ಕೆ ಗುಡ್ ಬೈ ಹೇಳಿ 2026ರನ್ನು ಜನರು ಅದ್ಧೂರಿಯಾಗಿ ವೆಲ್​ಕಂ ಮಾಡಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸಂಭ್ರಮಾಚರಣೆ ಜೋರಾಗಿತ್ತು. ಹೊಸ ವರ್ಷದ (new year) ಸಂಭ್ರಮಾಚರಣೆಗೆ ಅನುಕೂಲವಾಗುವಂತೆ ಬಿಎಂಟಿಸಿಯಿಂದ (BMTC) ಹೆಚ್ಚುವರಿ ಬಸ್​ ಸೇವೆ ಒದಗಿಸಲಾಗಿತ್ತು. ಹೀಗಾಗಿ ಬಿಎಂಟಿಸಿ ಭಾರಿ ಆದಾಯ ಗಳಿಸಿದೆ. ನಿನ್ನೆ (ಬುಧವಾರ) ಒಂದೇ ದಿನ ಬಿಎಂಟಿಸಿಗೆ ಬರೋಬ್ಬರಿ 10 ಲಕ್ಷ ರೂ ಆದಾಯ ಹರಿದುಬಂದಿದೆ.

ಬಿಎಂಟಿಸಿ ಚೀಫ್ ಟ್ರಾಫಿಕ್ ಮ್ಯಾನೇಜರ್ ಪ್ರಭಾಕರ್ ರೆಡ್ಡಿ ಹೇಳಿದ್ದಿಷ್ಟು 

ಈ ಬಗ್ಗೆ ಬಿಎಂಟಿಸಿ ಚೀಫ್ ಟ್ರಾಫಿಕ್ ಮ್ಯಾನೇಜರ್ ಪ್ರಭಾಕರ್ ರೆಡ್ಡಿ ಮಾತನಾಡಿದ್ದು, ಹೊಸ ವರ್ಷಕ್ಕೆ ಹೆಚ್ಚುವರಿ ಬಸ್ ಸೇವೆ ಒದಗಿಸಲಾಗಿತ್ತು. ಹೆಚ್ಚುವರಿ 200 ಟ್ರಿಪ್ ಮಾಡಲಾಗಿದೆ. 4400 ಕಿ.ಮೀ ಬಸ್ ಓಡಾಡಿವೆ. ರಾತ್ರಿ 11 ಗಂಟೆಯಿಂದ ಮಧ್ಯರಾತ್ರಿ 3 ಗಂಟೆ ತನಕ ಬಸ್ ಸೇವೆ ಒದಗಿಸಲಾಗಿತ್ತು. ಸರಿಸುಮಾರು ಒಂದು ಲಕ್ಷ ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ. ನಿನ್ನೆ ಒಂದೇ ದಿನ ಬಿಎಂಟಿಸಿ 10 ಲಕ್ಷ ರೂ ಆದಾಯ ಗಳಿಸಿದೆ.

ಇದನ್ನೂ ಓದಿ: ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಆದ ಕಲೆಕ್ಷನ್​ ಎಷ್ಟು?

ಕೋರಮಂಗಲ, ಇಂದಿರಾನಗರ, ಮಾಲ್ ಆಫ್ ಏಶಿಯಾ, ಎಂಜಿ ರಸ್ತೆ ಹೀಗೆ ನಾನಾ ಕಡೆಗಳಲ್ಲಿ ಸೇವೆ ವಿಸ್ತರಣೆ ಮಾಡಲಾಗಿತ್ತು. ಡಿಸೆಂಬರ್​ 20ರಂದು 6 ಕೋಟಿ 75 ಲಕ್ಷ ರೂ ಆದಾಯ ಇತ್ತು. ಐಟಿ ಬಿಟಿ ಜನರಿಗೆ ರಜೆ ಇರುವ ಕಾರಣ, ಡಿಸೆಂಬರ್ 24ರಿಂದ ಬಸ್ ಪ್ರಯಾಣಿಕರ ಸಂಖ್ಯೆ ಇಳಿಕೆ ಆಗಿತ್ತು ಎಂದು ಹೇಳಿದ್ದಾರೆ.

ಇದನ್ನೂ ಓದಿ: ನ್ಯೂ ಇಯರ್​​​ ಸಂಭ್ರಮ ಮಧ್ಯೆ ಕಿರಿಕ್: ಗೆಳೆಯನಿಗೆ ಹೊಡೆದ ಯುವತಿ, ನಡುರೋಡಲ್ಲೇ ಜೋಡಿ ಹೈಡ್ರಾಮಾ, ಲಾಠಿ ಚಾರ್ಜ್

ಡಿಸೆಂಬರ್​ 25, 27, 28ರಂದು ಕಡಿಮೆ ಪ್ರಯಾಣಿಕರು ಓಡಾಟ ಮಾಡಿದ್ದು, 60 ಲಕ್ಷ ರೂ ಆದಾಯ ಕಡಿಮೆ ಆಗಿತ್ತು. 6 ದಿನಗಳಲ್ಲಿ ಪ್ರಯಾಣಿಕರ ಸಂಖ್ಯೆ ಇಳಿಕೆ ಇತ್ತು. ಆದರೆ ಹೊಸ ವರ್ಷ ಹಿನ್ನೆಲೆ ಬುಧವಾರ ಒಂದೇ ದಿನ 1 ಲಕ್ಷ ಪ್ರಯಾಣಿಕರು ಹೆಚ್ಚಾಗಿದ್ದಾರೆ ಎಂದು ಬಿಎಂಟಿಸಿ ಚೀಫ್ ಟ್ರಾಫಿಕ್ ಮ್ಯಾನೇಜರ್ ಪ್ರಭಾಕರ್ ರೆಡ್ಡಿ ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಪ್ರಮಾಣವಚಕ್ಕೆ ಸಿದ್ಧತೆ: ಜ್ಯೋತಿಷಿ ಬಳಿ ಮುಹೂರ್ತ ಕೇಳಿದ ಡಿಕೆ ಶಿವಕುಮಾರ್
ಪ್ರಮಾಣವಚಕ್ಕೆ ಸಿದ್ಧತೆ: ಜ್ಯೋತಿಷಿ ಬಳಿ ಮುಹೂರ್ತ ಕೇಳಿದ ಡಿಕೆ ಶಿವಕುಮಾರ್
ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಮತ್ತೆ ಶಕ್ತಿ ಕೇಂದ್ರವಾದ ದೆಹಲಿ
ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಮತ್ತೆ ಶಕ್ತಿ ಕೇಂದ್ರವಾದ ದೆಹಲಿ
ಡಿಕೆ ಶಿವಕುಮಾರ್​​ಗೆ ಸದ್ಯದಲ್ಲೇ ಸಾಡೇ ಸಾತಿ ಶನಿ ಕಾಟ!
ಡಿಕೆ ಶಿವಕುಮಾರ್​​ಗೆ ಸದ್ಯದಲ್ಲೇ ಸಾಡೇ ಸಾತಿ ಶನಿ ಕಾಟ!
ಮುಂದಿನ ಸಿಎಂ ಯಾರು ಅಂತಿದ್ದಂತೆ ಸಿದ್ದರಾಮಯ್ಯ ಹೇಳಿದ್ದೇನು ನೋಡಿ
ಮುಂದಿನ ಸಿಎಂ ಯಾರು ಅಂತಿದ್ದಂತೆ ಸಿದ್ದರಾಮಯ್ಯ ಹೇಳಿದ್ದೇನು ನೋಡಿ
ಸಿದ್ದರಾಮಯ್ಯ ಪದತ್ಯಾಗಕ್ಕೆ ಹುಟ್ಟೂರಲ್ಲಿ ಆಕ್ರೋಶ
ಸಿದ್ದರಾಮಯ್ಯ ಪದತ್ಯಾಗಕ್ಕೆ ಹುಟ್ಟೂರಲ್ಲಿ ಆಕ್ರೋಶ
ರಾಜೀನಾಮೆ ಬೆನ್ನಲ್ಲೇ ಡಾ.ರಾಜ್​ಕುಮಾರ್ ಮಾತು ನೆನೆದ ಸಿದ್ರಾಮಯ್ಯ
ರಾಜೀನಾಮೆ ಬೆನ್ನಲ್ಲೇ ಡಾ.ರಾಜ್​ಕುಮಾರ್ ಮಾತು ನೆನೆದ ಸಿದ್ರಾಮಯ್ಯ
ಸಿದ್ದರಾಮಯ್ಯ ರಾಜೀನಾಮೆಗೆ ವಿಶೇಷ ಸೂಚನೆ ನೀಡಿದ ರಾಜ್ಯಪಾಲರ ಕಾರ್ಯದರ್ಶಿ!
ಸಿದ್ದರಾಮಯ್ಯ ರಾಜೀನಾಮೆಗೆ ವಿಶೇಷ ಸೂಚನೆ ನೀಡಿದ ರಾಜ್ಯಪಾಲರ ಕಾರ್ಯದರ್ಶಿ!
ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ಸಿದ್ದರಾಮಯ್ಯ ಫಸ್ಟ್​​ ರಿಯಾಕ್ಷನ್
ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ಸಿದ್ದರಾಮಯ್ಯ ಫಸ್ಟ್​​ ರಿಯಾಕ್ಷನ್
ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ
ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ
ಎನ್​​ಟಿಆರ್ ಸಮಾಧಿಗೆ ಜೂ ಎನ್​​ಟಿಆರ್ ಭೇಟಿ, ಕಾಲಿಗೆ ಬಿದ್ದ ಅಭಿಮಾನಿ
ಎನ್​​ಟಿಆರ್ ಸಮಾಧಿಗೆ ಜೂ ಎನ್​​ಟಿಆರ್ ಭೇಟಿ, ಕಾಲಿಗೆ ಬಿದ್ದ ಅಭಿಮಾನಿ