AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವರ್ಷ ಎಂಜಿ ರೋಡ್​ನಲ್ಲಿ ಹೊಸ ವರ್ಷಾಚರಣೆಗೆ ಅವಕಾಶ ಅನುಮಾನ: ಕಾರಣ ಏನು ಗೊತ್ತಾ?

ನ್ಯೂ ಇಯರ್ ಸೆಲೆಬ್ರೇಷನ್ ಎಂದರೆ ಅದು ಸಿಲಿಕಾನ್ ಸಿಟಿ ಬೆಂಗಳೂರಿನ ಎಂಜಿ ರೋಡ್, ಬ್ರಿಗೇಡ್ ರೋಡ್​ನದ್ದು ಎನ್ನುವ ರೀತಿಯಲ್ಲಿ ಆಚರಣೆ ಇರುತ್ತದೆ. ಆದರೆ ಆರ್​​ಸಿಬಿ ವಿಜಯೋತ್ಸವ ಕಾಲ್ತುಳಿತ ಘಟನೆಯ ನಂತರ ಎಚ್ಚೆತ್ತುಕೊಂಡಿರುವ ಸರ್ಕಾರ ಈ ಬಾರಿ ಹೊಸ ವರ್ಷಾಚರಣೆಗೆ ಅನುಮತಿ ನೀಡುವುದು ಅನುಮಾನ ಎನ್ನಲಾಗಿದೆ.

ಈ ವರ್ಷ ಎಂಜಿ ರೋಡ್​ನಲ್ಲಿ ಹೊಸ ವರ್ಷಾಚರಣೆಗೆ ಅವಕಾಶ ಅನುಮಾನ: ಕಾರಣ ಏನು ಗೊತ್ತಾ?
ಎಂಜಿ ರೋಡ್​
Kiran Surya
| Edited By: |

Updated on: Dec 11, 2025 | 6:42 AM

Share

ಬೆಂಗಳೂರು, ಡಿಸೆಂಬರ್ 11: ಬೆಂಗಳೂರು (Bengaluru) ನಗರದಲ್ಲಿ ಹೊಸ ವರ್ಷವನ್ನು (New Year) ಭರ್ಜರಿಯಾಗಿ ಸ್ವಾಗತಿಸಲು ಯುವಕ, ಯುವತಿಯರು ಪ್ಲ್ಯಾನ್ ಮಾಡಿಕೊಳ್ಳುತ್ತಿದ್ದಾರೆ. ಆದರೆ, ಡಿಸೆಂಬರ್ 31 ರ ರಾತ್ರಿ ನ್ಯೂಇಯರ್ ಕಿಕ್ಕೇರಿಸದಂತೆ ಮಾಡಲು ಸರ್ಕಾರ ಚಿಂತನೆ ನಡೆಸುತ್ತಿದೆ. ಪೊಲೀಸ್ ಹಾಗೂ ಜಿಬಿಎ ಅಧಿಕಾರಿಗಳು ಈಗಾಗಲೇ ಸರಣಿ ಸಭೆ ಮಾಡಿದ್ದಾರೆ. ಈ ವೇಳೆ ಎಂಜಿ ರೋಡ್​ನಲ್ಲಿ ಹೊಸ ವರ್ಷಾಚರಣೆಗೆ ಅವಕಾಶ ನೀಡಬಾರದು ಎಂದು ಅಧಿಕಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಬಾರಿ ಹೊಸ ವರ್ಷಾಚರಣೆಗೆ ಲಕ್ಷಾಂತರ ಜನ ಸೇರುವ ನಿರೀಕ್ಷೆಯಿದ್ದು, ಚಿನ್ನಸ್ವಾಮಿ ಕಾಲ್ತುಳಿತದ ನಂತರ ಸರ್ಕಾರದಿಂದಲೂ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಸಾವಿರಾರು ಜನ ಸೇರುವ ಕಾರ್ಯಕ್ರಮಗಳಿಗೆ ಅನ್ವಯ ಆಗುವಂತೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಮಾತನಾಡಿದ ಬ್ರಿಗೇಡ್ ರೋಡ್ ವ್ಯಾಪಾರಿಗಳ ಅಸೋಸಿಯೇಶನ್ ಸೆಕ್ರೆಟರಿ, ನಾವು ಇಲ್ಲಿ ಯಾವುದೇ ಕಾರ್ಯಕ್ರಮ ಮಾಡುವುದಿಲ್ಲ ಕೇವಲ ಲೈಟಿಂಗ್ಸ್ ವ್ಯವಸ್ಥೆ ಮಾತ್ರ ಮಾಡುತ್ತೇವೆ ಎಂದಿದ್ದಾರೆ.

ಕಾರ್ಯಕ್ರಮಗಳಲ್ಲಿ ಏನಾದರೂ ಅನಾಹುತ ಸಂಭವಿಸಿದೆ ಆಯೋಜಕರೇ ಹೊಣೆ ಎಂಬ ನಿಯ ಇದ್ದು, ಹೊಸ ವರ್ಷಾಚರಣೆ ವೇಳೆ ಏನಾದರೂ ಅನಾಹುತ ಸಂಭವಿಸಿದರೆ ಯಾರನ್ನು ಹೊಣೆ ಮಾಡುವುದು ಎಂಬ ಪ್ರಶ್ನೆ ಉದ್ಭವಿಸಿದೆ. ಸರ್ಕಾರ ಪೊಲೀಸರ ಮೇಲೆಯೇ ಕ್ರಮ ತೆಗೆದುಕೊಂಡರೇ ಎಂಬ ಆತಂಕ ಪೊಲೀಸರದ್ದಾಗಿದೆ.

ದೆಹಲಿ ಸ್ಫೋಟದ ನಂತರ ಹೈ ಅಲರ್ಟ್ ಆಗಿರುವ ಪೊಲೀಸರು

ಭದ್ರತಾ ದೃಷ್ಟಿಯಿಂದಲೂ ಪೊಲೀಸರು ಹೈಅಲರ್ಟ್ ಆಗಿದ್ದಾರೆ. ದೆಹಲಿ ಸ್ಫೋಟದ ನಂತರ ದೇಶಾದ್ಯಂತ ಕಟ್ಟೆಚ್ಚರವಹಿಸಲಾಗಿದೆ. ಹೀಗಾಗಿ ಅಧಿಕಾರಿಗಳು ಹೊಸ ವರ್ಷಾಚರಣೆಯ ಸಾಧಕ ಬಾಧಕಗಳ ಬಗ್ಗೆ ಸರ್ಕಾರಕ್ಕೆ ವರದಿ ನೀಡಲಿದ್ದಾರೆ. ಸರ್ಕಾರದ ತೀರ್ಮಾನದ ನಂತರವೇ ಎಂಜಿ ರೋಡ್ ಸೆಲೆಬ್ರೇಶನ್ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎನ್ನಲಾಗಿದೆ. ಈ ಬಗ್ಗೆ ಮಾತನಾಡಿದ ಬೆಂಗಳೂರಿಗರು, ಅನುಮತಿ ನೀಡಿದರೆ ತುಂಬಾ ಚೆನ್ನಾಗಿರುತ್ತದೆ ಎಂದಿದ್ದಾರೆ.

ಇದನ್ನೂ ಓದಿ: ಈ ವರ್ಷ ಭಾರೀ ಗಮನ ಸೆಳೆದ ಭಾರತದ ಪ್ರಮುಖ ದೇವಾಲಯಗಳಿವು

ಒಟ್ಟಿನಲ್ಲಿ, ಹೊಸ ವರ್ಷವನ್ನು ಭರ್ಜರಿಯಾಗಿ ಸ್ವಾತಗ ಮಾಡೋಣ ಅಂದುಕೊಂಡಿದ್ದ ಯುವಕ, ಯುವತಿಯರಿಗೆ ಅನುಮತಿ ಸಿಗೋದು ಅನುಮಾನ ಎಂಬ ಸುದ್ದಿ ನೋವುಂಟು ಮಾಡಿರುವುದಂತೂ ಸುಳ್ಳಲ್ಲ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!