AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂಇಯರ್​ ಪಾರ್ಟಿಗೆ ಡ್ರಗ್ಸ್​ ಸಪ್ಲೈ ಮಾಡುತ್ತಿದ್ದ ವೇಳೆ ಪೊಲೀಸ್​​​​ ಕೈಗೆ ಸಿಕ್ಕಿಬಿದ್ದ ನೈಜಿರಿಯಾ ಮೂಲದ ವ್ಯಕ್ತಿ

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡ್ರಗ್ಸ್ ಸಪ್ಲೈ ಮಾಡುತ್ತಿದ್ದ ನೈಜಿರಿಯಾ ಮೂಲದ ವ್ಯಕ್ತಿಯನ್ನು ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ವಿಶೇಷ ಕಾರ್ಯಾಚರಣೆಯಲ್ಲಿ 21 ಗ್ರಾಂ ಕೊಕೇನ್ ಹಾಗೂ 30 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಈ ಹಿಂದೆ ಕೂಡ ಡ್ರಗ್ಸ್ ಮಾರಾಟದಲ್ಲಿ ಭಾಗಿಯಾಗಿದ್ದ ಆರೋಪಿ, ಏರ್‌ಪೋರ್ಟ್ ಬಳಿ ಸಿಕ್ಕಿಬಿದ್ದಿದ್ದಾನೆ. ಬೆಂಗಳೂರಿನಲ್ಲಿ ನಡೆಯುವ ಪಾರ್ಟಿಗಳಿಗೆ ಡ್ರಗ್ಸ್ ಪೂರೈಕೆ ತಡೆಯಲು ತನಿಖೆ ಮುಂದುವರಿದಿದೆ.

ನ್ಯೂಇಯರ್​ ಪಾರ್ಟಿಗೆ ಡ್ರಗ್ಸ್​ ಸಪ್ಲೈ ಮಾಡುತ್ತಿದ್ದ ವೇಳೆ ಪೊಲೀಸ್​​​​ ಕೈಗೆ ಸಿಕ್ಕಿಬಿದ್ದ ನೈಜಿರಿಯಾ ಮೂಲದ ವ್ಯಕ್ತಿ
ಬೆಂಗಳೂರು ಡ್ರಗ್ಸ್ ವಶ
ನವೀನ್ ಕುಮಾರ್ ಟಿ
| Edited By: |

Updated on:Dec 31, 2025 | 10:08 PM

Share

ಬೆಂಗಳೂರು, ಡಿ.31: ಒಂದು ಕಡೆಯಲ್ಲಿ ಬೆಂಗಳೂರಿನಲ್ಲಿ (Bengaluru drug) ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಎಂ.ಜಿ. ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್, ಕೋರಮಂಗಲ ಹಾಗೂ ಇಂದಿರಾನಗರ ಇನ್ನು ಅನೇಕ ಕಡೆ ಈಗಾಗಲೇ ಜನ ಸೇರಿದ್ದಾರೆ. ಪಬ್​​​ಗಳಲ್ಲಿ ಪಾರ್ಟಿ ಶುರುವಾಗಿದೆ. ಜತೆಗೆ ಪೊಲೀಸ್​​​​ ಕಣ್ಗಾವಲು ಇದೆ. ಬಿಗಿ ಭದ್ರತೆ ಇದೆ. ಇದರ ನಡುವೆ ನ್ಯೂಇಯರ್​ ಪಾರ್ಟಿಗೆ ಡ್ರಗ್ಸ್​ ಸಪ್ಲೈ ಮಾಡಲು ಹೋಗಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ನೈಜಿರಿಯಾ ಮೂಲದ ವ್ಯಕ್ತಿ ಡ್ರಗ್ಸ್​ ಸಪ್ಲೈ ಮಾಡುತ್ತಿದ್ದ ಎಂದು ಹೇಳಲಾಗಿದೆ. ದೇವನಹಳ್ಳಿ ಠಾಣೆ ಪೊಲೀಸರಿಂದ ವಿಶೇಷ ಕಾರ್ಯಾಚರಣೆ ನಡೆಸಿದ ವೇಳೆ ಈತ ಸಿಕ್ಕಿಬಿದ್ದಿದ್ದಾನೆ. ಏರ್​​ಪೋರ್ಟ್​ ಬ್ಯಾಕ್​ ಗೇಟ್​ ಬಳಿ ಮಾರುತ್ತಿದ್ದ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಇದೀಗ ಈ ನೈಜಿರಿಯಾ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದ್ದು, 21 ಗ್ರಾಂ ಕೊಕೇನ್ ಹಾಗೂ 30 ಗ್ರಾಂ MDMA ಸೀಜ್​ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಹೊಸ ವರ್ಷ ಹಿನ್ನೆಲೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಎಂದು ಹೇಳಲಾಗಿದೆ. ಈ ಹಿಂದೆ ಕೂಡ ಈ ವ್ಯಕ್ತಿ ಡ್ರಗ್ಸ್​​​​​ ಮಾರಾಟ ಮಾಡುತ್ತಿದ್ದ ಎಂದು ಹೇಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ. ಇತರ ಪ್ರದೇಶದಲ್ಲೂ ಕೂಡ ಪೊಲೀಸರ ವಿಶೇಷ ತಂಡ ಕಾರ್ಯಚರಣೆ ನಡೆಸಿದ್ದಾರೆ.

ಡ್ರಗ್ ಫ್ಯಾಕ್ಟರಿ ಪತ್ತೆ ಮಾಡಿದ ಮಹಾ ಪೊಲೀಸ್:

ಈ ಹಿಂದೆ ಮಹಾರಾಷ್ಟ್ರ ಪೊಲೀಸರು ಬಂದು ಬೆಂಗಳೂರಿನಲ್ಲಿದ್ದ ಡ್ರಗ್ಸ್ ಫ್ಯಾಕ್ಟರಿಯನ್ನು ಪತ್ತೆ ಮಾಡಿದ್ದರು. ಫ್ಯಾಕ್ಟರಿ ತಯಾರಿಸಲು ದಂಧೆಕೋರರು ಆಲ್ ಇಂಡಿಯಾ ಪ್ಲಾನ್ ಮಾಡುತ್ತಿದ್ದರು ಎಂದು ತಿಳಿದು ಬಂದಿತು. ಕೇವಲ 8 ಕಿ.ಮೀ ವ್ಯಾಪ್ತಿಯಲ್ಲಿ ದಂಧೆ ನಡೆಸಲು ಪಕ್ಕಾ ಸೆಟಪ್ ಮಾಡಿದ್ದರು. ಇದರ ಮಧ್ಯೆ ಡ್ರಗ್ಸ್ ದಂಧೆಯನ್ನು ಭೇದಿಸಿದ್ದಾರೆ. ಈ ಸಂಬಂಧ ಬೆಂಗಳೂರಿನ ವಿವಿಧ ಪೊಲೀಸ್ ಠಾಣೆ ಮೂವರು ಇನ್ಸ್​​ಪೆಕ್ಟರ್​​ಗಳನ್ನು ಅಮಾನತು ಮಾಡಲಾಗಿದೆ.

ಇದನ್ನೂ ಓದಿ: ಅಂತಾರಾಷ್ಟ್ರೀಯ ಜಾಲಕ್ಕೆ NCB ಶಾಕ್​​: 8 ಕೋಟಿ ಮೌಲ್ಯದ ಡ್ರಗ್ಸ್​​ ಸೀಜ್​

ಅಂತಾರಾಷ್ಟ್ರೀಯ ಮಾದಕವಸ್ತು ಜಾಲವನ್ನು ಭೇದಿಸಿದ ಎನ್‌ಸಿಬಿ:

ಅಂತಾರಾಷ್ಟ್ರೀಯ ಮಾದಕವಸ್ತು ಜಾಲವನ್ನು ಎನ್‌ಸಿಬಿ ಭೇದಿಸಿದೆ. ಬೆಂಗಳೂರು ಮೂಲಕ ಕಾರ್ಯನಿರ್ವಹಿಸುತ್ತಿದ್ದ ಅಂತಾರಾಷ್ಟ್ರೀಯ ಮಾದಕವಸ್ತು ಜಾಲಗಳು ಕಂಡು ಬಂದಿದೆ. ಸುಮಾರು 160 ಕಿಲೋಗ್ರಾಂ ತೂಕದ ಖಾಟ್ ಎಲೆಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಮೌಲ್ಯವು ಸುಮಾರು 8 ಕೋಟಿ ರೂ. ಎಂದು ಅಂದಾಜಿಸಲಾಗಿದೆ. 2018ರಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಖಾಟ್ ಅನ್ನು ಮಾದಕ ವಸ್ತು ಪಟ್ಟಿಗೆ ಸೇರಿಸಿಸಲಾಗಿತ್ತು. ಆ ಬಳಿಕ ಇಷ್ಟು ದೊಡ್ಡ ಪ್ರಮಾಣದಲ್ಲಿ ಖಾಟ್​​ ಎಲೆಗಳನ್ನು ವಶಪಡಿಸಿಕೊಂಡಿರೋದು ರಾಜ್ಯದಲ್ಲಿ ಇದೇ ಮೊದಲು ಎಂದು ಎನ್​​ಸಿಬಿ ತಿಳಿಸಿದೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:08 pm, Wed, 31 December 25

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ