AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಪೊಲೀಸ್​​ರೊಂದಿಗೆ ಕೈಜೋಡಿಸಿದ ಪಾಲಿಕೆ: ಏನೆಲ್ಲಾ ರೂಲ್ಸ್ ಗೊತ್ತಾ?

ಬೆಂಗಳೂರಿನಲ್ಲಿ ಹೊಸ ವರ್ಷದ ಆಚರಣೆಗೆ ಸರ್ಕಾರ ಅನುಮತಿ ನೀಡಿದೆ. ರಾತ್ರಿ 1 ರಿಂದ 2ರೊಳಗೆ ಆಚರಣೆ ಮುಗಿಸಬೇಕು. M.G ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್‌ಗಳಲ್ಲಿ ಆಚರಣೆಗೆ ಅನುಮತಿ ಇದೆ. ರಾತ್ರಿ 9 ಗಂಟೆಯ ನಂತರ ಪ್ರಮುಖ ಫ್ಲೈಓವರ್‌ಗಳು ಬಂದ್ ಆಗಲಿವೆ. ಡ್ರಿಂಕ್ ಆ್ಯಂಡ್ ಡ್ರೈವ್ ಮತ್ತು ಅನುಚಿತ ವರ್ತನೆಗೆ ಕಠಿಣ ಕ್ರಮಕ್ಕೆ ಸೂಚಿಸಲಾಗಿದೆ.

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಪೊಲೀಸ್​​ರೊಂದಿಗೆ ಕೈಜೋಡಿಸಿದ ಪಾಲಿಕೆ: ಏನೆಲ್ಲಾ ರೂಲ್ಸ್ ಗೊತ್ತಾ?
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಪೊಲೀಸ್​​ನೊಂದಿಗೆ ಕೈಜೋಡಿಸಿದ ಪಾಲಿಕೆ: ಏನೆಲ್ಲ ರೂಲ್ಸ್ ಗೊತ್ತಾ?
ಶಾಂತಮೂರ್ತಿ
| Edited By: |

Updated on:Dec 30, 2024 | 6:54 PM

Share

ಬೆಂಗಳೂರು, ಡಿಸೆಂಬರ್​ 30: ಹೊಸ ವರ್ಷವನ್ನ (New Year) ವೆಲ್ ಕಮ್ ಮಾಡುವುದಕ್ಕೆ ಕೇವಲ ಒಂದೇ ದಿನ ಬಾಕಿ ಉಳಿದಿದೆ. ರಾಜಧಾನಿಯಲ್ಲಿ ಹೊಸ ವರ್ಷ ಆಚರಣೆಗೆ ಸಕಲ ಸಿದ್ಧತೆ ನಡೆದಿದ್ದರೆ, ಇತ್ತ ಸಂಭ್ರಮಾಚರಣೆಗೆ ಯಾವುದೇ ಅಡ್ಡಿಯಾಗದಂತೆ ಕ್ರಮವಹಿಸುವುದಕ್ಕೆ ಖಾಕಿಪಡೆ ಸಜ್ಜಾಗಿದೆ. ಬಿಬಿಎಂಪಿ ಕೂಡ ನ್ಯೂ ಇಯರ್ ಸೆಲೆಬ್ರೇಷನ್​ಗೆ ಸಾಥ್ ನೀಡುತ್ತಿದೆ. ಸದ್ಯ ನ್ಯೂ ಇಯರ್ ಸಂಭ್ರಮಾಚರಣೆಗೆ ಬೆಂಗಳೂರಿನಲ್ಲಿ ಯಾವೆಲ್ಲಾ ರೂಲ್ಸ್ ಇರುತ್ತೆ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

ಸಿಲಿಕಾನ್ ಸಿಟಿಯಲ್ಲಿ ನ್ಯೂ ಇಯರ್ ಸಂಭ್ರಮಾಚರಣೆಗೆ ಸಕಲ ತಯಾರಿ ನಡೆದಿದೆ. ಎಂ.ಜಿ.ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್ ರಂಗೇರುತ್ತಿದ್ರೆ, ಯಾವುದೇ ಕಹಿ ಘಟನೆ ನಡೆಯದಂತೆ ಖಾಕಿಪಡೆ ಕಣ್ಣಿಡೋಕೆ ಸಜ್ಜಾಗಿದೆ. ಇತ್ತ ಪ್ರತಿವರ್ಷದಂತೆ ಈ ಬಾರೀ ಹೊಸ ವರ್ಷಕ್ಕೆ ಪಾಲಿಕೆ ಕೂಡ ಕೈ ಜೋಡಿಸೋಕೆ ಸಜ್ಜಾಗಿದ್ದು, ಕಸದ ನಿರ್ವಹಣೆ, ಸಿಸಿಟಿವಿ ಕ್ಯಾಮರಾ ನಿರ್ವಹಣೆ ಸೇರಿ ಇನ್ನಿತರ ಕೆಲಸಗಳಲ್ಲಿ ಪೊಲೀಸ್ ಇಲಾಖೆ ಜೊತೆ ಕೈಜೋಡಿಸೋಕೆ ಸಜ್ಜಾಗಿದೆ. ಅಲ್ಲದೇ ಹೆಚ್ಚು ಜನ ಸೇರುವ ಕಡೆ ಪ್ರಾಥಮಿಕ ಚಿಕಿತ್ಸೆಗೆ ಪಾಲಿಕೆ ವೈದ್ಯರನ್ನ ನೇಮಿಸಿ ಮೇಲ್ವಿಚಾರಣೆ ನಡೆಸುವುದು ಪಾಲಿಕೆ ರೆಡಿಯಾಗಿದೆ.

ನ್ಯೂ ಇಯರ್​ಗೆ ಏನೆಲ್ಲ ರೂಲ್ಸ್?

  • ರಾತ್ರಿ 1ರಿಂದ 2 ಗಂಟೆಯೊಳಗೆ ಸೆಲೆಬ್ರೇಷನ್ ಮುಗಿಸಬೇಕು
  • ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಇಂದಿರಾನಗರದಲ್ಲಿ ಆಚರಣೆಗೆ ಅನುಮತಿ.
  • ರಾತ್ರಿ 9 ಗಂಟೆ ಬಳಿಕ ಪ್ರಮುಖ ಫ್ಲೈ ಓವರ್​ಗಳು ಬಂದ್​
  • ಸಂಜೆ 7 ಗಂಟೆ ಬಳಿಕ ಎಂ.ಜಿ.ರಸ್ತೆ, ಚರ್ಚ್ ಸ್ಟ್ರೀಟ್ ವಾಹನ ಸಂಚಾರ ಬಂದ್​
  • ಹೆಚ್ಚು ಜನ ಸೇರುವ ಕಡೆ 800 ಸಿಸಿಟಿವಿ ಕ್ಯಾಮರಾ ಅಳವಡಿಕೆ
  • ಮಹಿಳೆಯರ ಸುರಕ್ಷತೆಗಾಗಿ ಮಹಿಳಾ ಪೊಲೀಸರ ನಿಯೋಜನೆ
  • ಲೌಡ್ ಸ್ಪೀಕರ್, ಪಟಾಕಿ ಸಿಡಿಸುವುದಕ್ಕೆ ನಿರ್ಬಂಧ
  • ಅನುಮತಿ ಪಡೆದಿದ್ರೆ ಮಾತ್ರ ಹೆಚ್ಚು ಜನ ಸೇರಿ ಆಚರಣೆಗೆ ಅವಕಾಶ
  • ಡ್ರಿಂಕ್ ಆ್ಯಂಡ್​ ಡ್ರೈವ್, ವೀಲಿಂಗ್ ಮಾಡಿದ್ರೆ ಕ್ರಮ
  • ಸಾರ್ವಜನಿಕ ಸ್ಥಳಗಳಲ್ಲಿ ಅನುಚಿತ ವರ್ತನೆ ಮಾಡಿದ್ರೆ ಕ್ರಮ
  • ದೊಡ್ಡ ದೊಡ್ಡ ಸ್ಕ್ರೀನ್​ಗಳ ಮೂಲಕ ಖಾಕಿಪಡೆ ನಿಗಾ

ರಾತ್ರಿ 2ಗಂಟೆವರೆಗೂ ಬಿಎಂಟಿಸಿ, ಮೆಟ್ರೋ ಸಂಚಾರ

ಡಿಸೆಂಬರ್ 31ರ ರಾತ್ರಿ 11ಗಂಟೆಯಿಂದ ರಾತ್ರಿ 2ಗಂಟೆವರೆಗೂ, ಬಿಎಂಟಿಸಿ ಬಸ್​ಗಳು ಸಂಚರಿಸಲಿವೆ. ಹೆಚ್ಚಿನ ಜನ ಸೇರುವ ಸಾಧ್ಯತೆ ಡಿಸೆಂಬರ್ 31ರ ರಾತ್ರಿ 11 ರಿಂದ 2ರವರೆಗೆ ಎಂ.ಜಿ.ರಸ್ತೆ ಮೆಟ್ರೋ ರೈಲು ನಿಲ್ದಾಣ ಬಂದ್ ಮಾಡಲಾಗುತ್ತಿದೆ. ಅಂದರೆ ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣದಲ್ಲಿ ಇಳಿಯಬಹುದು, ಹೊರತು ಹತ್ತಲು ಅವಕಾಶ ಇರುವುದಿಲ್ಲ ಅಂತಾ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹೊಸ ವರ್ಷ ಆಚರಣೆಗೆ ಸಿದ್ದತೆ: ಬಿಗಿ ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?

ಸದ್ಯ ಈಗಾಗಲೇ ರಾಜಧಾನಿಯ ಬಾರ್, ಪಬ್​ಗಳು ಜೊತೆಗೆ ಪ್ರಮುಖ ರಸ್ತೆಗಳಲ್ಲಿ ಹೊಸ ವರ್ಷದ ಆಚರಣೆಗೆ ತಯಾರಿ ನಡೆದಿದ್ದು, ಇನ್ನು ಈ ಬಾರೀ ಕೂಡ ಅಧಿಕ ಜನರು ಸಂಭ್ರಮಾಚರಣೆಗೆ ಸೇರುವ ನಿರೀಕ್ಷೆಯಿದೆ. ಸದ್ಯ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಶೋಕಾಚರಣೆ ಜಾರಿಯಲ್ಲಿದ್ದರೂ ನ್ಯೂ ಇಯರ್ ಸೆಲೆಬ್ರೇಷನ್​ಗೆ ಯಾವುದೇ ಅಡ್ಡಿ ಇಲ್ಲವೆಂದು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಸಿಟಿಮಂದಿ ಹೊಸ ವರ್ಷವನ್ನ ವೆಲ್ ಕಮ್ ಮಾಡುವುದಕ್ಕೆ ತುದಿಗಾಲಲ್ಲಿ ಕಾದುನಿಂತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:52 pm, Mon, 30 December 24

Follow Us
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ