AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಹೊಸ ವರ್ಷದ ದಿನ ಡ್ರಗ್ ನಶೆಯಲ್ಲಿದ್ದವರ ಪತ್ತೆಗೆ ಪೊಲೀಸರ ಕೈಗೆ ಸಿಕ್ತು ಹೊಸ ಅಸ್ತ್ರ

ಬೆಂಗಳೂರಿನಲ್ಲಿ ಹೊಸ ವರ್ಷದ ಆಚರಣೆಯ ಸಂದರ್ಭದಲ್ಲಿ ಮಾದಕ ದ್ರವ್ಯ ಮತ್ತು ಮದ್ಯಪಾನದ ದುರುಪಯೋಗ ತಡೆಯಲು ಪೊಲೀಸರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ತ್ವರಿತ ಪರೀಕ್ಷಾ ಕಿಟ್‌ಗಳನ್ನು ಬಳಸಿ, ಅನುಮಾನಾಸ್ಪದ ವ್ಯಕ್ತಿಗಳನ್ನು ಪರೀಕ್ಷಿಸಲಾಗುತ್ತದೆ. ಡ್ರಗ್ಸ್ ಪೆಡ್ಲರ್‌ಗಳು ಮತ್ತು ವ್ಯಸನಿಗಳ ಮೇಲೆ ನಿಗಾ ಇಡಲಾಗಿದೆ. 21 ವರ್ಷದೊಳಗಿನವರು ಪಬ್‌ಗಳಿಗೆ ಪ್ರವೇಶಿಸುವುದನ್ನು ತಡೆಯಲು ಕ್ರಮ ಕೈಗೊಳ್ಳಲಾಗುತ್ತಿದೆ.

ಬೆಂಗಳೂರು: ಹೊಸ ವರ್ಷದ ದಿನ ಡ್ರಗ್ ನಶೆಯಲ್ಲಿದ್ದವರ ಪತ್ತೆಗೆ ಪೊಲೀಸರ ಕೈಗೆ ಸಿಕ್ತು ಹೊಸ ಅಸ್ತ್ರ
ಪೊಲೀಸ್​
Jagadisha B
| Edited By: |

Updated on:Dec 08, 2024 | 10:35 AM

Share

ಬೆಂಗಳೂರು, ಡಿಸೆಂಬರ್​ 08: ಹೊಸ ವರ್ಷವನ್ನು (New Year) ಸ್ವಾಗತಿಸಲು ಜನರು ಸಕಲ ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ. ರೆಸ್ಟೋರೆಂಟ್​ ಮತ್ತು ಪಬ್​ಗಳು ಹೊಸ ವರ್ಷಕ್ಕೆ ಆಶ್ಚರ್ಯಕರ ಆಫರ್​ಗಳನ್ನು ನೀಡಲು ಸಿದ್ದವಾಗಿವೆ. ಎಂಜಿ ರೋಡ್, ಬ್ರಿಗೇಡ್​ ರೋಡ್​ ಮತ್ತು ಕೋರಮಂಗಲದ ಪಬ್​ಗಳಲ್ಲಿ ಪಾರ್ಟಿ ಮಾಡಿ, ನಶೆಯಲ್ಲಿ ಹೊಸ ವರ್ಷವನ್ನು ಸ್ವಾಗತಿಸಲು ಸಜ್ಜಾಗಿದ್ದಾರೆ. ಆದರೆ, ನೀವೇನಾದರು ನಶೆಯಲ್ಲಿ ಹೊರಗಡೆ ಓಡಾಡಿದರೆ ಪೊಲೀಸರ (Police) ಕೈಯಲ್ಲಿ ಲಾಕ್​ ಆಗುವುದು ಪಕ್ಕಾ.

ಹೌದು, ಬೆಂಗಳೂರು ನಗರ ಪೊಲೀಸರು ಮತ್ತು ಸಿಸಿಬಿ ಪೊಲೀಸರು ಡ್ರಗ್ಸ್​ ಜಾಲದ ಮೇಲೆ ಕಣ್ಣಿಟ್ಟಿದ್ದು, ಈಗಾಗಲೆ ಹಲವು ಕಡೆ ದಾಳಿ ಮಾಡಿ, ಕೋಟ್ಯಾಂತರ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಇದೀಗ, ಮಾದಕ ವಸ್ತು ಅಥವಾ ಮದ್ಯಪಾನ ಮಾಡಿ ರಸ್ತೆಗಳಲ್ಲಿ ಸುತ್ತಾಡುವರನ್ನು ಪತ್ತೆ ಹಚ್ಚಲು ಪೊಲೀಸರು ತಪಾಸಣಾ ಕಿಟ್​ವೊಂದನ್ನು ಖರೀದಿಸಿದ್ದಾರೆ.

ಹೊಸ ವರ್ಷ ಸಂಭ್ರಮಾಚರಣೆ ಒಂದು ವಾರಕ್ಕೂ ಮುಂಚೆಯೇ ತಪಾಸಣೆ ಆರಂಭಿಸಲಿದ್ದಾರೆ. ಅನುಮಾನ ಬಂದವರನ್ನು ತಪಾಸಣೆಗೆ ಒಳಪಡಿಸುತ್ತಾರೆ. ಈ ಕಿಟ್​​ನಿಂದ ಕ್ಷಣಾರ್ಧದಲ್ಲೇ ವರದಿ ಬರಲಿದೆ. ಈ ತಪಾಸಣಾ ಕಿಟ್​ ಏಕಕಾಲದಲ್ಲಿ ಆರು ಟೆಸ್ಟಿಂಗ್ ರಿಪೋರ್ಟ್ ನೀಡುತ್ತದೆ. ಮೆತ್ ಆಂಫೆಟಮೈನ್, ಕೊಕೇನ್, ಓಪಿಐಓಡಿಎಸ್ ಸೇರಿದಂತೆ ಆರು ಮಾದಕ ದ್ರವ್ಯಗಳನ್ನು ತಪಾಸಣೆ ನಡೆಸಲಿದೆ. ಮಧ್ಯಪಾನ ಸೇರಿದಂತೆ ಗಾಂಜಾಸೇವನೆ, ಡ್ರಗ್ ಸೇವನೆ ​ವರದಿ ನೀಡಲಿದೆ.

ಇದನ್ನೂ ಓದಿ: ಅಂಚೆ ಇಲಾಖೆ ಮೂಲಕ ಬೆಂಗಳೂರಿಗೆ ಬರ್ತಾಯಿದೆ ವಿದೇಶಿ ಡ್ರಗ್ಸ್​: 21 ಕೋಟಿ ರೂ ಮೌಲ್ಯದ ಡ್ರಗ್ಸ್ ವಶಕ್ಕೆ 

ಈಗಾಗಲೆ ಪೊಲೀಸರ 120ಕ್ಕೂ ಹೆಚ್ಚು ಡ್ರಗ್​ ವ್ಯಸನಿಗಳ ಮೇಲೆ ಕಣ್ಣು ಇಟ್ಟಿದ್ದಾರೆ. ಹಾಗೇ, ಡ್ರಗ್ಸ್​ ಪೆಡ್ಲರ್​ಗಳ ಮೇಲೂ ಹದ್ದಿನ ಕಣ್ಣಿಟ್ಟಿದ್ದಾರೆ. 21 ವರ್ಷದ ಒಳಗಿರುವ ಯುವಕ, ಯುವತಿಯರ ಮೇಲೆ ನಿಗಾ ವಹಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. 21 ವರ್ಷದ ಒಳಗಿನ ಯುವಕ, ಯುವತಿಯರು ಪಬ್​ ಅಥವಾ ಬಾರ್​ಗೆ ಪ್ರವೇಶಿಸಿದರೇ, ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಗಾಂಜಾ ಸಾಗಣೆ ಮಾಡುತ್ತಿದ್ದ ಆರೋಪಿಯನ್ನು ಕೊಪ್ಪಳ ಜಿಲ್ಲೆಯ ಗಂಗಾವತಿ ಅಬಕಾರಿ ಪೊಲೀಸರು ಬಂಧಿಸಿದ್ದಾರೆ. ಬಸವನಗೌಡನ ಬಂಧಿತ ಆರೋಪಿ. 218ಗ್ರಾಂ ಗಾಂಜಾ, ಬೈಕ್ ಜಪ್ತಿ ಮಾಡಲಾಗಿದೆ. ಅಬಕಾರಿ ಇನ್ಸ್​ಪೆಕ್ಟರ್ ವಿಠ್ಠಲ ಪೀರಣ್ಣನವರ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಅಬಕಾರಿ ಪೊಲೀಸರು ಎನ್​ಡಿಪಿಎಸ್​​ ಕಾಯ್ದೆಯಡಿ ಕೇಸ್ ದಾಖಲಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:27 am, Sun, 8 December 24

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ