AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ದಿನದಲ್ಲಿ ಆ್ಯಂಬುಲೆನ್ಸ್ ಸಿಬ್ಬಂದಿಗೆ ಸಂಬಳ ನೀಡದಿದ್ದರೆ ಬ್ಲ್ಯಾಕ್​ಲಿಸ್ಟ್​​ಗೆ ಜಿವಿಕೆ: ಆರೋಗ್ಯ ಆಯುಕ್ತ ಎಚ್ಚರಿಕೆ

ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಅವರು ಜಿವಿಕೆ ಸಂಸ್ಥೆಗೆ 3 ದಿನಗಳ ಗಡುವು ನೀಡಿದ್ದಾರೆ. 3 ದಿನದಲ್ಲಿ ವೇತನ ನೀಡದಿದ್ದರೆ ಬ್ಲ್ಯಾಕ್​ಲಿಸ್ಟ್​​ಗೆ ಸೇರಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

3 ದಿನದಲ್ಲಿ ಆ್ಯಂಬುಲೆನ್ಸ್ ಸಿಬ್ಬಂದಿಗೆ ಸಂಬಳ ನೀಡದಿದ್ದರೆ ಬ್ಲ್ಯಾಕ್​ಲಿಸ್ಟ್​​ಗೆ ಜಿವಿಕೆ: ಆರೋಗ್ಯ ಆಯುಕ್ತ ಎಚ್ಚರಿಕೆ
ಆ್ಯಂಬುಲೆನ್ಸ್
TV9 Web
| Edited By: |

Updated on:Nov 15, 2022 | 9:23 AM

Share

ಬೆಂಗಳೂರು: ಕಳೆದು 2 ತಿಂಗಳಿಂದ ಜಿವಿಕೆ ಸಂಸ್ಥೆ ವೇತನ ನೀಡಿಲ್ಲ ಎಂದು ಬೀದಿಗಿಳಿದಿದ್ದ 108 ಆ್ಯಂಬುಲೆನ್ಸ್​ ಸಿಬ್ಬಂದಿ ಈಗ ಮತ್ತೆ ಪ್ರತಿಭಟನೆಗೆ ಮುಂದಾಗಿದ್ದಾರೆ. ರಾಜ್ಯ ಸರ್ಕಾರದಿಂದ ಜಿವಿಕೆ ಸಂಸ್ಥೆಗೆ ಹಣ ಪಾವತಿ ಆಗಿದೆ. ಸಿಬ್ಬಂದಿಗೆ ಸಂಸ್ಥೆ ಸಂಬಳ ಪಾವತಿಸಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಈ ಹಿಂದೆಯೇ ಸ್ಪಷ್ಟನೆ ನೀಡಿದ್ದರು. ಆದ್ರೆ ಆರೋಗ್ಯ ಇಲಾಖೆ ಸೂಚನೆ ಬಳಿಕವೂ ಜಿವಿಕೆ ಸಂಸ್ಥೆ 108 ಌಂಬುಲೆನ್ಸ್‌ ಸಿಬ್ಬಂದಿಗೆ ವೇತನ ನೀಡಿಲ್ಲ. ಹೀಗಾಗಿ ವೇತನಕ್ಕೆ ಆಗ್ರಹಿಸಿ ಮತ್ತೆ 108 ಌಂಬುಲೆನ್ಸ್‌ ಸಿಬ್ಬಂದಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಆರೋಗ್ಯಸೌಧದ ಎದುರು ಧರಣಿ ನಡೆಸಲಿದೆ. ಇದರ ನಡುವೆ ಈಗ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಜಿವಿಕೆಗೆ ಕೊನೆಯ ಗಡುವು ನೀಡಿದ್ದಾರೆ.

ಆರೋಗ್ಯ ಇಲಾಖೆ ಆದೇಶಕ್ಕೂ ಜಿವಿಕೆ ಸಂಸ್ಥೆ ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ. ಸಂಬಳವಿಲ್ಲದೆ ಆ್ಯಂಬುಲೆನ್ಸ್​ ಸಿಬ್ಬಂದಿ ಕಂಗಾಲಾಗಿದ್ದಾರೆ. ಕಳೆದ 15 ದಿನಗಳ ಹಿಂದೆ ಸಭೆ ನಡೆಸಿ ಮೂರು ತಿಂಗಳ ವೇತನ ನೀಡುವಂತೆ ಜಿವಿಕೆ ಸಂಸ್ಥೆಗೆ ಆರೋಗ್ಯ ಇಲಾಖೆ ಆಯುಕ್ತರು ಸೂಚಿಸಿದ್ರು. ಆದ್ರೆ ಜಿವಿಕೆ ಕೇವಲ ಒಂದು ತಿಂಗಳ ವೇತನ ಮಾತ್ರ ನೀಡಿದ್ದು 2 ತಿಂಗಳ ವೇತನ ಬಾಕಿ ಉಳಿಸಿದೆ. ಹಾಗೂ ವೇತನ ಹೆಚ್ಚಳ ಮಾಡಿಲ್ಲ. ಈ‌ ಹಿನ್ನೆಲೆ ನೌಕರರು ಮತ್ತೆ ಮುಷ್ಕರದ ಹಾದಿ ಹಿಡಿದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಜಿವಿಕೆ ಸಂಸ್ಥೆಗೆ ಕೊನೆಯ ಗಡುವು ನೀಡಿದ ಆರೋಗ್ಯ ಇಲಾಖೆ

ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಅವರು ಜಿವಿಕೆ ಸಂಸ್ಥೆಗೆ 3 ದಿನಗಳ ಗಡುವು ನೀಡಿದ್ದಾರೆ. 3 ದಿನದಲ್ಲಿ ವೇತನ ನೀಡದಿದ್ದರೆ ಬ್ಲ್ಯಾಕ್​ಲಿಸ್ಟ್​​ಗೆ ಸೇರಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಜಿವಿಕೆ ಮೇಲೆ ಈಗಾಗಲೇ ಅನೇಕ ಆರೋಪಗಳು ಕೇಳಿ ಬಂದಿವೆ. ನ.14ರೊಳಗೆ ಸಿಬ್ಬಂದಿಗೆ ಸಂಬಳ ನೀಡುವುದಾಗಿ ಸಂಸ್ಥೆ ಹೇಳಿತ್ತು. ನ.14 ಮುಗಿದರೂ 108 ಆ್ಯಂಬುಲೆನ್ಸ್​​ ನೌಕರರಿಗೆ ಸಂಬಳ ನೀಡಿಲ್ಲ. ವೇತನ ನೀಡದಿದ್ದರೆ ಸಂಸ್ಥೆ ವಿರುದ್ಧ ಸರ್ಕಾರಕ್ಕೆ ವರದಿ ನೀಡುತ್ತೇವೆ. ಕಂಪನಿಗೆ ನಾವು ಸ್ಯಾಟಿಸ್‌ಫ್ಯಾಕ್ಟರಿ ( satisfactory) ಸರ್ಟಿಫಿಕೇಟ್ ಕೊಡಲ್ಲ. ಸರ್ಟಿಫಿಕೇಟ್ ಬಂದಿಲ್ಲ ಅಂದ್ರೆ ಮುಂದಿನ ದಿನದಲ್ಲಿ ಟೆಂಡರ್ ನಲ್ಲಿ ಅವಕಾಶ ಸಿಗುವುದಿಲ್ಲ. 3 ದಿನದಲ್ಲಿ ಸಂಬಳ ನೀಡದಿದ್ದರೆ ಕಠಿಣ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಆರೋಗ್ಯ ಇಲಾಖೆಯ ಆಯುಕ್ತ ಡಿ.ರಂದೀಪ್​​ ಎಚ್ಚರಿಕೆ ನೀಡಿದ್ದಾರೆ.

Published On - 9:22 am, Tue, 15 November 22

ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!