AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ 195 ವಿದೇಶಿಗರನ್ನು ಬಂಧಿಸಿ ಗಡಿಪಾರು, ಆರೈಕೆ ಕೇಂದ್ರ ತೆರೆಯಲು ಸಿದ್ಧತೆ -ಪ್ರವೀಣ್ ಸೂದ್

ಈ ವರ್ಷ 59 ವಿದೇಶಿ ಪ್ರಜೆಗಳನ್ನು ಅವರ ದೇಶಗಳಿಗೆ ಕಳುಹಿಸಲಾಗಿದೆ. 2022 ರಲ್ಲಿ 77 ಮಂದಿಯನ್ನು ಗಡಿಪಾರು ಮಾಡಲಾಗಿತ್ತು. ಮತ್ತು 2021 ರಲ್ಲಿ 59 ಮಂದಿ.

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ 195 ವಿದೇಶಿಗರನ್ನು ಬಂಧಿಸಿ ಗಡಿಪಾರು, ಆರೈಕೆ ಕೇಂದ್ರ ತೆರೆಯಲು ಸಿದ್ಧತೆ -ಪ್ರವೀಣ್ ಸೂದ್
ಕರ್ನಾಟಕ ಡಿಜಿಪಿ ಪ್ರವೀಣ್ ಸೂದ್
Follow us
ಆಯೇಷಾ ಬಾನು
|

Updated on:Mar 29, 2023 | 6:57 AM

ಬೆಂಗಳೂರು: ವಿದೇಶಗಳಿಂದ ಬಂದು ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದ ಆರೋಪದ ಮೇಲೆ ಬೆಂಗಳೂರಿನ ವಿವಿಧ ಭಾಗಗಳಿಂದ ಮತ್ತು ಸಮೀಪದ ಪ್ರದೇಶಗಳಿಂದ 195 ವಿದೇಶಿ ಪ್ರಜೆಗಳನ್ನು (124 ಪುರುಷರು ಮತ್ತು 71 ಮಹಿಳೆಯರು) ಬಂಧಿಸಲಾಗಿದೆ. ಹಾಗೂ 2021 ರಿಂದ ಇಲ್ಲಿಯವರೆಗೆ ಬಂಧಿತರಾದವರನ್ನು ಆಯಾ ದೇಶಗಳಿಗೆ ಗಡಿಪಾರು ಮಾಡಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.

ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಯ (ಎಫ್‌ಆರ್‌ಆರ್‌ಒ) ಅಂಕಿಅಂಶಗಳ ಪ್ರಕಾರ, ಈ ವರ್ಷ 59 ವಿದೇಶಿ ಪ್ರಜೆಗಳನ್ನು ಅವರ ದೇಶಗಳಿಗೆ ಕಳುಹಿಸಲಾಗಿದೆ. 2022 ರಲ್ಲಿ 77 ಮಂದಿಯನ್ನು ಗಡಿಪಾರು ಮಾಡಲಾಗಿತ್ತು. ಮತ್ತು 2021 ರಲ್ಲಿ 59 ಮಂದಿ.

ಅಕ್ರಮವಾಗಿ ನೆಲೆಸಿದ್ದ ವಿದೇಶಿಗರನ್ನು ಬಂಧಿಸಿದ ನಂತರ, ಆರೋಪಿಗಳನ್ನು ಎಫ್‌ಆರ್‌ಆರ್‌ಒ ಮುಂದೆ ಹಾಜರುಪಡಿಸಲಾಗುತ್ತದೆ ಮತ್ತು ಅವರನ್ನು ಬಂಧನ ಕೇಂದ್ರಕ್ಕೆ ಸ್ಥಳಾಂತರಿಸಲಾಗುತ್ತದೆ. ಬಳಿಕ ಅವರನ್ನು ಅವರ ದೇಶಕ್ಕೆ ಗಡಿಪಾರು ಮಾಡಲು 15 ಮತ್ತು 60 ದಿನಗಳ ತೆಗೆದುಕೊಳ್ಳುತ್ತದೆ. ಇನ್ನು ಈ ಬಗ್ಗೆ ಮಾತನಾಡಿದ ಡೈರೆಕ್ಟರ್ ಜನರಲ್ ಮತ್ತು ಪೊಲೀಸ್ ಮಹಾನಿರೀಕ್ಷಕ (ಡಿಜಿ-ಐಜಿಪಿ) ಪ್ರವೀಣ್ ಸೂದ್, “ನಾವು ನೆಲಮಂಗಲದಲ್ಲಿ ಪುರುಷರಿಗೆ ಮಾತ್ರ ಸ್ಥಳಾವಕಾಶ ಕಲ್ಪಿಸಲು ಒಂದು ಬಂಧನ ಕೇಂದ್ರವನ್ನು ಹೊಂದಿದ್ದೇವೆ. ನಾವು ಮಹಿಳೆಯರನ್ನು ರಿಮಾಂಡ್ ಹೋಮ್‌ಗಳಿಗೆ ಕಳುಹಿಸುತ್ತಿದ್ದೆವು. ಏಕೆಂದರೆ ರಿಮಾಂಡ್ ಹೋಮ್‌ಗಳಲ್ಲಿ ನಿರ್ವಹಿಸಲು ಯಾವುದೇ ವೃತ್ತಿಪರರು ಲಭ್ಯವಿಲ್ಲ. ಅವರು, ನಾವು ಕೆಲವು ಸಮಸ್ಯೆಗಳನ್ನು ಎದುರಿಸಿದ್ದೇವೆ. ಸೋಮವಾರ, ನಾವು ತುಮಕೂರಿನ ದಿಬ್ಬೂರಿನ ಬಳಿ ಮಹಿಳೆಯರಿಗಾಗಿ ಬಂಧನ ಕೇಂದ್ರವನ್ನು ತೆರೆದಿದ್ದೇವೆ. ಐವರು ಅಪರಾಧಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ನೀವು ಮಾಡಿದ್ದೆಲ್ಲ ಸಹಿಸಿಕೊಂಡು ಬಿರಿಯಾನಿ ಹಾಕುವ ದೇಶ ಇದಲ್ಲ; ಎಸ್​ಡಿಪಿಐ ಮುಖಂಡಗೆ ಸಿಟಿ ರವಿ ತಿರುಗೇಟು

ಆಫ್ರಿಕನ್ ರಾಷ್ಟ್ರಗಳ ಐವರು ಮಹಿಳೆಯರು, ಅಕ್ರಮವಾಗಿ ನೆಲೆಸಿದಕ್ಕಾಗಿ ಅವರನ್ನು ಬಂಧಿಸಿ ಸರ್ಕಾರಿ ಆರೈಕೆ ಕೇಂದ್ರದಲ್ಲಿ ಇರಿಸಲಾಗಿತ್ತು. ಆದರೆ ಆಗಸ್ಟ್ 2021 ರಲ್ಲಿ ಬಂಧನದಿಂದ ಅವರು ತಪ್ಪಿಸಿಕೊಂಡಿದ್ದರು. ಅವರನ್ನು ಇನ್ನೂ ಪತ್ತೆಹಚ್ಚಲಾಗಿಲ್ಲ. ನೆಲಮಂಗಲ ಬಳಿಯ ಬಂಧನ ಕೇಂದ್ರವನ್ನು 2019 ರಲ್ಲಿ ತೆರೆಯಲಾಗಿದ್ದು, ಅದರಲ್ಲಿ ಸುಮಾರು 70 ಮಂದಿ ಇದ್ದಾರೆ. ಕೇಂದ್ರದ ಸಾಮರ್ಥ್ಯವನ್ನು 150ಕ್ಕೆ ಹೆಚ್ಚಿಸಲಾಗುವುದು ಎಂದು ಸೂದ್ ಹೇಳಿದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:56 am, Wed, 29 March 23

ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್