AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 20% ವೈರಲ್ ಫೀವರ್ ಹೆಚ್ಚಳ, ಎಚ್ಚರಿಕೆ ವಹಿಸಲು ವೈದ್ಯರ ಸೂಚನೆ

ರಾಜ್ಯ- ರಾಜಾಧಾನಿಯಲ್ಲಿ ಹವಮಾನ ವೈಪರಿತ್ಯದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿದ್ದು, ಮಕ್ಕಳು ಹಾಗೂ ದೊಡ್ಡವರಲ್ಲಿ ವೈರಲ್ ಫೀವರ್ ನಂತಹ ಕೇಸ್ ಗಳು ಜಾಸ್ತಿಯಾಗಿವೆ. ಒಂದು ವಾರದಿಂದ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣ 20%ರಷ್ಟು ಜಾಸ್ತಿಯಾಗಿದೆ. ಜನರು ಸುರಕ್ಷಿತವಾಗಿ ಇರುವಂತೆ ಡಾಕ್ಟರ್ಸ್ ಎಚ್ಚರಿಕೆ ನೀಡಿದ್ದಾರೆ.‌ ಆ ಕುರಿತ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ.

ಬೆಂಗಳೂರಿನಲ್ಲಿ 20% ವೈರಲ್ ಫೀವರ್ ಹೆಚ್ಚಳ, ಎಚ್ಚರಿಕೆ ವಹಿಸಲು ವೈದ್ಯರ ಸೂಚನೆ
ಸಾಂದರ್ಭಿಕ ಚಿತ್ರ
Follow us
Poornima Agali Nagaraj
| Updated By: ಆಯೇಷಾ ಬಾನು

Updated on: Nov 11, 2023 | 1:28 PM

ಬೆಂಗಳೂರು, ನ.11: ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹವಮಾನದಲ್ಲಿ (Bengaluru Weather) ಸಾಕಷ್ಟು ಬದಲಾವಣೆಗಳಾಗುತ್ತಿದ್ದು ಬೆಳಗ್ಗೆ ಬಿಸಿಲಿದ್ರೆ, ಮಧ್ಯಾಹ್ನ ಮಳೆ, ಸಂಜೆ ಚಳಿಯ ವಾತಾವರಣ ಕಂಡುಬರುತ್ತಿದೆ. ಈ ಹವಮಾನಕ್ಕೆ ಮಕ್ಕಳು ಹಾಗೂ ದೊಡ್ಡವರಲ್ಲಿ ವೈರಲ್ ಫೀವರ್ ಗಳು (Viral Fever) ಹೆಚ್ಚಾಗಿವೆ. ಹೀಗಾಗಿ ನಗರದ ಕೆಸಿ ಜನರಲ್, ಇಂದಿರಾ ಗಾಂಧಿ, ವಿಕ್ಟೋರಿಯಾ ಆಸ್ಪತ್ರೆ ಸೇರಿದಂತೆ ಖಾಸಗಿ ಆಸ್ಪತ್ರೆಗಳಲ್ಲಿ ಅಡ್ಮಿಟ್ ಆಗುವವರ ಸಂಖ್ಯೆ ಜಾಸ್ತಿಯಾಗಿದೆ.

ಕಳೆದ ಒಂದು ವಾರದಿಂದ ನಗರದಲ್ಲಿ ಚಳಿಯ ಪ್ರಮಾಣ ಜಾಸ್ತಿಯಾಗುತ್ತಿದೆ. ಬೆಳಗ್ಗೆ ಸಂಜೆ ಚಳಿಯ ವಾತಾವರಣ ಕಂಡುಬರುತ್ತಿದ್ದು, ಇದರ ಪರಿಣಾಮ ಜನರ ಮೇಲೆ ಬೀರುತ್ತಿದೆ. ಮಕ್ಕಳಲ್ಲಿ ಉಸಿರಾಟದ ಸಮಸ್ಯೆ, ಜ್ವರ, ಕೆಮ್ಮು, ಶೀತದಂತಹ ಲಕ್ಷಣಗಳು ಕಂಡುಬರುತ್ತಿವೆ. ಇನ್ನು ದೊಡ್ಡವರಲ್ಲಿ ಅಸ್ತಮ ಇದ್ದವರಲ್ಲಿ ಉಸಿರಾಟದ ಸಮಸ್ಯೆ ಜಾಸ್ತಿಯಾಗಿದೆ. ಒಂದು ವಾರದಿಂದ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣ 20%ರಷ್ಟು ಜಾಸ್ತಿಯಾಗಿದೆ. ಜನರು ಸುರಕ್ಷಿತವಾಗಿ ಇರುವಂತೆ ಡಾಕ್ಟರ್ಸ್ ಎಚ್ಚರಿಕೆ ನೀಡಿದ್ದಾರೆ.‌

ಇದನ್ನೂ ಓದಿ: Brain Fever: ಮೆದುಳು ಜ್ವರ ಎಂದರೇನು? ಹೇಗೆ ಬರುತ್ತದೆ? ಲಕ್ಷಣ ಮತ್ತು ಚಿಕಿತ್ಸೆ ಏನು? ಸಂಪೂರ್ಣ ಮಾಹಿತಿ ಇಲ್ಲಿದೆ

ವೈರಲ್ ಫೀವರ್​ನಿಂದ ಉಳಿಯಲು ಏನೆಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕು

  • ಬೆಚ್ಚಗಿನ ಉಡುಗೆ ತೊಡುವುದು
  • ಆದಷ್ಟು ಬಿಸಿ ನೀರು ಕುಡಿಯುವುದು
  • ಮಕ್ಕಳಿಗೆ ಶುಭ್ರವಾದ ಬಟ್ಟೆಗಳನ್ನ ಹಾಕುವುದು
  • ಇನ್ಫೇಕ್ಷನ್ ಇರುವವರಿಂದ ದೂರ ಇರಬೇಕು
  • ರೋಗಿಗಳು ತಮ್ಮ ಆರೋಗ್ಯದ ಬಗ್ಗೆ ಎಚ್ಚರಿಕೆಯಿಂದ ಇರಬೇಕು
  • ಎಲ್ಲಿಂದರಲ್ಲಿ ಉಗಿಯಬಾರದು
  • ಕೆಮ್ಮುವಾಗ ಕರವಸ್ತ್ರಗಳನ್ನ ಬಳಕೆ ಮಾಡುವುದು
  • ಅಸ್ತಮ ಇರುವ ಮಕ್ಕಳು ಬೆಚ್ಚಗಿನ ಬಟ್ಟೆ ಹಾಕಬೇಕು
  • ಮನೆಯ ಸುತ್ತ- ಮುತ್ತಲಿನ ಜಾಗವನ್ನ ಸ್ವಚ್ಚತೆಯಿಂದ ಇಟ್ಟಿಕೊಳ್ಳುವುದು
  • ಮನೆಗಳ ಮೇಲೆ ನೀರು ನಿಲ್ಲದಂತೆ ನೋಡಿಕೊಳ್ಳಬೇಕು
  • ಸೋಪನ್ನ ಹಾಕಿ ಕೈ ತೊಳೆಯಬೇಕು
  • ಹೊರಗೆ ಹೋಗುವಾಗ ಆದಾಷ್ಟು ಮಾಸ್ಕ್ ಗಳನ್ನ ಬಳಸಬೇಕು
  • ಜ್ವರ, ಕೆಮ್ಮು, ಮೈ ಕೂ ನೋವು ಲಕ್ಷಣಗಳು ಕಂಡು ಬಂದ್ರೆ ವೈದ್ಯ ರನ್ನ ಸಂಪರ್ಕಿಸುವುದು.

    ಇನ್ನು, ಈ ಝೀಕಾ ವೈರಸ್ ಹಾವಳಿಯು ಜಾಸ್ತಿಯಾಗಿದ್ದು, ಬಿಬಿಎಂಪಿಯ ಏಳು ಜೋನ್​ಗಳಿಗೆ ವಿಶೇಷ ಟೀಮ್ ಗಳನ್ನ ಮಾಡಿ ಬಿಬಿಎಂಪಿ ಆರೋಗ್ಯ ಇಲಾಖೆ ಕ್ರಮ ತೆಗೆದುಕೊಳ್ಳುವುದಕ್ಕೆ ಮುಂದಾಗಿದೆ. ನೀರು ನಿಂತಿರುವ ಕಡೆ ಕೆಮಿಕಲ್ ಸ್ಪ್ರೈ ಮಾಡಿ, ಮನೆ ಮನೆಗಳಿಗೆ ಬಿಬಿಎಂಪಿ ಸರ್ವೇ ಮಾಡುತ್ತಿದ್ದು, ಝೀಕಾ ವೈರಸ್ ಜೊತೆಗೆ ವೈರಲ್ ಫೀವರ್ ಕುರಿತಾಗಿ ಬಿಬಿಎಂಪಿ ಕ್ರಮ ತೆಗೆದುಕೊಳ್ಳುತ್ತಿದೆ ಅಂತ ಬಿಬಿಎಂಪಿ ಆರೋಗ್ಯ ಇಲಾಖೆಯ ವಿಶೇಷ ಆಯುಕ್ತರಾದ ತ್ರಿಲೋಕ ಚಂದ್ರ ತಿಳಿಸಿದರು.

ಒಟ್ಟಿನಲ್ಲಿ, ಹವಮಾನದ ವೈಪರಿತ್ಯದಿಂದಾಗಿ ಹವಮಾನದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿದ್ದು, ಜನರು ಎಚ್ಚರಿಕೆಯಿಂದ ಇರಬೇಕಾಗಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್