AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: 2024ರ ಮೊದಲ ಎರಡು ತಿಂಗಳಲ್ಲಿ ಅಪಘಾತದಿಂದ 174 ಜನ ಸಾವು

ಅತಿ ವೇಗ ವಾಹನ ಚಾಲನೆಯಿಂದ ಶೇ10 ಸಾವುಗಳು ದೇವನಹಳ್ಳಿಯ ಎಲಿವೇಟೆಡ್ ಕಾರಿಡಾರ್‌ನಲ್ಲಿ ಸಂಭವಿಸಿವೆ. ಇದರ ನಂತರ ಕೆಂಗೇರಿ ನೈಸ್ ರಸ್ತೆಯಲ್ಲಿ ಹೆಚ್ಚು ಜನ ಮೃತಪಟ್ಟಿದ್ದಾರೆ. 2023ರಲ್ಲಿ ಮೃತಪಟ್ಟ 914 ಜನರಲ್ಲಿ ದ್ವಿಚಕ್ರ ವಾಹನ ಸವಾರರು ಶೇ74 ರಷ್ಟಿದ್ದರೇ, ಶೇ21 ಪಾದಾಚಾರಿಗಳು ಮೃತಪಟ್ಟಿದ್ದಾರೆ.

ಬೆಂಗಳೂರು: 2024ರ ಮೊದಲ ಎರಡು ತಿಂಗಳಲ್ಲಿ ಅಪಘಾತದಿಂದ 174 ಜನ ಸಾವು
ಅಪಘಾತ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Mar 13, 2024 | 8:12 AM

Share

ಬೆಂಗಳೂರು, ಮಾರ್ಚ್​ 13: ರಾಜಧಾನಿ ಬೆಂಗಳೂರು (Bengaluru) 2024ರ ಮೊದಲ ಎರಡು ತಿಂಗಳಲ್ಲಿ ಸಂಭವಿಸಿದ ಅಪಘಾತಗಳಲ್ಲಿ (Accident) 174 ಮಂದಿ ಮೃತಪಟ್ಟಿದ್ದಾರೆ. ಇನ್ನು 2023ರಲ್ಲಿ 914 ಜನ ಸಾವಿಗೀಡಾಗಿದ್ದಾರೆ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂ.ಎನ್. ಅನುಚೇತ್ ಹೇಳಿದರು. ಮಂಗಳವಾರ (ಮಾರ್ಚ್ 12) ರಂದು ಬೆಂಗಳೂರು ಚೇಂಬರ್ ಆಫ್ ಇಂಡಸ್ಟ್ರಿ ಮತ್ತು ಕಾಮರ್ಸ್ (ಬಿಸಿಐಸಿ) ಆಯೋಜಿಸಿದ್ದ ರಸ್ತೆ ಸುರಕ್ಷತಾ ಅಭಿಯಾನವನ್ನು ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ 1.4 ಕೋಟಿ ಜನಸಂಖ್ಯೆ ಇದ್ದು, 1,000ಕ್ಕೆ 827 ಜನರ ಬಳಿ ವಾಹನಗಳಿವೆ. ಈ ಮೂಲಕ ದೇಶದಲ್ಲೇ ಅತಿ ಹೆಚ್ಚು ವಾಹನಗಳು ಬೆಂಗಳೂರಿನಲ್ಲಿವೆ.

ಅತಿ ವೇಗ ವಾಹನ ಚಾಲನೆಯಿಂದ ಶೇ10 ಸಾವುಗಳು ದೇವನಹಳ್ಳಿಯ ಎಲಿವೇಟೆಡ್ ಕಾರಿಡಾರ್‌ನಲ್ಲಿ ಸಂಭವಿಸಿವೆ. ಇದರ ನಂತರ ಕೆಂಗೇರಿ ನೈಸ್ ರಸ್ತೆಯಲ್ಲಿ ಹೆಚ್ಚು ಜನ ಮೃತಪಟ್ಟಿದ್ದಾರೆ.

2023ರಲ್ಲಿ ಮೃತಪಟ್ಟ 914 ಜನರಲ್ಲಿ ದ್ವಿಚಕ್ರ ವಾಹನ ಸವಾರರು ಶೇ74 ರಷ್ಟಿದ್ದರೇ, ಶೇ21 ಪಾದಾಚಾರಿಗಳು ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲಿ ಶೇ60 ರಷ್ಟು ಜನ 60 ವಯಸ್ಸಿಗಿಂತ ಮೇಲ್ಪಟ್ಟವರು. ಸಂಚಾರ ನಿರ್ವಹಣೆಯನ್ನು ಹೆಚ್ಚಿಸಲು, ಅಪಘಾತಗಳನ್ನು ತಡೆಯಲು ಮತ್ತು ರಸ್ತೆ ಸುರಕ್ಷತೆಯನ್ನು ಹೆಚ್ಚಿಸಲು ಬೆಂಗಳೂರು ಪೊಲೀಸರು ಕೈಗೊಂಡ ವಿವಿಧ ಕ್ರಮಗಳ ಕುರಿತು ಮಾಹಿತಿ ನೀಡಿದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಅಪಘಾತ ಪ್ರಕರಣ ಹೆಚ್ಚಳ: ಮೃತರಾದವರೆಷ್ಟು? ಇಲ್ಲಿದೆ ಅಂಕಿ-ಸಂಖ್ಯೆ

ಸುಧಾರಿತ ತಂತ್ರಜ್ಞಾನಗಳಾದ AI, ಬಿಗ್ ಡೇಟಾ ಮತ್ತು ಇಂಟರ್ನೆಟ್ ಆಫ್ ಥಿಂಗ್ಸ್ (IOT), ಜಂಕ್ಷನ್‌ಗಳಲ್ಲಿ AI ಆಧಾರಿತ ಸಿಗ್ನಲ್‌ಗಳು, AI ಕ್ಯಾಮೆರಾ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಮತ್ತು ಸುರಕ್ಷತೆಯನ್ನು ಹೆಚ್ಚಿಸಲು ಪ್ರಮುಖ ಪಾತ್ರವಹಿಸಿವೆ ಎಂದರು.

ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ಮೂರು ಗಂಟೆಗಳಲ್ಲಿ ಹೆಬ್ಬಾಳದಲ್ಲಿ 90,000 ವಾಹನಗಳು ಹಾದು ಹೋಗುತ್ತವೆ. ಇದು ಜಾಗತಿಕವಾಗಿ ಅತ್ಯಧಿಕವಾಗಿದೆ. ಹೀಗಾಗಿ ಸಂಚಾರ ದಟ್ಟಣೆಯನ್ನು ತಗ್ಗಿಸಲು ನಕ್ಷೆ ಆಧಾರಿತ ಸೇವೆಗಳು, ಎಫ್​ಎಮ್​ ರೇಡಿಯೋ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಜನರಲ್ಲಿ ತಿಳಿಸುತ್ತಿದ್ದೇವೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ