AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐತಿಹಾಸಿಕ ಕರಗ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ; ಇಂದಿನಿಂದ 11 ದಿನ ಸಂಭ್ರಮ

ಇಂದು(ಮಾರ್ಚ್ 30) ತಿಗಳರಪೇಟೆಯ ಧರ್ಮರಾಯ ದೇಗುಲದಲ್ಲಿ ಬೆಳ್ಳಿ ರಥೋತ್ಸವಕ್ಕೆ ಹಾಗೂ ದ್ರೌಪದಿ ದೇವಿಗೆ ವಿಶೇಷವಾಗಿ ಅಲಂಕಾರ ಮಾಡಲಾಗಿದೆ. ರಾತ್ರಿ 1 ಗಂಟೆಗೆ ರಥೋತ್ಸವದ ಜೊತೆಗೆ ಬೆಳಗಿನ ಜಾವ 3 ಗಂಟೆಗೆ ಧ್ವಜ ಸ್ತಂಭ ನೆಡುವ ಮೂಲಕ ವಿದ್ಯುಕ್ತ ಚಾಲನೆ ನೀಡಲಾಯ್ತು.

ಆಯೇಷಾ ಬಾನು
|

Updated on:Mar 30, 2023 | 10:43 AM

Share

ಬೆಂಗಳೂರು: ಬೆಂಗಳೂರಿನ ಸಾಂಸ್ಕೃತಿಕ ಹಿರಿಮೆ ಸಾರೋ, ವಿಶ್ವ ವಿಖ್ಯಾತ ಬೆಂಗಳೂರು ಧರ್ಮರಾಯಸ್ವಾಮಿ ಕರಗ(Bengaluru Karga) ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ ಸಿಕ್ಕಿದೆ. 11 ದಿನಗಳ ಕಾಲ ನಡೆಯಲಿರುವ ಈ ಐತಿಹಾಸಿಕ ಕರಗ ಮಹೋತ್ಸವ ಏಪ್ರಿಲ್ 09 ರವರೆಗೆ ನಡೆಯಲಿದ್ದು, ಇಂದು(ಮಾರ್ಚ್ 30) ತಿಗಳರಪೇಟೆಯ ಧರ್ಮರಾಯ ದೇಗುಲದಲ್ಲಿ ಬೆಳ್ಳಿ ರಥೋತ್ಸವಕ್ಕೆ ಹಾಗೂ ದ್ರೌಪದಿ ದೇವಿಗೆ ವಿಶೇಷವಾಗಿ ಅಲಂಕಾರ ಮಾಡಲಾಗಿದೆ. ರಾತ್ರಿ 1 ಗಂಟೆಗೆ ರಥೋತ್ಸವದ ಜೊತೆಗೆ ಬೆಳಗಿನ ಜಾವ 3 ಗಂಟೆಗೆ ಧ್ವಜ ಸ್ತಂಭ ನೆಡುವ ಮೂಲಕ ವಿದ್ಯುಕ್ತ ಚಾಲನೆ ನೀಡಲಾಯ್ತು. ಬೆಳಗಿನ ಜಾವ 3 ಗಂಟೆಯ ನಂತರ ವಿವಿಧ ಪೂಜಾ ಕೈಂಕರ್ಯಗಳನ್ನ ನೆರವೇರಿಸಲಾಯಿತು.

ಏಪ್ರಿಲ್ 6 ರಂದು ರಾತ್ರಿ ಕರಗ ಮೆರವಣಿಗೆ ನಡೆಯಲಿದ್ದು, ಅಂದು ರಾತ್ರಿ 12:30 ರ ಬಳಿಕ ದ್ರೌಪದಮ್ಮನ ಕರಗ ಕುಂಬಾರಪೇಟೆ, ನಗರ್ತಪೇಟೆ ಗೊಲ್ಲರಪೇಟೆಗಳಲ್ಲಿ ಸಂಚಾರಿಸಲಿದೆ. ಸಂಪ್ರದಾಯದಂತೆ ಮಸ್ತಾನ್ ಸಾಬ್ ದರ್ಗಾಕ್ಕೂ ಕೂಡ ಕರಗ ಭೇಟಿ ನೀಡಲಿದೆ. ಇನ್ನು ಏಪ್ರಿಲ್ 7 ರಂದು ಬೆಳಗ್ಗೆ ಧರ್ಮರಾಯಸ್ವಾಮಿ ದೇವಾಲಯ ತಲುಪಿ ಏಪ್ರಿಲ್ 8 ರ ಸಂಜೆ 4 ಗಂಟೆಗೆ ವಸಂತೋತ್ಸವ ಹಾಗೂ ರಾತ್ರಿ 12ಕ್ಕೆ ಧ್ವಜರೋಹಣ ಮೂಲಕ 2023 ರ ಕರಗಕ್ಕೆ ತೆರೆ ಬೀಳಲಿದೆ.

ಇದನ್ನೂ ಓದಿ: ಅರಸು ಕುಂಜುರಾಯ ದೈವದ ಉತ್ಸವದ ವೇಳೆ ನಡೆಯಿತು ಪವಾಡ: ಸ್ವತಃ ಕಣ್ಣಾರೆ ಕಂಡು ಅಚ್ಚರಿ ಪಟ್ಟ ದೈವ ಆರಾಧಕರು

ಇಂದಿನಿಂದ ಐತಿಹಾಸಿಕ ಕರಗ ಉತ್ಸವಕ್ಕೆ ಚಾಲನೆ ಸಿಕಿದ್ದು, ಕರಗ ಶಕ್ತ್ಯೋತ್ಸವ ಈ ಬಾರಿ ಅದ್ದೂರಿಯಾಗಿ ನಡೆಯಲಿದೆ. ಹೀಗಾಗಿ ವಹ್ನೀ ಕುಲ ಕ್ಷತ್ರೀಯರ ಮನೆಗಳಲ್ಲಿ ಸಂತಸ ಮನೆಮಾಡಿದ್ದು,‌ ನಗರದ ಧರ್ಮರಾಯ ಸ್ವಾಮಿ ದೇವಾಲಯ ಆವರಣವೂ ಕರಗ ಶಕ್ತ್ಯೋತ್ಸವಕ್ಕೆ ಸಿದ್ಧಗೊಂಡಿದೆ.

ಬೆಂಗಳೂರು ಕರಗ ಬಗ್ಗೆ ತಿಳಿಯಬೇಕಾದ ಸಂಗತಿಗಳು

  • ಬೆಂಗಳೂರು ಕರಗವನ್ನು ಸಾಂಪ್ರದಾಯಿಕವಾಗಿ ತಮಿಳು ಮಾತನಾಡುವ ತಿಗಳರು ಎಂದು ಕರೆಯಲ್ಪಡುವವರುಕರಗಹಬ್ಬವನ್ನು ವಿಜೃಂಭಣೆಯಿಂದ ಮಾಡುತ್ತಾರೆ. ಕಾಟನ್‌ಪೇಟೆಯಲ್ಲಿರುವ 18 ನೇ ಶತಮಾನದ ಮುಸ್ಲಿಂ ಸಂತನ ಸಮಾಧಿಗೆ ಭೇಟಿ ಮಾಡಿ ಮೆರವಣಿಗೆ ಮೂಲಕ ಕರಗ ಆಚರಿಸಲಾಗುತ್ತೆ.
  • ‘ಕರಗ’ ಎಂಬುದು ಹೂವಿನ ಮಣ್ಣಿನ ಮಡಕೆ ಎಂದು ಅನುವಾದಿಸುತ್ತಾರೆ. ಸಾಮಾನ್ಯವಾಗಿ ಮಹಿಳೆಯಂತೆ ವೇಷಭೂಷಣ ಧರಿಸಿದ ತಿಗಳರ ಪುರುಷರು ಕರಗವನ್ನು ಹೊತ್ತುತ್ತಾರೆ. ಪ್ರತಿ ವರ್ಷ ಚೈತ್ರ ಮಾಸದ ಹುಣ್ಣಿಮೆಯಂದು ದ್ರೌಪದಿ ‘ಆದಿ ಶಕ್ತಿ’ ರೂಪದಲ್ಲಿ ಹಿಂದಿರುಗುತ್ತಾಳೆ ಎಂದು ಈ ಸಮುದಾಯದ ಜನರು ನಂಬುತ್ತಾರೆ.
  • ಐತಿಹಾಸಿಕ ‘ಬೆಂಗಳೂರು ಕರಗ’ವು ನಗರದಲ್ಲಿ ಹಿಂದೂ ಮತ್ತು ಮುಸ್ಲಿಮರ ನಡುವಿನ ಏಕತೆಯನ್ನು ಪ್ರದರ್ಶಿಸುತ್ತದೆ.
  • ಈ ವರ್ಷ ದ್ರೌಪದಿ ದೇವಿ ಕರಗ ಶಕ್ತ್ಯೋಸ್ತವದಲ್ಲಿ ಆರು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:50 am, Thu, 30 March 23

Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!