AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಗಾಂಧಿ ಬಜಾರಿನಲ್ಲಿ ನಡೆದುಕೊಂಡು ಹೋಗುತ್ತಿದ್ದ ಶಿವಮೊಗ್ಗದ ವಕೀಲರಿಗೆ ಬೈಕ್​ನಿಂದ ಗುದ್ದಿದ ಯುವಕ, ವಕೀಲ ಸಾವು

ರಾತ್ರಿ 9 ಗಂಟೆ ಸುಮಾರಿಗೆ ಬಸವನಗುಡಿಯ ಗಾಂಧಿ ಬಜಾರ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಶಿವಮೊಗ್ಗ ಮೂಲದ ಹಿರಿಯ ವಕೀಲರಿಗೆ ಯುವಕ ಬೈಕ್ ಮೂಲಕ ಗುದ್ದಿದ್ದಾನೆ. ಅಪಫಾತದಲ್ಲಿ ವಕೀಲ ಮೃತಪಟ್ಟಿದ್ದು ಯುವಕನಿಗೆ ಗಂಭೀರ ಗಾಯಗಳಾಗಿವೆ. ಸ್ಥಳಕ್ಕೆ ಬಸವನಗುಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು ಗಾಂಧಿ ಬಜಾರಿನಲ್ಲಿ ನಡೆದುಕೊಂಡು ಹೋಗುತ್ತಿದ್ದ ಶಿವಮೊಗ್ಗದ ವಕೀಲರಿಗೆ ಬೈಕ್​ನಿಂದ ಗುದ್ದಿದ ಯುವಕ, ವಕೀಲ ಸಾವು
ಹಿರಿಯ ವಕೀಲ ಕೆ.ಟಿ.ಡಾಕಪ್ಪ
Follow us
Jagadisha B
| Updated By: ಆಯೇಷಾ ಬಾನು

Updated on:Feb 27, 2024 | 10:28 AM

ಬೆಂಗಳೂರು, ಫೆ.27: ನಡೆದುಕೊಂಡು ಹೋಗುತಿದ್ದ ಶಿವಮೊಗ್ಗ ಮೂಲದ ಹಿರಿಯ ವಕೀಲರಿಗೆ ಬೈಕ್ ಡಿಕ್ಕಿಯಾಗಿ ವಕೀಲ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ (Accident). ಹಿರಿಯ ವಕೀಲ ಕೆ.ಟಿ.ಡಾಕಪ್ಪ ಮೃತಪಟ್ಟಿದ್ದಾರೆ. ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಬಸವನಗುಡಿಯ ಗಾಂಧಿ ಬಜಾರ್ ರಸ್ತೆಯಲ್ಲಿ (Basavanagudi Gandhi Bazar) ಅಪಘಾತ ಸಂಭವಿಸಿದೆ. ಕೆ.ಟಿ.ಡಾಕಪ್ಪ ಅವರು ಕಾರು ನಿಲ್ಲಿಸಿ ಡಿವಿಜೆ ರಸ್ತೆಯ ಕಚೇರಿಗೆ ಹೋಗಿದರು. ಬಳಿಕ ಮನೆಗೆ ಹೋಗಲು ವಾಪಸ್ ಕಾರ್ ಬಳಿ ನಡೆದುಕೊಂಡು ಬರುವಾಗ ಅಪಘಾತ ಸಂಭವಿಸಿದೆ.

ಕೆಟಿಎಂ ಬೈಕ್​ನಲ್ಲಿ ಅತೀ ವೇಗವಾಗಿ ಬಂದ ಅದಿತ್ಯಾ (21) ಎಂಬ ಯುವಕ ನಡೆದುಕೊಂಡು ಹೋಗುತ್ತಿದ್ದ ವಕೀಲ ಡಾಕಪ್ಪ ಅವರಿಗೆ ಡಿಕ್ಕಿ ಹೊಡೆದಿದ್ದಾನೆ. ಅಪಘಾತದಲ್ಲಿ ಡಾಕಪ್ಪ ಅವರ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು ಡಾಕಪ್ಪ ಅವರನ್ನು ಸ್ಥಳೀಯರು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಡಾಕಪ್ಪ ನಿಧನರಾಗಿದ್ದಾರೆ. ಹೈ ಕೋರ್ಟ್ ಹಾಗೂ ಇತರ ನ್ಯಾಯಾಲಯದಲ್ಲಿ ಹಿರಿಯ ವಕೀಲರಾಗಿದ್ದ ಡಾಕಪ್ಪ ಶಿವಮೊಗ್ಗ ಮೂಲದ ತೀರ್ಥಹಳ್ಳಿಯ ಕೌರಿ ಮೂಲದವರು. ಬೆಂಗಳೂರಿನಲ್ಲಿ ಹಲವು ವರ್ಷಗಳಿಂದ ವಕೀಲ ವೃತ್ತಿ ಮಾಡುತ್ತಿದ್ರು.

ವಕೀಲ ಡಾಕಪ್ಪರಿಗೆ ಗುದ್ದಿದ ಬಳಿಕ ಕಾರಿಗೆ ಡಿಕ್ಕಿ ಹೊಡೆದ ಬೈಕ್ ಸವಾರ ಆದಿತ್ಯಾನಿಗೂ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಸವನಗುಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸವನಗುಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರು: 12 ಗಂಟೆಗೂ ಅಧಿಕ ಕಾಲ ಮನೆಯಲ್ಲೇ ಶವ ಇಟ್ಟುಕೊಂಡು ವೃದ್ಧೆಯ ದೇಹವನ್ನ ತುಂಡರಿಸಿದ ಹಂತಕ, ಕೊಲೆ ಹಿಂದಿನ ಕಾರಣ ರಿವಿಲ್​

ಎತ್ತಿನ ಬಂಡಿಗೆ, ಬೈಕ್ ಡಿಕ್ಕಿ ಮೂವರು ಸಾವು

ನಿಂತಿದ್ದ ಎತ್ತಿನ ಬಂಡಿಗೆ, ಬೈಕ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಹೊಸ ದರೋಜಿ ಗ್ರಾಮದ ಬಳಿ ಅಪಘಾತ ನಡೆದಿದೆ. ಒಂದೇ ಬೈಕ್‌ನಲ್ಲಿ ಐದು ಜನ್ರು ಪ್ರಯಾಣಿಸ್ತಿದ್ದರು. ಬೈಕ್‌‌ನಲ್ಲಿದ್ದ ಜಂಬುನಾಥ್‌‌ಹಳ್ಳಿಯ ವೆಂಕಟೇಶ, ಹೊಸಪೇಟೆಯ ಅಖಿಲಾ, ಆಶಾ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ನಾಲ್ಕು ವರ್ಷದ ಸರಸ್ವತಿ ಮತ್ತು ಜಂಬಕ್ಕ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಕುಡುತಿನಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ರು.

ಬೈಕ್ ಸವಾರ ದುರ್ಮರಣ

ಬೈಕ್ ಮತ್ತು ಕಾರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸವಾರ ಭೀಮೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರ ಬಳಿ ಅಪಘಾತ ಸಂಭವಿಸಿದ್ದು, ಹಿಂಬದಿ ಬೈಕ್ ಸವಾರ ಪ್ರತಾಪ್​ ನ ಎರಡು ಕಾಲು ಮುರಿದು ಆತನ ಸ್ಥಿತಿ ಗಂಭೀರವಾಗಿದೆ. ಗಾಯಾಳುವನ್ನ ಶಿವಮೊಗ್ಗ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲು ಚಿಕಿತ್ಸೆಗೆ ನೀಡಲಾಗ್ತಿದೆ. ಶಿಕಾರಿಪುರ ತಾಲೂಕಿನಲ್ಲಿ ಹೋರಿ ಬೆದರಿಸುವ ಸ್ಪರ್ಧೆ ನೋಡಿ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:09 am, Tue, 27 February 24

ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ