AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 10 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಶಾಲೆ ಪ್ರಿನ್ಸಿಪಾಲ್ ಪೊಲೀಸ್ ವಶಕ್ಕೆ

ವರ್ತೂರು ಸಮೀಪದ ಖಾಸಗಿ ಶಾಲೆಯೊಂದರಲ್ಲಿ 10 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಲಾಗಿದೆ. ವರ್ತೂರು ಪೊಲೀಸರು ಶಾಲಾ‌ ಸಂಸ್ಥಾಪಕ ಮತ್ತು ಪ್ರಾಂಶುಪಾಲನಾಗಿರುವ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನಲ್ಲಿ 10 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಶಾಲೆ ಪ್ರಿನ್ಸಿಪಾಲ್ ಪೊಲೀಸ್ ವಶಕ್ಕೆ
ಸಾಂದರ್ಭಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Edited By: ಆಯೇಷಾ ಬಾನು|

Updated on:Aug 04, 2023 | 11:31 AM

Share

ಬೆಂಗಳೂರು, ಆ.04: ಬೆಂಗಳೂರಿನಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಶಾಲೆಯಲ್ಲೇ 10 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಲಾಗಿದೆ. ವರ್ತೂರು ಸಮೀಪದ ಖಾಸಗಿ ಶಾಲೆಯೊಂದರಲ್ಲಿ ಘಟನೆ ನಡೆದಿದ್ದು ವರ್ತೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಲಾ‌ ಸಂಸ್ಥಾಪಕ ಮತ್ತು ಪ್ರಾಂಶುಪಾಲನಾಗಿರುವ ವ್ಯಕ್ತಿಯೇ ಕೃತ್ಯ ಎಸಗಿರುವ ಆರೋಪ ಕೇಳಿ ಬಂದಿದೆ.

ನಿನ್ನೆ(ಆ.03) ಎಂದಿನಂತೆ 10 ವರ್ಷದ ವಿದ್ಯಾರ್ಥಿನಿ ಶಾಲೆಗೆ ತೆರಳಿದ್ದಳು. ಶಾಲೆಗೆ ಬಂದ ವಿದ್ಯಾರ್ಥಿನಿಯನ್ನು ಕಂಡ ಕಾಮುಕ ಪ್ರಾಂಶುಪಾಲ ವಿದ್ಯಾರ್ಥಿನಿಯನ್ನು ಖಾಲಿ ರೂಮಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಮನೆಗೆ ಬಂದ ಮಗಳು ನೋವು ತಾಳದೆ ಒದ್ದಾಡಿದನ್ನು ಕಂಡ ಪೋಷಕರು ಮಗಳ ಬಳಿ ವಿಚಾರಿಸಿ ತಕ್ಷಣ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಈ ವೇಳೆ ಕೃತ್ಯ ಬಯಲಾಗಿದೆ. ವರ್ತೂರು ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಅತ್ಯಾಚಾರಕ್ಕೊಳಗಾದ 10 ವರ್ಷದ ಬಾಲಕಿ ನರದೌರ್ಬಲ್ಯ(Mild Dyslexia oct) ಕಾಯಿಲೆಯಿಂದ ಬಳಲುತ್ತಿದ್ದಳು. ಗುಂಜೂರು ಸಮೀಪದ ಖಾಸಗಿ ಶಾಲೆಯಲ್ಲಿ 2ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದಳು. ನಿನ್ನೆ ಬೆಳಗ್ಗೆ 8.30 ಕ್ಕೆ ಶಾಲೆಗೆ ತೆರಳಿದ್ದು ಮಧ್ಯಾಹ್ನ 3.30 ಕ್ಕೆ ಶಾಲೆಯಿಂದ ಮನೆಗೆ ವಾಪಸ್ಸಾಗಿದ್ದಾಳೆ. ತನ್ನ ತಾಯಿಗೆ ಹೊಟ್ಟೆ ನೋವು ಎಂದು ಹೇಳಿಕೊಂಡಿದ್ದಾಳೆ. ಸ್ನಾನ ಮಾಡಿಸಿ ಕರೆತರುವಾಗ ರಕ್ತದ ಕಲೆಗಳು ಕಂಡುಬಂದಿದೆ. ಈ ವಿಚಾರವಾಗಿ ಕೇಳಿದಾಗ ಪುಟ್ಟ ಬಾಲಕಿ ಘಟನೆ ವಿವರಿಸಿದ್ದಾಳೆ. ಮೊದಲು ಪ್ರಾಂಶುಪಾಲರ ಕೊಠಡಿಗೆ ಕರೆದುಕೊಂಡು ಹೋದರು. ವಿಶ್ರಾಂತಿ ಪಡೆಯುವಂತೆ ಹೇಳಿ ಅತ್ಯಾಚಾರ ಎಸಗಿದರು. ನಂತರ ಕೇಕ್ ತಿನ್ನಿಸಿ ಕಳುಹಿಸಿದರು ಎಂದು ಪುಟ್ಟ ಬಾಲಕಿ ತಾಯಿಯ ಮುಂದೆ ಕೃತ್ಯವನ್ನು ವಿವರಿಸಿದ್ದಾಳೆ. ಸದ್ಯ ಮಗುವಿಗೆ ರಕ್ತಸ್ರಾವ ಹೆಚ್ಚಾಗಿ, ಆಸ್ಪತ್ರೆಗೆ ದಾಖಲಿಸಲಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಬಾಲಕಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:17 am, Fri, 4 August 23

Follow Us
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು