AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಪ್ರಯಾಣದ ವೇಳೆ ಏರ್ ಫ್ರಾನ್ಸ್ ವಿಮಾನದ ಬಾಗಿಲು ತೆಗೆಯಲು ಯತ್ನಿಸಿದ ಆಂಧ್ರ ಮೂಲದ ವ್ಯಕ್ತಿ ಬೆಂಗಳೂರಲ್ಲಿ ಅರೆಸ್ಟ್

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಇಳಿಯುವ ನಾಲ್ಕು ಗಂಟೆಗಳ ಮೊದಲು, ರಾತ್ರಿ 8 ಗಂಟೆಯ ಸುಮಾರಿಗೆ, ಮೋಹಿತ್ ವಿಮಾನದ ಹಿಂಭಾಗದ ಎಡಭಾಗದಲ್ಲಿರುವ ಬಾಗಿಲಿನ ಲೀವರ್ ಎತ್ತಲು ಪ್ರಯತ್ನಿಸಿದರು ಎಂದು ಏರ್ ಫ್ರಾನ್ಸ್ ಇಂಡಿಯಾ ಅಧಿಕಾರಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Bengaluru: ಪ್ರಯಾಣದ ವೇಳೆ ಏರ್ ಫ್ರಾನ್ಸ್ ವಿಮಾನದ ಬಾಗಿಲು ತೆಗೆಯಲು ಯತ್ನಿಸಿದ ಆಂಧ್ರ ಮೂಲದ ವ್ಯಕ್ತಿ ಬೆಂಗಳೂರಲ್ಲಿ ಅರೆಸ್ಟ್
ಸಾಂದರ್ಭಿಕ ಚಿತ್ರ
Prajwal D'Souza
Prajwal D'Souza| Edited By: |

Updated on:Jul 21, 2023 | 10:25 PM

Share

ಬೆಂಗಳೂರು: ಬೆಂಗಳೂರಿಗೆ ಆಗಮನಿಸುತ್ತಿದ್ದ ಅಂತಾರಾಷ್ಟ್ರೀಯ ವಿಮಾನದ ಹಿಂಬದಿಯ ನಿರ್ಗಮನ ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕರೊಬ್ಬರನ್ನು ಬಂಧಿಸಲಾಗಿದೆ ಎಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಪ್ರಯಾಣಿಕನನ್ನು ಆಂಧ್ರಪ್ರದೇಶ (Andhra Pradesh) ಮೂಲದ ವೆಂಕಟ್ ಮೋಹಿತ್ (29) ಎಂದು ಪೊಲೀಸರು ಗುರುತಿಸಿದ್ದಾರೆ. ಜುಲೈ 15 ರಂದು ಪ್ಯಾರಿಸ್ ಮತ್ತು ಬೆಂಗಳೂರು ನಡುವೆ ಸಂಚರಿಸುತ್ತಿದ್ದ ಏರ್ ಫ್ರಾನ್ಸ್ (Air France) ಎಎಫ್-194 ವಿಮಾನದಲ್ಲಿ ಈ ಘಟನೆ ನಡೆದಿದೆ ಎಂದು ಪ್ರಥಮ ಮಾಹಿತಿ ವರದಿ (FIR) ತಿಳಿಸಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಇಳಿಯುವ ನಾಲ್ಕು ಗಂಟೆಗಳ ಮೊದಲು, ರಾತ್ರಿ 8 ಗಂಟೆಯ ಸುಮಾರಿಗೆ, ಮೋಹಿತ್ ವಿಮಾನದ ಹಿಂಭಾಗದ ಎಡಭಾಗದಲ್ಲಿರುವ ಬಾಗಿಲಿನ ಲೀವರ್ ಎತ್ತಲು ಪ್ರಯತ್ನಿಸಿದರು ಎಂದು ಏರ್ ಫ್ರಾನ್ಸ್ ಇಂಡಿಯಾ ಅಧಿಕಾರಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ.

ಈ ಬಗ್ಗೆ ವಿಮಾನದ ಸಿಬ್ಬಂದಿ ವರದಿ ಸಲ್ಲಿಸಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Bengaluru: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅತ್ಯುತ್ತಮ ವಿಮಾನ ನಿಲ್ದಾಣ ಪ್ರಶಸ್ತಿ

ಪೊಲೀಸರು ಮೋಹಿತ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 336 (ಜೀವ ಅಥವಾ ಇತರರ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಕಾಯ್ದೆ) ಮತ್ತು ವಿಮಾನ ನಿಯಮಗಳ 29 (ವಿಮಾನದ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಕೃತ್ಯಗಳು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:19 pm, Fri, 21 July 23

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!