AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMTC: ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಕೊಡುಗೆ, ವೋಲ್ವೊ ಸೇರಿ ಎಲ್ಲ ಬಿಎಂಟಿಸಿ ಬಸ್​ಗಳಲ್ಲಿ ಪ್ರಯಾಣ ಉಚಿತ

75 ನೇ ಅಮೃತ ಮಹೋತ್ಸವ ಹಿನ್ನಲೆ ಆಗಸ್ಟ್ 14 ರಂದು 75 ಎಲೆಕ್ಟ್ರಿಕ್ ಬಸ್ ಲೋಕಾರ್ಪಣೆ ಮಾಡಲಾಗುತ್ತಿದೆ. ಈಗಾಗಲೇ 90 ಎಲೆಕ್ಟ್ರಿಕ್ ಬಸ್​ಗಳು ಕಾರ್ಯಾಚರಣೆ ನಡೆಸುತ್ತಿವೆ.

BMTC: ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಕೊಡುಗೆ, ವೋಲ್ವೊ ಸೇರಿ ಎಲ್ಲ ಬಿಎಂಟಿಸಿ ಬಸ್​ಗಳಲ್ಲಿ ಪ್ರಯಾಣ ಉಚಿತ
BMTC ಬಸ್
TV9 Web
| Edited By: |

Updated on:Aug 11, 2022 | 2:57 PM

Share

ಬೆಂಗಳೂರು: 75ನೇ ಸ್ವತಂತ್ರ ಭಾರತದ ಅಮೃತ ಮಹೋತ್ಸವ (Azadi Ka Amrut Mahotsav) ಹಿನ್ನಲೆ ಆಗಸ್ಟ್ 15 ರಂದು ಬಿಎಂಟಿಸಿ ಇಡೀ ದಿನ ಬೆಂಗಳೂರಿನಾದ್ಯಂತ ಉಚಿತ ಪ್ರಯಾಣ ನೀಡುವುದಾಗಿ ಘೋಷಣೆ ಮಾಡಿದೆ. 24 ಗಂಟೆಗಳ ಕಾಲ ಸಂಪೂರ್ಣ ಫೀ ಸಂಚಾರವಿದ್ದು, ವೋಲ್ವೋ ಸೇರಿ ಎಲ್ಲಾ ಬಿಎಂಟಿಸಿ ಬಸ್ನಲ್ಲೂ ಉಚಿತ ಪ್ರಯಾಣ ಸೌಲಭ್ಯ ನೀಡಿದ್ದು ಇದರಿಂದ ಬಿಎಂಟಿಸಿಗೆ 3 ಕೋಟಿ ಹೊರೆ ಬೀಳಲಿದೆ. ಸರ್ಕಾರದ ಒಪ್ಪಿಗೆ ಕೊಟ್ಟ ಹಿನ್ನಲೆ ಉಚಿತ ಪ್ರಯಾಣದ ಘೋಷಣೆ ಮಾಡಲಾಗಿದೆ. ಅದೇ ರೀತಿಯಾಗಿ 75 ನೇ ಅಮೃತ ಮಹೋತ್ಸವ ಹಿನ್ನಲೆ ಆಗಸ್ಟ್ 14 ರಂದು 75 ಎಲೆಕ್ಟ್ರಿಕ್ ಬಸ್ ಲೋಕಾರ್ಪಣೆ ಮಾಡಲಾಗುತ್ತಿದೆ. ಈಗಾಗಲೇ 90 ಎಲೆಕ್ಟ್ರಿಕ್ ಬಸ್​ಗಳು ಕಾರ್ಯಾಚರಣೆ ನಡೆಸುತ್ತಿವೆ. ಈಗ ಅದರ ಜೊತೆಗೆ ಹೊಸ 75 ಎಲೆಕ್ಟ್ರಿಕ್ ಬಸ್ ಸೇರ್ಪಡೆಯಾಗಿವೆ ಎಂದು ಬಿಎಂಟಿಸಿಯಿಂದ ಘೋಷಣೆ ಮಾಡಿದೆ.

ಇದನ್ನೂ ಓದಿ: Breaking News: ಕರ್ನಾಟಕದಲ್ಲಿ ಮಾಸ್ಕ್ ಕಡ್ಡಾಯ; ಆರೋಗ್ಯ ಸಚಿವ ಸುಧಾಕರ

300 ಎಲೆಕ್ಟ್ರಿಕ್ ಬಸ್​ಗಳ ಲೋಕಾರ್ಪಣೆ:

ದಿನಾಂಕ: 14.08.2022 ರಂದು ವಿಧಾನಸೌಧ ಪೂರ್ವದ್ವಾರದಲ್ಲಿ 12 ಮೀಟರ್ ಉದ್ಯದ 300 ಎಲೆಕ್ಟ್ರಿಕ್ ಬಸ್​ಗಳನ್ನು ಲೋಕಾರ್ಪಣೆಗೊಳಿಸಲಾಗುತ್ತಿದೆ. ದಿನಾಂಕ: 15.08.2022 ರಂದು ಸಂಸ್ಥೆಯ ಎಲ್ಲಾ ಮಾರ್ಗಗಳನ್ನು ಪ್ರಯಾಣಿಕರಿಗಾಗಿ ಉಚಿತವಾಗಿ ಆಚರಣೆ ಮಾಡಲಾಗುತ್ತದೆ. ದಿನಾಂಕ: 16.8.2022 ರಂದು ಕತ್ತರಿಗುಪ್ಪೆಯಲ್ಲಿರುವ ಸಂಸ್ಥೆಯ ಸಮುಧಾಯಭವನದಲ್ಲಿ ಅಪಘಾತ ರಹಿತ ಚಾಲಕರಿಗೆ ಚಿನ್ನ (168) ಮತ್ತು ಬೆಳ್ಳಿ (2968) ಪದಕಗಳನ್ನು ವಿತರಿಸಲಾಗುತ್ತದೆ. ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 45 ವರ್ಷ ಮೇಲ್ಪಟ್ಟ ಸುಮಾರು 10700 ಸಿಬ್ಬಂದಿ/ಅಧಿಕಾರಿಗಳಿಗೆ ಜಯದೇವ ಆಸ್ಪತ್ರೆಯಲ್ಲಿ ಉಚಿತವಾಗಿ ಹೃದಯ ಸಂಬಂಧಿತ ಆರೋಗ್ಯ ತಪಾಸಣೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ತಿಳಿಸಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:31 pm, Thu, 11 August 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ