AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಸಿಲಿಂಡರ್​ ಸ್ಫೋಟದಿಂದ ಗಾಯಗೊಂಡಿದ್ದ ಎರಡೂವರೆ ವರ್ಷದ ಮಗು ಹಾಗೂ ತಂದೆ ಸಾವು

ಸಿಲಿಂಡರ್​ ಸ್ಫೋಟದಿಂದ ಗಾಯಗೊಂಡಿದ್ದ ಮಗು-ತಂದೆಯನ್ನು ಮೊದಲು ಸೆಂಟ್ ಜೋಸೆಫ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಇಬ್ಬರೂ ಪ್ರಾಣಬಿಟ್ಟಿದ್ದಾರೆ.

ಬೆಂಗಳೂರು: ಸಿಲಿಂಡರ್​ ಸ್ಫೋಟದಿಂದ ಗಾಯಗೊಂಡಿದ್ದ ಎರಡೂವರೆ ವರ್ಷದ ಮಗು ಹಾಗೂ ತಂದೆ ಸಾವು
ಸಂದೇಶ್, ರೋಹನ್
Shivaprasad B
| Edited By: |

Updated on: Dec 24, 2023 | 10:17 AM

Share

ಬೆಂಗಳೂರು, ಡಿ.24: ಕಳೆದ ಡಿಸೆಂಬರ್ 19 ರಂದು ಬೇಗೂರು ಬಳಿಯ ಲಕ್ಷ್ಮಿ ಬಡಾವಣೆಯಲ್ಲಿ ಅಡುಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು (Cylinder Blast) ಐವರಿಗೆ ಗಾಯವಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಗಾಯಗೊಂಡಿದ್ದ ಮಗು, ತಂದೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ (Death). ಎರಡೂವರೆ ವರ್ಷದ ಮಗು ರೋಹನ್ ಮತ್ತು ತಂದೆ ಸಂದೇಶ್​(30) ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಉಳಿದ ಮೂವರು ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ.

ಸಿಲಿಂಡರ್​ ಸ್ಫೋಟದಿಂದ ಗಾಯಗೊಂಡಿದ್ದ ಮಗು-ತಂದೆಯನ್ನು ಮೊದಲು ಸೆಂಟ್ ಜೋಸೆಫ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಇಬ್ಬರೂ ಪ್ರಾಣಬಿಟ್ಟಿದ್ದಾರೆ. ಉಳಿದ ಮೂವರು ಗಾಯಾಳುಗಳಿಗೆ ಚಿಕಿತ್ಸೆ ಮುಂದುವರೆದಿದೆ.

ಘಟನೆ ಹಿನ್ನೆಲೆ

ಡಿ.19ರಂದು ಬೇಗೂರು ಠಾಣಾ ವ್ಯಾಪ್ತಿಯ ಗಾರ್ವೆಬಾವಿಪಾಳ್ಯದ ಲಕ್ಷ್ಮೀ ಲೇಔಟ್​​​ನಲ್ಲಿ ಸುಬ್ರಮಣಿ ಎಂಬುವರಿಗೆ ಸೇರಿದ ಕಟ್ಟಡದಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಸಿಲಿಂಡರ್‌ ಸ್ಫೋಟಗೊಂಡು ಒಂದೇ ಕುಟುಂಬದ ಐವರು ಗಾಯಗೊಂಡಿದ್ದರು. ಘಟನೆಯಲ್ಲಿ ಉತ್ತರ ಪ್ರದೇಶ ಮೂಲದ ಸಂದೇಶ್‌(30), ಆತನ ನಾದಿನಿ ನಿಖೀಲಾ(26) ಮತ್ತು ಮೂವರು ಮಕ್ಕಳಾದ ರೋಷಿಣಿ, ರೋಹನ್‌ ಹಾಗೂ ರೋಷನ್‌ ಎಂಬುವರು ಗಾಯಗೊಂಡಿದ್ದರು. ಆದರೆ ಈಗ ಸಂದೇಶ್ ಹಾಗೂ ರೋಹನ್ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಅಡುಗೆ ಅನಿಲ ಸಿಲಿಂಡರ್ ಸ್ಫೋಟ, ಐವರಿಗೆ ಗಾಯ

ಇನ್ನು 3 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದ ಸಂದೇಶ್‌, ಕುಟುಂಬ ಸಮೇತ ಬೇಗೂರಿನ ಲಕ್ಷ್ಮೀ ಲೇಔಟ್​​​ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ರು. ಸಂದೇಶ್ ಭದ್ರತಾ ಸಿಬ್ಬಂದಿಯಾಗಿದ್ದ. ಈತನ ಪತ್ನಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ಇತ್ತೀಚೆಗಷ್ಟೇ ಈತನ ನಾದಿನಿ ನಿಖೀಲಾ ಇವರ ಮನೆಗೆ ಬಂದು ಉಳಿದುಕೊಂಡಿದ್ದಳು.

ಕಾರ್ಯ ನಿಮಿತ್ತ ಸಂದೇಶ್‌ ಪತ್ನಿ ಬೇರೆಡೆ ಹೋಗಿದ್ದಳು. ರಾತ್ರಿ ಸಂದೇಶ್‌, ನಿಖೀಲಾ ಹಾಗೂ ಮಕ್ಕಳು ಊಟ ಮಾಡಿ, ಸಿಲಿಂಡರ್‌ ಆಫ್ ಮಾಡದೆ ಮಲಗಿದ್ದು ಮುಂಜಾನೆ 6 ಗಂಟೆ ಸುಮಾರಿಗೆ ಎಚ್ಚರಗೊಂಡ ಸಂದೇಶ, ವಿದ್ಯುತ್‌ ಸ್ವಿಚ್‌ ಒತ್ತುತ್ತಿದ್ದಂತೆ ಬೆಂಕಿ ಹೊತ್ತಿಕೊಂಡಿತ್ತು. ಕಿಟಕಿ, ಬಾಗಿಲು ಹಾಕಿದ್ದರಿಂದ ಸೋರಿಕೆಯಾದ ಅಡುಗೆ ಅನಿಲ ಹೊರಗಡೆ ಹೋಗಲು ಸಾಧ್ಯವಿಲ್ಲದೆ, ಬೆಂಕಿಯ ಕಿಡಿ ಇಡೀ ಮನೆ ಸುಟ್ಟಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ