AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಪೊಲೀಸರ ಜತೆ ಕೈಜೋಡಿಸಲಿದ್ದಾರೆ ಕಾಲೇಜು ವಿದ್ಯಾರ್ಥಿಗಳು!

ಈ ಉಪಕ್ರಮವು ಸಂಚಾರ ದಟ್ಟಣೆ ಮೇಲ್ವಿಚಾರಣೆ, ನಿಯಂತ್ರಣ, ಸಂಚಾರ ಕಾನೂನು ಉಲ್ಲಂಘಿಸುವವರನ್ನು ಗುರುತಿಸುವುದು ಮತ್ತು ಸಂಚಾರ ದಟ್ಟಣೆಯ ಮೂಲ ಕಾರಣಗಳನ್ನು ಅರ್ಥಮಾಡಿಕೊಳ್ಳಲು ಸಂಬಂಧಿಸಿದ ನಿರ್ಣಾಯಕ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಲಿದೆ.

ಬೆಂಗಳೂರು ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಪೊಲೀಸರ ಜತೆ ಕೈಜೋಡಿಸಲಿದ್ದಾರೆ ಕಾಲೇಜು ವಿದ್ಯಾರ್ಥಿಗಳು!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 18, 2023 | 11:37 AM

Share

ಬೆಂಗಳೂರು, ಡಿಸೆಂಬರ್ 18: ಸಂಚಾರ ದಟ್ಟಣೆಯ ರಿಯಲ್ ಟೈಮ್ ನಿರ್ವಹಣೆಗಾಗಿ (Traffic Problem) ನಿಟ್ಟೆ ಮೀನಾಕ್ಷಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯು ಟ್ರಾಫಿಕ್ ಪೋಲೀಸ್ ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ. ಬೆಂಗಳೂರಿನ ಟ್ರಾಫಿಕ್ ಕೇವಲ ಸಾರಿಗೆ ಸಮಸ್ಯೆಯಲ್ಲ, ಇದು ಆರ್ಥಿಕ ಮತ್ತು ಪರಿಸರ ಸಮಸ್ಯೆಯಾಗಿದೆ. ತಂತ್ರಜ್ಞಾನ, ಪಾಲುದಾರಿಕೆಗಳು ಮತ್ತು ನವೀನ ವಿಧಾನಗಳಲ್ಲಿ ಹೂಡಿಕೆ ಮಾಡುವ ಮೂಲಕ, ನಾವು ದಟ್ಟಣೆಯನ್ನು ಸರಾಗಗೊಳಿಸುವುದು ಮಾತ್ರವಲ್ಲದೆ ಉತ್ಪಾದಕತೆಯನ್ನು ಹೆಚ್ಚಿಸಬಹುದು, ಮಾಲಿನ್ಯವನ್ನು ಕಡಿಮೆ ಮಾಡಬಹುದು ಮತ್ತು ಜೀವನದ ಗುಣಮಟ್ಟವನ್ನು ಸುಧಾರಿಸಬಹುದು ಎಂದು ಒಪ್ಪಂದದ ಬಳಿಕ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂಎನ್ ಅನುಚೇತ್ ಹೇಳಿದ್ದಾರೆ.

ಈ ಉಪಕ್ರಮವು ಸಂಚಾರ ದಟ್ಟಣೆ ಮೇಲ್ವಿಚಾರಣೆ, ನಿಯಂತ್ರಣ, ಸಂಚಾರ ಕಾನೂನು ಉಲ್ಲಂಘಿಸುವವರನ್ನು ಗುರುತಿಸುವುದು ಮತ್ತು ಸಂಚಾರ ದಟ್ಟಣೆಯ ಮೂಲ ಕಾರಣಗಳನ್ನು ಅರ್ಥಮಾಡಿಕೊಳ್ಳಲು ಸಂಬಂಧಿಸಿದ ನಿರ್ಣಾಯಕ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಲಿದೆ.

ಇದಲ್ಲದೆ, ಸಹಭಾಗಿತ್ವವು ನಿಟ್ಟೆ ಮೀನಾಕ್ಷಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯ ವಿದ್ಯಾರ್ಥಿಗಳಿಗೆ ಇಂಟರ್ನ್‌ಶಿಪ್‌ಗೆ ಅವಕಾಶ ನೀಡಲಿದೆ. ಬೋಧನಾ ವಿಭಾಗದ ಸದಸ್ಯರು, ಸಂಶೋಧಕರು ಮತ್ತು ವೃತ್ತಿಪರರ ಮಾಹಿತಿ ವಿನಿಮಯವನ್ನು ಸುಲಭಗೊಳಿಸಲಿದೆ.

ಇದನ್ನೂ ಓದಿ: ಬೆಂಗಳೂರು ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಸಂಚಾರಿ ಪೊಲೀಸರೊಂದಿಗೆ ಕೈ ಜೋಡಿಸಿದ ಐಐಎಸ್​ಸಿ

ನಗರದಲ್ಲಿ ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಭಾರತೀಯ ವಿಜ್ಞಾನ ಸಂಸ್ಥೆ (IISC) ಸಂಚಾರಿ ಪೊಲೀಸರೊಂದಿಗೆ ಕೈಜೋಡಿಸಿದ ಬಗ್ಗೆ ಇತ್ತೀಚೆಗಷ್ಟೇ ವರದಿಯಾಗಿತ್ತು. ಸಂಚಾರಿ ಪೊಲೀಸರು ಸಂಗ್ರಹಿಸಿರುವ ದತ್ತಾಂಶ ಬಳಸಿ ಐಐಎಸ್​ಸಿ ಸಂಶೋಧನೆ ನಡೆಸಿ ಸಂಚಾರಿ ಪೊಲೀಸರಿಗೆ ಸಲಹೆ ನೀಡಲಿದೆ. ಮಹತ್ವದ ಯೋಜನೆಯ ಒಪ್ಪಂದಕ್ಕೆ ಸಂಚಾರಿ ಪೊಲೀಸರು ಸಹಿಮಾಡಿದ್ದು, ಇದಕ್ಕಾಗಿ ಸಂಚಾರಿ ವಿಭಾಗದ ಪೊಲೀಸರಿಗೆ ಭಾರತೀಯ ವಿಜ್ಞಾನ ಸಂಸ್ಥೆ ತರಬೇತಿ ನೀಡಲಿದೆ ಎಂದು ಹೇಳಲಾಗಿತ್ತು. ಇದೀಗ ಅದರ ಬೆನ್ನಲ್ಲೇ ನಿಟ್ಟೆ ಮೀನಾಕ್ಷಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆ ಕೂಡ ಒಪ್ಪಂದ ಮಾಡಿಕೊಂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ