ಬಿಬಿಎಂಪಿ ಮಾಜಿ ಸದಸ್ಯ ದೊಡ್ಡಣ್ಣ ಪುತ್ರ ಗೌತಮ್​ ಆತ್ಮಹತ್ಯೆ: ಕಂಟ್ರಾಕ್ಟರ್ ಆಗಿದ್ದರೇ?

| Updated By: ಗಂಗಾಧರ​ ಬ. ಸಾಬೋಜಿ

Updated on: Aug 10, 2023 | 5:10 PM

Bengaluru News: ಬೆಂಗಳೂರಿನ ಅತ್ತಿಗುಪ್ಪೆ ನಿವಾಸದಲ್ಲಿ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ದೊಡ್ಡಯ್ಯ​ ಪುತ್ರ ಗೌತಮ್(29) ನೇಣಿಗೆ ಶರಣಾಗಿರುವಂತಹ ಘಟನೆ ಗುರುವಾರ ನಡೆದಿದೆ. ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ತಂದೆ ದೊಡ್ಡಯ್ಯ, ನನ್ನ ಮಗ ಕಂಟ್ರಾಕ್ಟರ್ ಕೆಲಸ ಮಾಡುತ್ತಿದ್ದ ಎನ್ನುವುದು ಶುದ್ಧ ಸುಳ್ಳು ಎಂದು ಸ್ಪಷ್ಟನೆ ನೀಡಿದ್ದಾರೆ.

ಬಿಬಿಎಂಪಿ ಮಾಜಿ ಸದಸ್ಯ ದೊಡ್ಡಣ್ಣ ಪುತ್ರ ಗೌತಮ್​ ಆತ್ಮಹತ್ಯೆ: ಕಂಟ್ರಾಕ್ಟರ್ ಆಗಿದ್ದರೇ?
ಮೃತ ಗೌತಮ್​
Follow us on

ಬೆಂಗಳೂರು, ಆಗಸ್ಟ್​ 10: ಬಿಬಿಎಂಪಿ (BBMP) ಮಾಜಿ ಸದಸ್ಯ ಪುತ್ರ ಗೌತಮ್(29) ಆತ್ಮಹತ್ಯೆ ವಿಚಾರವಾಗಿ ಕೆಲ ಊಹಾಪೋಹಗಳು ಕೇಳಿಬಂದಿದ್ದು, ಈ ಕುರಿತಾಗಿ ಟಿವಿ9ಗೆ ಪ್ರತಿಕ್ರಿಯೆ ನೀಡಿರುವ ಗೌತಮ್ ತಂದೆ ದೊಡ್ಡಯ್ಯ, ನನ್ನ ಮಗ ಕಂಟ್ರಾಕ್ಟರ್ ಕೆಲಸ ಮಾಡುತ್ತಿದ್ದ ಎನ್ನುವುದು ಶುದ್ಧ ಸುಳ್ಳು ಎಂದು ಸ್ಪಷ್ಟನೆ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆತ ಯಾವುದೇ ಕಂಟ್ರಾಕ್ಟರ್​ ಕೆಲಸ ಮಾಡುತ್ತಿರಲಿಲ್ಲ. ಯಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ನಮಗೂ ಗೊತ್ತಾಗುತ್ತಿಲ್ಲಎಂದು ಹೇಳಿದ್ದಾರೆ.

ಕೊನೆ ಮಗನೆಂದು ಗೌತಮ್​ನನ್ನು ತುಂಬಾ ಮುದ್ದಾಗಿ ಸಾಕಿದ್ದೆವು. ಹುಡುಗರ ಜೊತೆ ಓಡಾಡಿಕೊಂಡಿದ್ದ. ಆತನಿಗೆ ಮದುವೆ ಮಾಡಲು ಹೆಣ್ಣು ನೋಡುತ್ತಿದ್ದೆವು. ಕಳೆದ 3-4 ತಿಂಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎಂದಿದ್ದಾರೆ.

ಕಂಟ್ರಾಕ್ಟರ್ ಅಲ್ಲ, ಆತ ಗುತ್ತಿಗೆದಾರನೂ ಅಲ್ಲ: ಗೌತಮ್ ಭಾವ

ಮೃತ ಗೌತಮ್ ಭಾವ ಹೇಳಿಕೆ ನೀಡಿದ್ದು, ನನ್ನ ಭಾಮೈದ ಕಂಟ್ರಾಕ್ಟರ್ ಅಲ್ಲ, ಆತ ಗುತ್ತಿಗೆದಾರನಲ್ಲ. ಇದು ಬಿಜೆಪಿಯವರು ಮಾಡಿರುವ ಕೆಲಸ. ಮದುವೆ ಮಾಡಲು ನಿರ್ಧರಿಸಿ ಹುಡುಗಿ ಹುಡುಕುತಿದ್ದೇವು. ಈ ವೇಳೆ ಡಿಪ್ರೇಷನ್​ನಲ್ಲಿ ಆತ ಮೃತಪಟ್ಟಿದ್ದಾನೆ. ಆತ ಯಾವ ಕಂಟ್ರಾಕ್ಟರ್ ಅಲ್ಲ, ಆತನಿಗೆ ಬಿಲ್ ಬರಬೇಕಾಗಿರಲಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: TV9 Digital ಫಲಶೃತಿ: ಬಾಗೇಪಲ್ಲಿ ಠಾಣೆ ವ್ಯಾಪ್ತಿಯಲ್ಲಿ ಪಿಂಕ್ ಟು ಗ್ರೀನ್ ನೋಟ್ ಜಾಲದ ಪ್ರಕರಣ- ಕೊನೆಗೂ FIR ದಾಖಲು, ವಿವರ ಇಲ್ಲಿದೆ

ಕಾಂಗ್ರೆಸ್​ ವಿರುದ್ಧ ಬಿಜೆಪಿ ಆರೋಪ

ಅಧಿಕಾರಕ್ಕೆ ಬಂದ ದಿನದಿಂದ ಕಲೆಕ್ಷನ್, ಕಮಿಷನ್ ಎನ್ನುತ್ತಾ ಲೂಟಿಗಿಳಿದ ಪರಿಣಾಮವೇ ಇಂದು ಬಿಬಿಎಂಪಿ ಗುತ್ತಿಗೆದಾರ ಗೌತಮ್ ಕಾಮಗಾರಿ ಬಿಲ್‌ ಸಿಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಆರೋಪಿಸಿದೆ.

ಉತ್ತರ ಕೊಡಲ್ಲ, ಆಣೆ ಮಾಡೋಲ್ಲ, ಪ್ರತಿಭಟನೆ ಮಾಡಿದ್ರೆ ಬ್ಲ್ಯಾಕ್ ಮೇಲ್ ಎನ್ನುತ್ತ ಬೇಜವಾಬ್ದಾರಿಯಿಂದ ವರ್ತಿಸಿದ ಡಿಸಿಎಂ ಡಿಕೆ ಶಿವಕುಮಾರ್​ ಮತ್ತು ಸಿಎಂ ಸಿದ್ಧರಾಮಯ್ಯ ಅವರೇ ಇದಕ್ಕೆ ನೇರ ಹೊಣೆ!

ಇದನ್ನೂ ಓದಿ: ಕಾರು ಹರಿದು ಶಾಲಾ ಮಕ್ಕಳಿಬ್ಬರು ಸಾವು: 5ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಆಡಳಿತ ನಡೆಸಲು ಕಾಂಗ್ರೆಸ್ ಅಸಮರ್ಥ ಎನ್ನುವುದು ಸಾಬೀತಾಗಿದೆ. ಇನ್ನಷ್ಟು ಜೀವಗಳನ್ನು ಬಲಿ ಪಡೆಯುವ ಮೊದಲು ರಾಜೀನಾಮೆ ನೀಡಿ ಮನೆಗೆ ಹೋಗಿ ಎಂದು ವಾಗ್ದಾಳಿ ಮಾಡಲಾಗಿದೆ.

ಘಟನೆ ಹಿನ್ನೆಲೆ

ಬೆಂಗಳೂರಿನ ಅತ್ತಿಗುಪ್ಪೆ ನಿವಾಸದಲ್ಲಿ ಬಿಬಿಎಂಪಿ ಮಾಜಿ ಕಾರ್ಪೊರೇಟರ್​ ಪುತ್ರ ಗೌತಮ್(29) ನೇಣಿಗೆ ಶರಣಾಗಿರುವಂತಹ ಘಟನೆ ಗುರುವಾರ ನಡೆದಿದೆ. ಮೃತ ಗೌತಮ್​ ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾಕಷ್ಟು ಗುತ್ತಿಗೆ ಕೆಲಸ ಮಾಡಿಸಿದ್ದ​. ಪೋಷಕರು ದೂರು ನೀಡಿದ ನಂತರ ಆತ್ಮಹತ್ಯೆಗೆ ಕಾರಣ ತಿಳಿಯಲಿದೆ. ಚಂದ್ರಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:03 pm, Thu, 10 August 23