AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಹಿ ಸುದ್ದಿ; 2032ರ ಒಳಗೆ ಇನ್ನೂ ನಾಲ್ಕು ಹೊಸ ಮೆಟ್ರೋ ಮಾರ್ಗಗಳು, ಬೆಂಗಳೂರು ಟ್ರಾಫಿಕ್​ಗೆ ಬೀಳುತ್ತಾ ಬ್ರೇಕ್​​?

ನಾಗರಿಕರಿಗೆ ಅವರ ಕೆಲಸದ ಸ್ಥಳ ಅಥವಾ ನಿವಾಸದ ಸುತ್ತಮುತ್ತಲಿನ 1-2 ಕಿಮೀ ಒಳಗೆ ಸಂಚಾರಕ್ಕೆ ಅವಕಾಶ ಸಾಧ್ಯವಾಗುವಂತೆ ಮೆಟ್ರೋ ಒದಗಿಸಲು ಬೆಂಗಳೂರಿನಲ್ಲಿ ನಾಲ್ಕು ಹೊಸ ಮೆಟ್ರೋ ಮಾರ್ಗಗಳನ್ನು ಸ್ಥಾಪಿಸಲು ಕ್ರಿಯಾ ಯೋಜನೆಯನ್ನು ರೂಪಿಸಲಾಗಿದೆ.

ಸಿಹಿ ಸುದ್ದಿ; 2032ರ ಒಳಗೆ ಇನ್ನೂ ನಾಲ್ಕು ಹೊಸ ಮೆಟ್ರೋ ಮಾರ್ಗಗಳು, ಬೆಂಗಳೂರು ಟ್ರಾಫಿಕ್​ಗೆ ಬೀಳುತ್ತಾ ಬ್ರೇಕ್​​?
ಬೆಂಗಳೂರು ನಮ್ಮ ಮೆಟ್ರೋ
ಆಯೇಷಾ ಬಾನು
|

Updated on:Mar 13, 2023 | 8:41 AM

Share

ಬೆಂಗಳೂರು: ರಾಜ್ಯ ಸರ್ಕಾರ ಮೆಟ್ರೋ (Namma Metro)ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದೆ. ಮುಂದಿನ ಒಂದು ದಶಕದಲ್ಲಿ (2032) ಎರಡು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಸಂಚಾರಕ್ಕೆ ಲಭ್ಯವಾಗುವಂತೆ ನಾಲ್ಕು ಹೊಸ ಮೆಟ್ರೋ ಮಾರ್ಗಗಳನ್ನು ಸಿದ್ಧಪಡಿಸಲು ಮುಂದಾಗಿದೆ. ಕರ್ನಾಟಕವನ್ನು 1 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ಮಾಡುವ ಗುರಿಯೊಂದಿಗೆ, ರಾಜ್ಯ ಸರ್ಕಾರವು 2032 ರ ವೇಳೆಗೆ ನಾಗರಿಕರಿಗೆ ಅವರ ಕೆಲಸದ ಸ್ಥಳ ಅಥವಾ ನಿವಾಸದ ಸುತ್ತಮುತ್ತಲಿನ 1-2 ಕಿಮೀ ಒಳಗೆ ಸಂಚಾರಕ್ಕೆ ಅವಕಾಶ ಸಾಧ್ಯವಾಗುವಂತೆ ಮೆಟ್ರೋ ಒದಗಿಸಲು ಬೆಂಗಳೂರಿನಲ್ಲಿ ನಾಲ್ಕು ಹೊಸ ಮೆಟ್ರೋ ಮಾರ್ಗಗಳನ್ನು ಸ್ಥಾಪಿಸಲು ಕ್ರಿಯಾ ಯೋಜನೆಯನ್ನು ರೂಪಿಸಿದೆ.

ಈ ಕ್ರಿಯಾ ಯೋಜನೆಯಲ್ಲಿ ಅಂಕಿ ಅಂಶ ಇಲಾಖೆ ಮತ್ತು ಉದ್ಯಮ ಸಂಸ್ಥೆ ಫಿಕ್ಕಿ ಹೊರತಂದಿದೆ. ಇದರ ಪ್ರಕಾರ, ಪ್ರಸ್ತಾಪ ಮಾಡಲಾಗಿರುವ 4 ಹೊಸ ಮೆಟ್ರೋ ಮಾರ್ಗಗಳು ಒಟ್ಟು 59 ಕಿಲೋ ಮೀಟರ್ ಉದ್ದದ ಹೊಸ ಮೆಟ್ರೋ ಮಾರ್ಗಗಳಿಗೆ 27,000 ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಸದ್ಯ ಬೆಂಗಳೂರು ಮೆಟ್ರೋ ರೈಲು ನಿಗಮ(ಬಿಎಂಆರ್​ಸಿಎಲ್) 56 ಕಿಲೋ ಮೀಟರ್ ಮೆಟ್ರೋ ಜಾಲವನ್ನು ಹೊಂದಿದೆ.

ಮೆಟ್ರೋ ಯೋಜನೆಯ ಪ್ರಕಾರ, ಹೊಸ ಮೆಟ್ರೋ ಮಾರ್ಗಗಳು ವೈಟ್‌ಫೀಲ್ಡ್ ಮಾರ್ಗವನ್ನು ಕಾಟಮನ್ನಾಲೂರು ಅಥವಾ ಹೊಸಕೋಟೆ (6 ಕಿಮೀ) ಮತ್ತು ಬನ್ನೇರುಘಟ್ಟದಿಂದ ಜಿಗಣಿ (12 ಕಿಮೀ) ವರೆಗೆ ವಿಸ್ತರಿಸಲು ಪ್ರಯತ್ನಿಸಲಾಗಿದೆ. ಹಳೆಯ ವಿಮಾನ ನಿಲ್ದಾಣ ರಸ್ತೆಯ ಮೂಲಕ ಎಂಜಿ ರಸ್ತೆಯಿಂದ ಹೋಪ್ ಫಾರ್ಮ್ ಜಂಕ್ಷನ್ ನಡುವೆ ಹೊಸ ಮಾರ್ಗವಾಗಲಿದೆ. ಮಾರತಹಳ್ಳಿ ಮತ್ತು ವೈಟ್‌ಫೀಲ್ಡ್ (16 ಕಿಮೀ) ಮತ್ತು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ನಾಗವಾರದ ನಡುವೆ ಥಣಿಸಂದ್ರ (25 ಕಿಮೀ) ಮೂಲಕ ಮತ್ತೊಂದು ಹೊಸ ಮಾರ್ಗಕ್ಕೆ ಸಿದ್ಧತೆ ನಡೆದಿದೆ.

ಇದನ್ನೂ ಓದಿ: ಪ್ರಿಯಕರನ ಭೇಟಿಗೆ ದುಬೈನಿಂದ ಬೆಂಗಳೂರಿಗೆ ಬಂದಿದ್ದ ಗಗನಸಖಿ ಅಪಾರ್ಟ್‌ಮೆಂಟ್​ ಮೇಲಿಂದ ಬಿದ್ದು ಸಾವು

ಸಂಚಾರ ದಟ್ಟಣೆ ಕಡಿಮೆಗಾಗಿ ಜೊತೆಗೆ ಆದಾಯವನ್ನು ಹೆಚ್ಚಿಸಲು ಹೊಸೂರು ರಸ್ತೆ, ಮೈಸೂರು ರಸ್ತೆ ಮತ್ತು ಬಳ್ಳಾರಿ ರಸ್ತೆ ಸೇರಿದಂತೆ ವಿವಿಧ ಒಂಬತ್ತು ಕಡೆಯಿಂದ ಪೀಕ್ ಅವರ್‌ನಲ್ಲಿ ನಗರಕ್ಕೆ ಬರುವ ವಾಹನಗಳಿಗೆ ಪ್ರವೇಶದ ಸ್ಥಳದಲ್ಲಿ ಶುಲ್ಕ ವಿಧಿಸಬೇಕೆಂಬ ಪ್ರಸ್ತಾವನೆಯೂ ಕ್ರಿಯಾ ಯೋಜನೆಯಲ್ಲಿ ಉಲ್ಲೇಖಿಸಲಾಗಿದೆ.

ನಗರದ ಜನರಿಗೆ ಆರೋಗ್ಯ ರಕ್ಷಣೆಗೆ, ಶಿಕ್ಷಣ, ಸಂಚಾರ, ಶಾಪಿಂಗ್ ಹೀಗೆ ಹಲವಾರು ಸೇವೆಗಳಿಗೆ ಅನುಕೂಲವಾಗುವ ರೀತಿಯಲ್ಲಿ 30 ನಿಮಿಷಗಳ ಪ್ರಸ್ತಾಪ ಅಳವಡಿಸಿಕೊಳ್ಳಬೇಕು. ಅದಕ್ಕಾಗಿ 12 ‘ಉತ್ತಮ ಜೀವನ’ ಕ್ಲಸ್ಟರ್‌ ರಚಿಸಬೇಕು ಎಂಬುದನ್ನು ಪ್ರಸ್ತಾಪಿಸಲಾಗಿದೆ. ಈ ಪ್ರಸ್ತಾವಿತ ಕ್ಲಸ್ಟರ್‌ಗಳೆಂದರೆ ‘ಮಲ್ಲೇಶ್ವರಂ-ರಾಜಾಜಿನಗರ, ಜಯನಗರ-ಜೆಪಿ ನಗರ, ಇಂದಿರಾನಗರ-ರಮಂಗಲ, ಎಚ್‌ಎಸ್‌ಆರ್ ಲೇಔಟ್- ಸರ್ಜಾಪುರ ರಸ್ತೆ, ವೈಟ್‌ಫೀಲ್ಡ್-ಕಾಡುಗೋಡಿ, ಬನ್ಶಂಕರಿ-ಕನಕಪುರ ರಸ್ತೆ, ಎಲೆಕ್ಟ್ರಾನಿಕ್ಸ್ ಸಿಟಿ-ಬೊಮ್ಮನಹಳ್ಳಿ, ಬಾಣಸವಾಡಿ- ಎಚ್‌ಆರ್‌ಬಿಆರ್ ಲೇಔಟ್, ಥಣಿಕವಾಡ, ಥಣಿಕವಾಡ, ಥಣಿಸಂದ್ರ- ಯಶವಂತಪುರ-ಪೀಣ್ಯ ಮತ್ತು ಮಾರತ್ತಹಳ್ಳಿ-ಯೆಮ್ಲೂರು’ ಎಂದು ತಿಳಿಸಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:32 am, Mon, 13 March 23

ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ