Bengaluru Cantonment Railway Station: ಬ್ರಿಟಿಷರ ಕಾಲದ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶ, ಎರಡು ಹಂತದಲ್ಲಿ ಬದಲಾವಣೆ

ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣದ ಯಾರ್ಡ್​ ಅನ್ನು ₹ 45 ಕೋಟಿ ರೂ ವೆಚ್ಚದಲ್ಲಿ ಮರು ವಿನ್ಯಾಸಗೊಳಿಸಲಾಗುತ್ತಿದೆ. ಈ ಮೂಲಕ ನಾಲ್ಕು ಹೆಚ್ಚುವರಿ ಫ್ಲಾಟ್ ಫಾರ್ಮ್ ಹಾಗೂ ಎರಡು ಹೆಚ್ಚುವರಿ ಹಳಿಗಳನ್ನು ನಿರ್ಮಿಸಲಾಗುತ್ತಿದೆ.

Bengaluru Cantonment Railway Station: ಬ್ರಿಟಿಷರ ಕಾಲದ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶ, ಎರಡು ಹಂತದಲ್ಲಿ ಬದಲಾವಣೆ
ಕಂಟೋನ್ಮೆಂಟ್ ರೈಲ್ವೆ ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶImage Credit source: PTI
Follow us
| Updated By: ಆಯೇಷಾ ಬಾನು

Updated on:Dec 17, 2022 | 12:22 PM

ಬೆಂಗಳೂರು: ನಗರದ ಅತ್ಯಂತ ಹಳೆಯ, ಬ್ರಿಟಿಷರ ಕಾಲದ ರೈಲು ನಿಲ್ದಾಣಗಳಲ್ಲಿ ಒಂದಾದ ಬೆಂಗಳೂರು ಕಂಟೋನ್ಮೆಂಟ್ ರೈಲ್ವೆ ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶ ಸಿಗಲಿದೆ. ಸೌತ್ ವೆಸ್ಟರ್ನ್ ರೈಲ್ವೇ (SWR) ನೆಟ್‌ವರ್ಕ್‌ನಲ್ಲಿರುವ ಅತ್ಯಂತ ಹಳೆಯ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣವನ್ನು ಎರಡು ಹಂತದಲ್ಲಿ ಬದಲಾವಣೆಗೆ ಮಾಡಲಾಗುತ್ತೆ. ಹೆಚ್ಚಿದ ಸಾರಿಗೆ ಅಗತ್ಯಗಳನ್ನು ಪೂರೈಸುವ ಸಲುವಾಗಿ ಗಣನೀಯ ಬದಲಾವಣೆ ಮಾಡಲಾಗುತ್ತಿದೆ ಎಂದು ಭಾರತೀಯ ರೈಲ್ವೆ ಇಲಾಖೆ ತಿಳಿಸಿದೆ.

ಈ ಯೋಜನೆಯನ್ನು ಇಪಿಸಿ (ಎಂಜಿನಿಯರಿಂಗ್-ಪ್ರೊಕ್ಯೂರ್‌ಮೆಂಟ್-ಕನ್‌ಸ್ಟ್ರಕ್ಷನ್) ಮೋಡ್‌ನಲ್ಲಿ ಅಂದರೆ ‘ಟರ್ನ್‌ಕೀ’ ಆಧಾರದ ಮೇಲೆ ಕಾರ್ಯಗತಗೊಳಿಸಲಾಗುತ್ತಿದೆ. ಹೀಗಾಗಿ, ಈ ಯೋಜನೆಯ ಎಲ್ಲಾ ಅಂಶಗಳ ಪ್ಲಾನಿಂಗ್, ಸಂಗ್ರಹಣೆ ಮತ್ತು ಕಾರ್ಯಗತಗೊಳಿಸಲು ಒಂದೇ ಏಜೆನ್ಸಿಗೆ ನೀಡಲಾಗಿದೆ. ಈ ಪ್ರೋಜೆಕ್ಟ್ 36 ತಿಂಗಳುಗಳಲ್ಲಿ ಪೂರ್ಣಗೊಳ್ಳುತ್ತದೆ ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: Indian Railways: ರೈಲುಗಳಲ್ಲಿ ಹಿರಿಯ ನಾಗರಿಕರಿಗೆ ಸದ್ಯಕ್ಕಿಲ್ಲ ರಿಯಾಯಿತಿ ದರದ ಟಿಕೆಟ್; ಕೇಂದ್ರ

ಮೊದಲ ಹಂತದಲ್ಲಿ, ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣದ ಯಾರ್ಡ್​ ಅನ್ನು ₹ 45 ಕೋಟಿ ರೂ ವೆಚ್ಚದಲ್ಲಿ ಮರು ವಿನ್ಯಾಸಗೊಳಿಸಲಾಗುತ್ತಿದೆ. ಈ ಮೂಲಕ ನಾಲ್ಕು ಹೆಚ್ಚುವರಿ ಫ್ಲಾಟ್ ಫಾರ್ಮ್ ಹಾಗೂ ಎರಡು ಹೆಚ್ಚುವರಿ ಹಳಿಗಳನ್ನು ನಿರ್ಮಿಸಲಾಗುತ್ತಿದೆ. ಇದರಿಂದಾಗಿ ಹೆಚ್ಚಿನ ರೈಲುಗಳು ಈ ನಿಲ್ದಾಣದ ಮೂಲಕ ಚಲಿಸಲಿವೆ. ರೈಲುಗಳ ಸಂಖ್ಯೆ ಮತ್ತು ಕೆಎಸ್ಆರ್ ಬೆಂಗಳೂರು ನಿಲ್ದಾಣದಲ್ಲಿನ ಒತ್ತಡವನ್ನು ಕಡಿಮೆ ಮಾಡಿ. ಈ ಯಾರ್ಡ್ ಬೆಂಗಳೂರು ಉಪನಗರ ರೈಲು ಜಾಲದ ಜೊತೆ ಸಂಯೋಜಿಸಲ್ಪಡಲಿದೆ. ತಡೆರಹಿತ ಸಮೂಹ ಸಾರಿಗೆಯ ಅನುಕೂಲಕ್ಕಾಗಿ ಯಾರ್ಡ್ ಅನ್ನು ಉಪನಗರ ರೈಲ್ವೆ ಜಾಲದೊಂದಿಗೆ ಸಂಯೋಜಿಸಲಾಗುತ್ತಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಬೋರ್ ಬ್ಯಾಂಕ್ ರಸ್ತೆ ಹಾಗೂ ನೇತಾಜಿ ರಸ್ತೆ ಮಧ್ಯೆ ಪಾದಚಾರಿ ಮೇಲ್ಸೇತುವೆಯನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಈ ಮರುವಿನ್ಯಾಸ ಕಾಮಗಾರಿ 2023ರ ಫೆಬ್ರವರಿ ಒಳಗೆ ಪೂರ್ಣಗೊಳ್ಳಲಿದೆ.

ಎರಡನೇ ಹಂತದಲ್ಲಿ ಈ ನಿಲ್ದಾಣವನ್ನು ಹೈಟೆಕ್ ವಿಮಾನ ನಿಲ್ದಾಣ ವಿನ್ಯಾಸ ಮಾದರಿಯಲ್ಲಿ 480 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಹೊಸ ನಿಲ್ದಾಣದಲ್ಲಿ ಸಂಪೂರ್ಣ ಹವಾನಿಯಂತ್ರಿತ 216 ಮೀ. ಅಗಲದ ಸಭಾಂಗಣ, ಪ್ರತ್ಯೇಕ ಪ್ರವೇಶ ಹಾಗೂ ನಿರ್ಗಮನ ದ್ವಾರಗಳು, ಜಿ+5 ಬಹುಮಹಡಿ ಪಾರ್ಕಿಂಗ್, ವಾಣಿಜ್ಯ ಚಟುವಟಿಕೆಗಳಿಗೆ ಸ್ಥಳಾವಕಾಶದೊಂದಿಗೆ ಪ್ಲಾಟ್ ಫಾರ್ಮ್ ಮೇಲೆ ರೂಫ್ ಪ್ಲಾಜಾ ನಿರ್ಮಾಣ ಮಾಡಲಾಗುವುದು.‌ ಮಳೆ‌ ನೀರು ಕೊಯ್ಲು ವ್ಯವಸ್ಥೆಯೊಂದಿಗೆ ಹಸಿರು ಕಟ್ಟಡ, ಎಲ್​ಇಡಿ ಲೈಟಿಂಗ್ ವ್ಯವಸ್ಥೆ, ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ ನಿರ್ಮಾಣ ಮಾಡಲಾಗುವುದು. ವೈ-ಫೈ ವ್ಯವಸ್ಥೆ, ದಿವ್ಯಾಂಗ ಸ್ನೇಹಿ ನಿಲ್ದಾಣ, ರ‍್ಯಾಂಪ್, ಲಿಫ್ಟ್ಸ್, ಸಬ್ ವೇ ಗಳ ನಿರ್ಮಾಣ, ಸ್ಥಳೀಯ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಜೊತೆ ಬಹು ಮಾದರಿ ಸಂಯೋಜನೆ‌ ಇರಲಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:54 am, Sat, 17 December 22

ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್