AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಬರ್​ ಕ್ರೈಂಗಾಗಿ ವಿದೇಶಕ್ಕೆ ಸಿಮ್​ಗಳನ್ನು ರವಾನೆ ಮಾಡುತ್ತಿದ್ದ ಆರೋಪಿಯ ಬಂಧನ

ಸೈಬರ್​ ಕ್ರೈಂಗಾಗಿ ವಿದೇಶಕ್ಕೆ ಸಿಮ್​ಗಳನ್ನು ರವಾನೆ ಮಾಡುತ್ತಿದ್ದ ಆರೋಪಿಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರು ಬಂಧಿಸಿದ್ದಾರೆ. ಆಂಧ್ರ ಪ್ರದೇಶದ ವಿಶಾಖಪಟ್ಟಣದ ನಾರಾ ಶ್ರೀನಿವಾಸ್ ರಾವ್ ಬಂಧಿತ ಆರೋಪಿ.

ಸೈಬರ್​ ಕ್ರೈಂಗಾಗಿ ವಿದೇಶಕ್ಕೆ ಸಿಮ್​ಗಳನ್ನು ರವಾನೆ ಮಾಡುತ್ತಿದ್ದ ಆರೋಪಿಯ ಬಂಧನ
ಸಿಮ್​, ಆರೋಪಿ ಶ್ರೀವಾಸ್​
TV9 Web
| Edited By: |

Updated on: May 19, 2024 | 11:09 AM

Share

ಬೆಂಗಳೂರು, ಮೇ 19: ಸೈಬರ್​ ಕ್ರೈಂಗಾಗಿ (Cyber Crime) ವಿದೇಶಕ್ಕೆ ಸಿಮ್​ಗಳನ್ನು (Sim) ರವಾನೆ ಮಾಡುತ್ತಿದ್ದ ಆರೋಪಿಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (KIAB) ಪೊಲೀಸರು ಬಂಧಿಸಿದ್ದಾರೆ. ಆಂಧ್ರ ಪ್ರದೇಶದ (Andra Pradesh) ವಿಶಾಖಪಟ್ಟಣದ ನಾರಾ ಶ್ರೀನಿವಾಸ್ ರಾವ್ ಬಂಧಿತ ಆರೋಪಿ. ಆರೋಪಿ ಶ್ರೀನಿವಾಸ್ ರಾವ್ ಭಾರತದ ಸಿಮ್​ಗಳನ್ನು ಪಾರ್ಸಲ್​​ ಮುಖಾಂತರ ಅಕ್ರಮವಾಗಿ ವಿದೇಶಕ್ಕೆ ತೆಗೆದುಕೊಂಡು ಹೋಗಲು ಯತ್ನಿಸಿದ್ದರು. ಆದರೆ ಕಸ್ಟಮ್ಸ್​ ಅಧಿಕಾರಿಗಳ ತಪಾಸಣೆ ವೇಳೆ ಸಿಮ್​​ಗಳು ಪತ್ತೆಯಾಗಿವೆ. ಒಂದು ಪಾರ್ಸಲ್​ನಲ್ಲಿ 24, ಮತ್ತೊಂದರಲ್ಲಿ 111 ಸಿಮ್​​ಗಳು ಇದ್ದವು. ಚೆನ್ನೈನ ಸೈಯದ್​​​​​ ಎಂಬಾತನಿಗೆ ಸೇರಿದ ಕೊರಿಯರ್​​ ಕಂಪನಿ ಮೂಲಕ ಪಾರ್ಸಲ್ ಬುಕ್ ಆಗಿತ್ತು.

ಆರೋಪಿಗಳು ತೈವಾನ್ ಮತ್ತು ಕಾಂಬೋಡಿಯಾ ದೇಶಗಳಲ್ಲಿ ಕೂತು ಈ ಸಿಮ್​ಗಳನ್ನು ಬಳಸಿ ಬ್ಯಾಂಕ್ ಖಾತೆಗಳನ್ನು ತೆರೆಯುತ್ತಿದ್ದರು. ಹಾಗೆ ವಾಟ್ಸ್ ಆ್ಯಪ್ ಅಕೌಂಟ್ ಕೂಡ ಕ್ರಿಯೇಟ್ ಮಾಡುತ್ತಾರೆ. ಬಳಿಕ ಭಾರತದಲ್ಲಿನ ಜನರಿಗೆ ಪಾರ್ಟ್ ಟೈಂ, ಷೇರು ಮಾರ್ಕೆಟ್​ನಲ್ಲಿ ಹೂಡಿಕೆ ಮಾಡಿ ಅಂತ ಆಫರ್ ಕೊಟ್ಟು ವಂಚನೆ ಮಾಡುತ್ತಿದ್ದರು. ಹೈದರಾಬಾದ್​ ಮೂಲದ ವ್ಯಕ್ತಿ ಪ್ರಕರಣದ ಕಿಂಗ್​ಪಿನ್​ ಆಗಿದ್ದು, ಈತ ವಿಯೆಟ್ನಾಂನಲ್ಲಿ ಕೂತೇ ಎಲ್ಲವನ್ನು ನೋಡಿಕೊಳ್ಳುತ್ತಿದ್ದನು. ಪೊಲೀಸರು ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿದ್ದು, ಸದ್ಯ ಒಂದು ಕೇಸ್​ನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಏರ್​ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನ ಜಪ್ತಿ, ನಾಲ್ವರು ವಶಕ್ಕೆ

ಬಟ್ಟೆಗಳಲ್ಲಿ ಅಡಗಿಸಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ 1.96 ಕೋಟಿ ಮೌಲ್ಯದ 2.814 ಕೆಜಿ ಚಿನ್ನವನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್​ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಅಧಿಕಾರಿಗಳು ಮಹಿಳೆ ಸೇರಿದಂತೆ ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ದುಬೈನಿಂದ ಬೆಂಗಳೂರಿಗೆ ಬಂದಿಳಿದ ಪ್ರಯಾಣಿಕರು ಬ್ಯಾಗ್​​ನಲ್ಲಿನ ಜೀನ್ಸ್ ಪ್ಯಾಂಟ್, ಟೀ ಶರ್ಟ್​​​ಗಳಲ್ಲಿ ಪೌಡರ್​ ರೂಪದ ಚಿನ್ನವನ್ನು ಇಟ್ಟುಕೊಂಡು ಅಕ್ರಮವಾಗಿ ಸಾಗಿಸಲು ಯತ್ನಿಸಿದ್ದರು. ಆದರೆ ಕಸ್ಟಮ್ಸ್ ಅಧಿಕಾರಿಗಳ ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಬಂಡೆಯ ಸಂದಿಯಲ್ಲಿ ಸಿಲುಕಿದ ಬಾಲಕನ ತಲೆ, ಕಣ್ಣೆದುರೇ ಹೆಡೆ ಎತ್ತಿ ನಿಂತ ಹಾವು
ಬಂಡೆಯ ಸಂದಿಯಲ್ಲಿ ಸಿಲುಕಿದ ಬಾಲಕನ ತಲೆ, ಕಣ್ಣೆದುರೇ ಹೆಡೆ ಎತ್ತಿ ನಿಂತ ಹಾವು
ತೆಂಗಿನ ಮರ ಕಡಿಯುವುದಕ್ಕೂ ಮುನ್ನ ಅನುಸರಿಸಬೇಕಾದ ವಿಧಾನ ಇಲ್ಲಿದೆ
ತೆಂಗಿನ ಮರ ಕಡಿಯುವುದಕ್ಕೂ ಮುನ್ನ ಅನುಸರಿಸಬೇಕಾದ ವಿಧಾನ ಇಲ್ಲಿದೆ
ಇಂದು ಈ ರಾಶಿಯವರಿಗೆ ಹೂಡಿಕೆಯಿಂದ ಲಾಭವಿದೆ
ಇಂದು ಈ ರಾಶಿಯವರಿಗೆ ಹೂಡಿಕೆಯಿಂದ ಲಾಭವಿದೆ
ಮಾಂಗಲ್ಯ ಸರ ಮನೆ ಮುಂದೆ ಪ್ರತ್ಯಕ್ಷ: ಆದ್ರೂ ಅವನ್ನ ಹೊಡಿಬೇಕು ಎಂದ ಮಹಿಳೆ
ಮಾಂಗಲ್ಯ ಸರ ಮನೆ ಮುಂದೆ ಪ್ರತ್ಯಕ್ಷ: ಆದ್ರೂ ಅವನ್ನ ಹೊಡಿಬೇಕು ಎಂದ ಮಹಿಳೆ
ತಪ್ಪಿದ ಭಾರೀ ದುರಂತ; ಕಾರು ಚಾಲಕ ಬ್ರೇಕ್ ಹಾಕಿದ್ದರಿಂದ ಉಳಿಯಿತು ಜೀವ
ತಪ್ಪಿದ ಭಾರೀ ದುರಂತ; ಕಾರು ಚಾಲಕ ಬ್ರೇಕ್ ಹಾಕಿದ್ದರಿಂದ ಉಳಿಯಿತು ಜೀವ
ಹುತಾತ್ಮ ಅಂಬಾರಿ ಆನೆ ಅರ್ಜುನ ಸ್ಮಾರಕ ಉದ್ಘಾಟನೆ, ಹೇಗಿದೆ, ಎಲ್ಲಿದೆ ನೋಡಿ
ಹುತಾತ್ಮ ಅಂಬಾರಿ ಆನೆ ಅರ್ಜುನ ಸ್ಮಾರಕ ಉದ್ಘಾಟನೆ, ಹೇಗಿದೆ, ಎಲ್ಲಿದೆ ನೋಡಿ
ಕಾನೂನು ಇರುವುದೇ ಹಾಗೆ: ಬಿಜೆಪಿ ಆರೋಪಗಳಿಗೆ ಸ್ಪೀಕರ್ ಖಾದರ್ ಸ್ಪಷ್ಟನೆ
ಕಾನೂನು ಇರುವುದೇ ಹಾಗೆ: ಬಿಜೆಪಿ ಆರೋಪಗಳಿಗೆ ಸ್ಪೀಕರ್ ಖಾದರ್ ಸ್ಪಷ್ಟನೆ
ಭಾರತದಲ್ಲಿ ವಿಶೇಷ ತ್ರಿಶತಕ ಪೂರೈಸಿದ ಅಭಿಷೇಕ್ ಶರ್ಮಾ
ಭಾರತದಲ್ಲಿ ವಿಶೇಷ ತ್ರಿಶತಕ ಪೂರೈಸಿದ ಅಭಿಷೇಕ್ ಶರ್ಮಾ
ಟಿಎಂಸಿ ಗೂಂಡಾಗಳ ದೌರ್ಜನ್ಯವನ್ನು ಬಿಜೆಪಿ ಸಹಿಸುವುದಿಲ್ಲ; ಸುವೇಂದು ಅಧಿಕಾರಿ
ಟಿಎಂಸಿ ಗೂಂಡಾಗಳ ದೌರ್ಜನ್ಯವನ್ನು ಬಿಜೆಪಿ ಸಹಿಸುವುದಿಲ್ಲ; ಸುವೇಂದು ಅಧಿಕಾರಿ
ಆ ಸ್ಟಾರ್ ನಟನ ಸಿನಿಮಾ ನೋಡುವುದೇ ಬಿಟ್ಟ ಯಶ್: ವಿಡಿಯೋ
ಆ ಸ್ಟಾರ್ ನಟನ ಸಿನಿಮಾ ನೋಡುವುದೇ ಬಿಟ್ಟ ಯಶ್: ವಿಡಿಯೋ