AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಷಕರಿಗೆ ಬಿಗ್ ಶಾಕ್: 10 ರಿಂದ 15% ಶುಲ್ಕ ಏರಿಸಿದ ಬೆಂಗಳೂರಿನ ಖಾಸಗಿ ಶಾಲೆಗಳು!

ರಾಜ್ಯದಲ್ಲಿ ಮಳೆ ಬೆಳೆ ಇಲ್ಲದೆ ಬರಗಾಲ ಬರಲಿ, ಆರ್ಥಿಕ ಬಿಕ್ಕಟ್ಟೆ ಎದುರಾಗಲಿ ಕೊನೆಗೆ ಸುನಾಮಿಯೇ ಬರಲಿ ಖಾಸಗಿ ಶಾಲೆಗಳು ಮಾತ್ರ ಶುಲ್ಕದ ವಿಚಾರದಲ್ಲಿ ಸುಮ್ಮನೆ ಕೂರುವುದಿಲ್ಲ. ಒಂದಲ್ಲ ಒಂದು ರಣತಂತ್ರಗಳ ಮೂಲಕ ಪೋಷಕರ ಜೀವಹಿಂಡುವ ಜಿಗಣೆಗಳಂತಾಗಿದ್ದು, ಬರಗಾಲ ಸೇರಿದ್ದಂತೆ ನಾನಾ ಸಮಸ್ಯೆಗಳು ಪೋಷಕರ ಆರ್ಥಿಕ ಸಂಕಷ್ಟದ ನಡೆವೆಯೂ ಖಾಸಗಿ ಶಾಲೆಗಳು ಈ ವರ್ಷವೂ ಶಾಲೆಗಳ ಆರಂಭಕ್ಕು ಮುನ್ನವೇ ಒಂದಲ್ಲ ಎರಡು ಶಾಕ್ ಕೊಟ್ಟಿವೆ.

ಪೋಷಕರಿಗೆ ಬಿಗ್ ಶಾಕ್: 10 ರಿಂದ 15% ಶುಲ್ಕ ಏರಿಸಿದ ಬೆಂಗಳೂರಿನ ಖಾಸಗಿ ಶಾಲೆಗಳು!
ಸಾಂದರ್ಭಿಕ ಚಿತ್ರ
ವಿನಯ್​ ಕಾಶಪ್ಪನವರ್​
| Edited By: ವಿವೇಕ ಬಿರಾದಾರ|

Updated on: May 27, 2024 | 8:11 AM

Share

ಬೆಂಗಳೂರು, ಮೇ 27: ಬೆಂಗಳೂರಿನ (Bengaluru) ಕೆಲವು ಶಾಲೆಗಳು (School) ಈಗಾಗಲೇ ದಾಖಲಾತಿಯನ್ನು ಶುರು ಮಾಡಿದ್ದು ಕೆಲವು ಶಾಲೆಗಳು ಶೇ30 ರಷ್ಟು ಶುಲ್ಕ ಏರಿಕೆ ಮಾಡಿರುವ ಬಗ್ಗೆ ಆರೋಪ ಪೋಷಕರ ವಲಯದಲ್ಲಿ ಕೇಳಿ ಬಂದಿದೆ. ಇನ್ನು ಕೆಲವು ಶಾಲೆಗಳು ಕನಿಷ್ಠ 15 ರಿಂದ 20 ರಷ್ಟು ಶುಲ್ಕ ಏರಿಕೆ ಮಾಡಿವೆ. ಇದರ ನಡುವೆ ಈಗ ಕೆಲವು ಶಾಲೆಗಳು ಸಂಪೂರ್ಣ ಶುಲ್ಕವನ್ನು ಒಂದೇ ಕಂತಿನಲ್ಲಿ ಕಟ್ಟುವಂತೆ ಒತ್ತಡ ಹಾಕುತ್ತಿವೆ. ಖಾಸಗಿ ಶಾಲೆಗಳ ಈ ತಂತ್ರಕ್ಕೆ ಪೋಷಕರು ಪುಲ್ ಹೈರಾಣಾಗಿದ್ದಾರೆ.

2024-25ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗೆ ಚಾಲನೆ ಸಿಕ್ಕಿದೆ. ಪೋಷಕರು ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸುವಾಗ ಶುಲ್ಕ ಏರಿಕೆ ನೋಡಿ ಕಂಗಾಲಾಗಿದ್ದಾರೆ. ಈ ನಡುವೆ ಈಗ ಕೆಲವು ಖಾಸಗಿ ಶಾಲೆಗಳು ಒಂದೇ ಕಂತಿನಲ್ಲಿ ಕಟ್ಟುವಂತೆ ಒತ್ತಾಯ ಶುರು ಮಾಡಿವೆ. ಖಾಸಗಿ ಶಾಲೆಗಳಲ್ಲಿ 1.5 ಲಕ್ಷದಿಂದ 2 ಲಕ್ಷದಷ್ಟು ಶುಲ್ಕ ಇದೆ ಈ ಶುಲ್ಕವನ್ನು ಒಂದೇ ಕಂತಿನಲ್ಲಿ ಕಟ್ಟುವಂತೆ ಖಾಸಗಿ ಶಾಲೆಗಳು ಒತ್ತಾಯ ಮಾಡುತ್ತಿರುವುದು ಪೋಷಕರಿಗೆ ಚಿಂತೆಯಾಗಿದೆ.

ಮೊದಲೆಲ್ಲ ಶುಲ್ಕ ಕಟ್ಟಲು ಪೋಷಕರಿಗೆ ಮೂರರಿಂದ ನಾಲ್ಕು ಬಾರಿ ಅವಕಾಶ ನೀಡುತ್ತಿದ್ದವು. ಪೋಷಕರು ಶೈಕ್ಷಣಿಕ ಮದ್ಯಭಾಗದಲ್ಲಿ ಶುಲ್ಕ ಕಟ್ಟಲ್ಲ. ಕೆಲವು ಸರಿ ಶಾಲೆ ಬದಲಾಯಿಸಿದರೆ ಶುಲ್ಕ ಕಟ್ಟಲ್ಲ ಆಗ ಲಾಸ್ ಆಗುತ್ತೆ ಅಂತ ಈಗಲೇ ಪೋಷಕರು ಪೂರ್ತಿ ಶುಲ್ಕ ಕಟ್ಟುವಂತೆ ಒತ್ತಾಯ ಮಾಡುತ್ತಿವೆ. ಶುಲ್ಕ ಕಟ್ಟಲಾಗದ ಶಾಲೆಗಳಿಗೆ ಕೆಲವು ಶಾಲೆಗಳು ಲೋನ್ ಆಫರ್ ಕೂಡ ನೀಡುತ್ತಿವೆ. ಆದರೆ ಎರಡು ಲಕ್ಷದ ಶುಲ್ಕವನ್ನ ಪೋಷಕರು ಒಂದೇ ಸರಿ ಕಟ್ಟುವುದು ಹೇಗ ಅಂತ ಪೋಷಕರು ಟೆನ್ಷನ್ ಆಗಿದ್ದಾರೆ ಎಂದು ಪೋಷಕರ ಸಮನ್ವಯ ಸಮಿತಿ ಅಧ್ಯಕ್ಷ  ಯೋಗಾನಂದ್ ಹೇಳಿದರು.

ಇದನ್ನೂ ಓದಿ: ಅನಧಿಕೃತ ಶಾಲೆಗಳ ವಿಚಾರದಲ್ಲಿ ಮತ್ತೆ ಯೂ ಟರ್ನ್ ಹೊಡೆದ ಶಿಕ್ಷಣ ಇಲಾಖೆ!

ಇನ್ನು ಶುಲ್ಕ ಏರಿಕೆಗೆ ಶಾಲೆಗಳು ಮುಂದಾಗಿದ್ದರೂ, ಶಿಕ್ಷಣ ಇಲಾಖೆ ಮಾತ್ರ ಗಪ್ ಚುಪ್ ಅಂತಿದೆ. ಖಾಸಗಿ ಶಾಲೆಗಳು ಶುಲ್ಕದ ಜೊತೆ ಲಕ್ಷ ಲಕ್ಷ ಶುಲ್ಕ ಒಂದೆ ಸರಿ ಕಟ್ಟಿಸಿಕೊಂಡು ಮಕ್ಕಳನ್ನ ಬೇರೆ ಶಾಲೆಗೆ ಹೊಗದ್ದಂತೆ ತಡೆ ಹಿಡಿಯಲು ಮುಂದಾಗಿದೆ. ಇದನ್ನು ತಡೆಯಬೇಕು. ಮತ್ತು ಮಕ್ಕಳು ಹಾಗೂ ಪೋಷಕರಿಗೆ ಒತ್ತಡ ನೀಡುವ ಶಾಲೆಗಳಿಗೆ ನೋಟಿಸ್ ನೀಡುವಂತೆ ಮಕ್ಕಳ ಹಕ್ಕುಗಳ ಆಯೋಗ ಅಧ್ಯಕ್ಷ ಅಧ್ಯಕ್ಷ ನಾಗನಗೌಡ್​ ಶಾಲಾ ಶಿಕ್ಷಣ ಇಲಾಖೆಗೆ ಒತ್ತಾಯಿಸಿದ್ದಾರೆ.

ಇನ್ನು ಈ ಬಗ್ಗೆ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಮಾತ್ರ ಪೋಷಕರದ್ದೆ ತಪ್ಪು ಅಂತಿದೆ. ಕೆಲವು ಶಾಲೆಗಳು ಹಣದಾಹಿಯಾಗಿವೆ ಅಂತಹ ಶಾಲೆಗಳ ಕಡೆಯೇ ಪೋಷಕರು ಹೋಗುತ್ತಾರೆ. ಮೊದಲು ಪೋಷಕರು ಎಚ್ಚರ ವಹಿಸಬೇಕು. ಮೊದಲೆಲ್ಲ ಕಂತಿನಲ್ಲಿ ಶುಲ್ಕ ಕಟ್ಟಲು ಅವಕಾಶ ಇತ್ತು. ಈಗಲೂ ಇದೇ ಅವಕಾಶ ನೀಡಬೇಕು ಎಂದು ಖಾಸಗಿ ಶಾಲೆಗಳ ಒಕ್ಕೂಟ ಪ್ರಾಧಾನ ಕಾರ್ಯದರ್ಶಿ ಶಶಿಕುಮಾರ್ ಹೇಳಿದರು.

ಒಟ್ಟಿನಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಮಾತ್ರ ಯಾವುದನ್ನು ಲೆಕ್ಕಿಸದೆ, ಕಳೆದ ಭಾರಿಗಿಂತ ಪ್ರಸಕ್ತ ವರ್ಷದಲ್ಲಿ ಶುಲ್ಕ ಏರಿಕೆ ಮಾಡಿಕೊಂಡು ಮತ್ತೊಂದಡೆ ಒಂದೇ ಕಂತಿನಲ್ಲಿ ಲಕ್ಷ ಲಕ್ಷ ಶುಲ್ಕ ಕಟ್ಟಿಸಿಕೊಂಡು ಕಾಸು ಮಾಡಲು ಮುಂದಾಗಿದ್ದು ದುರದೃಷ್ಟಕರ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ