AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಾರ್ಟ್​​ಮೆಂಟ್​​ಗಳಲ್ಲಿ ಬಳಸಿದ ನೀರನ್ನೂ ಖರೀದಿಸಲಿದೆ ಜಲ ಮಂಡಳಿ! ಜಲಕ್ಷಾಮ ತಡೆಗೆ ಹೊಸ ಪ್ಲಾನ್

ಬೆಂಗಳೂರು ಜಲಕ್ಷಾಮ ಮತ್ತಷ್ಟು ಹೆಚ್ಚಾಗಿದ್ದು, ಕುಡಿಯುವ ಹೊರತಾದ ಅನ್ಯ ಉದ್ದೇಶಗಳ ಬಳಕೆಗೆ ನೀರಿನ ಕೊರತೆ ತೀವ್ರವಾಗಿದೆ. ಹೀಗಾಗಿ ಇಂಥ ಜಲಕ್ಷಾಮಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಬೆಂಗಳೂರು ಜಲ ಮಂಡಳಿ ಹೊಸದೊಂದು ಯೋಜನೆ ಹಾಕಿಕೊಂಡಿದೆ. ಅಪಾರ್ಟ್​​ಮೆಂಟ್​​ಗಳಲ್ಲಿ ಬಳಕೆಯಾದ ನೀರನ್ನು ಸಂಸ್ಕರಿಸಿ ಖರೀದಿಸಿ ಅಗತ್ಯ ಇರುವವರಿಗೆ ಕಡಿಮೆ ಬೆಲೆಯಲ್ಲಿ ನೀಡಲು ಮುಂದಾಗಿದೆ. ಆ ಕುರಿತು ‘ಟಿವಿ9’ ವರದಿಗಾರ ಶಾಂತಮೂರ್ತಿ ಅವರ ವರದಿ ಇಲ್ಲಿದೆ.

ಅಪಾರ್ಟ್​​ಮೆಂಟ್​​ಗಳಲ್ಲಿ ಬಳಸಿದ ನೀರನ್ನೂ ಖರೀದಿಸಲಿದೆ ಜಲ ಮಂಡಳಿ! ಜಲಕ್ಷಾಮ ತಡೆಗೆ ಹೊಸ ಪ್ಲಾನ್
ಸಾಂದರ್ಭಿಕ ಚಿತ್ರ
Ganapathi Sharma
|

Updated on: Apr 19, 2024 | 7:35 AM

Share

ಬೆಂಗಳೂರು, ಏಪ್ರಿಲ್ 19: ಬೆಂಗಳೂರಿನ ಜಲಕ್ಷಾಮ ತಣಿಸಲು ಹರಸಾಹಸ ಪಡುತ್ತಿರುವ ಜಲಮಂಡಳಿ (BWSSB), ಇದೀಗ ಮತ್ತೊಂದು ಹೊಸ ಯೋಜನೆಗೆ ಮುಂದಾಗಿದೆ. ಅಪಾರ್ಟ್​​ಮೆಂಟ್​​ಗಳಲ್ಲಿ ಬಳಕೆಯಾದ ನೀರನ್ನು ಖರೀದಿಸಿ, ಸಂಸ್ಕರಿಸಿ (Treated Water) ಮಾರಾಟ ಮಾಡಲು ಒಡಂಬಡಿಕೆ ಮಾಡಿಕೊಂಡಿದೆ. ಆ ಮೂಲಕ ನೀರಿನ ಸಮಸ್ಯೆಗೆ ತುಸು ಮಟ್ಟಿನ ಪರಿಹಾರ ಕಂಡುಕೊಳ್ಳಲು ತಯಾರಿ ನಡೆಸುತ್ತಿದೆ. ನೀರು ಪೂರೈಕೆಗೆ ಹೆಚ್ಚುವರಿ ಮೂಲಗಳ ಹುಡುಕಾಟದಲ್ಲಿದ್ದ ಜಲಮಂಡಳಿ ಇದೀಗ ಕುಡಿಯುವ ಉದ್ದೇಶ ಹೊರತುಪಡಿಸಿದ ಇತರೆ ಚಟುವಟಿಕೆಗಳ ಬಳಕೆಗಳ ನೀರಿಗಾಗಿ ಹೊಸದೊಂದು ದಾರಿ ಹುಡುಕಲು ಮುಂದಾಗಿದೆ. ನಗರದ 10 ಸಾವಿರಕ್ಕೂ ಅಧಿಕ ಅಪಾರ್ಟ್ಮೆಂಟ್​​​ಗಳಿಂದ ಬಳಕೆಯಾದ ನೀರನ್ನು ಪಡೆದು ಸಂಸ್ಕರಿಸಿ ಮಾರಾಟ ಮಾಡಲು ಸಜ್ಜಾಗಿದ್ದು, ಇದಕ್ಕಾಗಿ ಅಪಾರ್ಟ್ಮೆಂಟ್ ಅಸೋಷಿಯೇಷನ್​​ಗಳ ಜೊತೆ ಒಡಂಬಡಿಕೆ ಮಾಡಿಕೊಂಡಿದೆ ಎಂದು ಜಲ ಮಂಡಳಿ ಅಧ್ಯಕ್ಷ ರಾಮ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.

ಈ ಮೂಲಕ ಆದಾಯ ಪಡೆಯುವುದಕ್ಕೂ ಪ್ಲಾನ್ ಮಾಡಿರುವ ಜಲಮಂಡಳಿ, ಹೆಚ್ಚುವರಿಯಾಗಿ 800 ಎಂಎಲ್​​ಡಿಯಷ್ಟು ನೀರು ಪಡೆದುಕೊಳ್ಳಲಿದೆ. ಕೆಲ ಅಪಾರ್ಟ್ಮೆಂಟ್​ಗಳು ಈಗಾಗಲೇ ಬಳಿಸಿದ ನೀರನ್ನು ಸಂಸ್ಕರಿಸಿ ಮರುಬಳಕೆ ಮಾಡಿಕೊಳ್ಳುತ್ತಿವೆ. ಈ ಪೈಕಿ ಶೇ 50 ರಷ್ಟು ಸಂಸ್ಕರಿಸಿದ ನೀರು ಮಾತ್ರ ಅಪಾರ್ಟ್ಮೆಂಟ್​ಗಳಲ್ಲಿ ಬಳಕೆಯಾಗುತ್ತಿದೆ. ಉಳಿದ ನೀರು ನಾಲೆಗಳಿಗೆ, ರಾಜಕಾಲುವೆಗಳಿಗೆ, ಡ್ರೈನೇಜ್​ಗಳಿಗೆ ಬಿಟ್ಟು ಪೋಲು ಮಾಡಲಾಗುತ್ತಿದೆ. ಹೀಗೆ ಪೋಲಾಗ್ತಿರುವ ನೀರನ್ನು ಇತರೆ ಅಗತ್ಯತೆಗಳಿಗೆ ಬಳಸಲು ಜಲ ಮಂಡಳಿ ಈಗ ಹೊಸ ಯೋಜನೆ ಹಾಕಿಕೊಂಡಿದೆ.

ಸದ್ಯ ಸಂಸ್ಕರಿತ ನೀರಿಗೂ ಡಿಮ್ಯಾಂಡ್ ಹೆಚ್ಚಾಗ್ತಿದ್ದು, ಈಗ 62 ಲಕ್ಷ ಲೀಟರ್ ಸಂಸ್ಕರಿತ ನೀರಿಗೆ ಬೇಡಿಕೆ ಸೃಷ್ಟಿಯಾಗಿದೆ. ಕುಡಿಯುವ ನೀರನ್ನು ಹೊರತುಪಡಿಸಿ ಇತರೆ ಕೆಲಸಗಳಿಗೆ ಬೇಕಾದ ನೀರಿಗಾಗಿ ಈ ಸಂಸ್ಕರಿತ ನೀರು ಬಳಸಲು ತಯಾರಿ ನಡೆದಿದ್ದು, ಬಂದ ಲಾಭದಲ್ಲಿ ಅಪಾರ್ಟ್ಮೆಂಟ್​​ಗಳಿಗೂ ಪಾಲು ನೀಡಲಾಗುತ್ತದೆ.

ಇದನ್ನೂ ಓದಿ: ಲಾಲ್ ಬಾಗ್​ನಲ್ಲಿ ನೀರಿಲ್ಲದೆ ಒಣಗುತ್ತಿವೆ ಗಿಡಗಳು: ತೋಟಗಾರಿಕೆ ಇಲಾಖೆಗೂ ತಟ್ಟಿದ ನೀರಿನ ಬಿಕ್ಕಟ್ಟಿನ ಬಿಸಿ

ಹನಿ ನೀರಿಗೂ ಪರದಾಡುತ್ತಿರುವ ಬೆಂಗಳೂರಿಗೆ ಇದೀಗ ಹೆಚ್ಚುವರಿಯಾಗಿ ನೀರು ಪೂರೈಕೆ ಮಾಡಲು ಜಲಮಂಡಳಿ ಮುಂದಾಗಿದೆ. ಅನಗತ್ಯವಾಗಿ ಪೋಲಾಗುತ್ತಿರುವ ನೀರನ್ನು ತಡೆದು ಅಗತ್ಯವಿರುವ ಜನರಿಗೆ ರಿಯಾಯತಿ ಬೆಲೆಯಲ್ಲಿ ನೀಡಲು ತಯಾರಿ ನಡೆದಿದೆ.

ವರದಿ – ಶಾಂತಮೂರ್ತಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ