AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದ ತೇಜಸ್ವಿ ಸೂರ್ಯ ಭಾವಚಿತ್ರದ ನಕಲಿ ಎಟಿಎಂ ಕಾರ್ಡ್ ವಿತರಿಸಿ ಕಾಂಗ್ರೆಸ್‌ನಿಂದ ವಿನೂತನ ಪ್ರಚಾರ

ಕಾಂಗ್ರೆಸ್ ಕಾರ್ಯಕರ್ತರು ಹಂಚಿದ ನಕಲಿ ಎಟಿಎಂ ಕಾರ್ಡ್ ನೋಡಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಾರ್ವಜನಿಕರು ಗೊಂದಲಕ್ಕೀಡಾಗಿದ್ದಾರೆ. ಅಷ್ಟಕ್ಕೂ ಕಾಂಗ್ರೆಸ್ ಕಾರ್ಯಕರ್ತರು ನಕಲಿ ಎಟಿಎಂ ಕಾರ್ಡ್ ಹಂಚಲು ಕಾರಣವೇನು? ಆ ಎಟಿಎಂ ಕಾರ್ಡ್​​ನಲ್ಲೇನೇನು ಬರೆಯಲಾಗಿತ್ತು? ಇಲ್ಲಿದೆ ಮಾಹಿತಿ.

ಸಂಸದ ತೇಜಸ್ವಿ ಸೂರ್ಯ ಭಾವಚಿತ್ರದ ನಕಲಿ ಎಟಿಎಂ ಕಾರ್ಡ್ ವಿತರಿಸಿ ಕಾಂಗ್ರೆಸ್‌ನಿಂದ ವಿನೂತನ ಪ್ರಚಾರ
ತೇಜಸ್ವಿ ಸೂರ್ಯ
ಪ್ರಸನ್ನ ಗಾಂವ್ಕರ್​
| Edited By: |

Updated on: Apr 19, 2024 | 10:29 AM

Share

ಬೆಂಗಳೂರು, ಏಪ್ರಿಲ್ 19: ಗುರು ರಾಘವೇಂದ್ರ ಬ್ಯಾಂಕ್ (Guru Raghavendra Co Operative Bank) ಹಗರಣ ಮುಂದಿಟ್ಟುಕೊಂಡು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಸಂಸದ ತೇಜಸ್ವಿ ಸೂರ್ಯ (Tejasvi Surya) ವಿರುದ್ಧ ಕಾಂಗ್ರೆಸ್ (Congress) ವಿನೂತನ ಪ್ರತಿಭಟನೆ, ಪ್ರಚಾರ ನಡೆಸುತ್ತಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಾದ್ಯಂತ ಪ್ರಚಾರ ಆರಂಭಿಸಿದ ಕೈಪಡೆ, ತೇಜಸ್ವಿ ಸೂರ್ಯ ಭಾವಚಿತ್ರ ಇರುವ ನಕಲಿ ಎಟಿಎಂ ಕಾರ್ಡ್ (Fake ATM Card) ವಿತರಣೆ ಮಾಡುತ್ತಿದೆ.

ನಕಲಿ ಎಟಿಎಂ ಕಾರ್ಡ್​ನಲ್ಲಿ ತೇಜಸ್ವಿ ಸೂರ್ಯ ಹಣ ಗುಳುಂ ಮಾಡುತ್ತಿರುವ ಫೋಟೋ ಅಳವಡಿಕೆ ಮಾಡಲಾಗಿದೆ. ಅಲ್ಲದೇ, ಎಟಿಎಂ ಕಾರ್ಡ್ ಮೇಲೆ ಎಸ್​​ಬಿಬಿ ಬ್ಯಾಂಕ್ ಎಂದು ಉಲ್ಲೇಖಿಸಲಾಗಿದೆ. ಎಸ್​​ಬಿಬಿ ಬ್ಯಾಂಕ್ ಎಂದರೆ, ‘ಸೂರ್ಯ ಬಂಡಲ್ ಬ್ಯಾಂಕ್’ ಎಂದು ನಮೂದಿಸಲಾಗಿದೆ.

‘ಸೂರ್ಯನ ನಂಬಿ ಬ್ಯಾಂಕ್​ನಲ್ಲಿ ಹಣ ಇಡಬೇಡಿ’ ಎಂದೂ ಕಾರ್ಡ್ ಮೇಲೆ ಮುದ್ರಣ ಮಾಡಲಾಗಿದೆ. ಕಾರ್ಡ್ ಮೇಲೆ ‘100% ನೋ ಮನಿ ಬ್ಯಾಕ್’ ಎಂದು ಮುದ್ರಿಸಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಕ್ಷೇತ್ರದಾದ್ಯಂತ ನಕಲಿ ಎಟಿಎಂ ಕಾರ್ಡ್ ವಿತರಣೆ ಮಾಡುತ್ತಿದ್ದಾರೆ. ಈ ಮೂಲಕ ಗುರು ರಾಘವೇಂದ್ರ ಬ್ಯಾಂಕ್ ಹಗರಣವನ್ನು ಚುನಾವಣಾ ಪ್ರಚಾರಕ್ಕಾಗಿ ಕಾಂಗ್ರೆಸ್ ಬಳಸಿಕೊಳ್ಳುತ್ತಿದೆ.

ಗುರುವಾರದಿಂದ ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಈ ವಿನೂತನ ಅಭಿಯಾನ ಶುರುವಾಗಿತ್ತು. ಇದೀಗ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಎಲ್ಲಾ ವಿಧಾನಸಭಾ ಕ್ಷೇತ್ರಗಲ್ಲೂ ಈ ಪ್ರಚಾರ ಮಾಡಲು ಕಾಂಗ್ರೆಸ್ ಮುಂದಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಹೋಟೆಲ್ ಅಂಗಡಿಗಳಿಗೆ ನಕಲಿ ಎಟಿಎಂ ಕಾರ್ಡ್​​ಗಳನ್ನು ಕಾಂಗ್ರೆಸ್ ಕಾರ್ಯಕರ್ತರು ವಿತರಿಸುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಹತ್ತಕ್ಕೂ ಹೆಚ್ಚು ಕಡೆ ಐಟಿ ದಾಳಿ

ಕಾಂಗ್ರೆಸ್​ನ ಈ ಪ್ರತಿಭಟನೆಯಿಂದ ಜನ ಮಾತ್ರ ಗೊಂದಲಕ್ಕೀಡಾಗುವಂತಾಗಿದೆ. ತೇಜಸ್ವಿ ಸೂರ್ಯ ಭಾವಚಿತ್ರ ಇರುವ ನಕಲಿ ಎಟಿಎಂ ಕಾರ್ಡ್ ನೋಡಿ ಸಾರ್ವಜನಿಕರು ಗೊಂದಲಕ್ಕೊಳಗಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ