AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವೇಗೌಡರು ಕ್ಷುಲ್ಲಕ ರಾಜಕಾರಣಕ್ಕೆ ಹೆಸರುವಾಸಿ: ಬಾಲಕಿ ಅಪಹರಿಸಿದ ಆರೋಪಕ್ಕೆ ಡಿಕೆ ಸುರೇಶ್ ತಿರುಗೇಟು

ಡಿಸಿಎಂ ಡಿಕೆ ಶಿವಕುಮಾರ್ 1996-97 ರಲ್ಲಿ ಬಾಲಕಿಯೊಬ್ಬಳನ್ನು ಅಪಹರಿಸಿ ಆಕೆಯ ತಾಯಿಯನ್ನು ಬೆದರಿಸಿ ಆಸ್ತಿ ಬರೆಸಿಕೊಂಡಿದ್ದರು ಎಂದು ಜೆಡಿಎಸ್ ವರಿಷ್ಠ ದೇವೇಗೌಡ ಮಾಡಿರುವ ಆರೋಪ ಸಂಸದ ಡಿಕೆ ಸುರೇಶ್​ರನ್ನು ಕೆರಳಿಸಿದೆ. ದೇವೇಗೌಡರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ದೇವೇಗೌಡರು ಆಸ್ತಿ ಉಳಿಸಿಕೊಳ್ಳಲು ರಾಜಕಾರಣ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ದೇವೇಗೌಡರು ಕ್ಷುಲ್ಲಕ ರಾಜಕಾರಣಕ್ಕೆ ಹೆಸರುವಾಸಿ: ಬಾಲಕಿ ಅಪಹರಿಸಿದ ಆರೋಪಕ್ಕೆ ಡಿಕೆ ಸುರೇಶ್ ತಿರುಗೇಟು
ಡಿಕೆ ಸುರೇಶ್ & ಹೆಚ್​ಡಿ ದೇವೇಗೌಡ
ರಾಮು, ಆನೇಕಲ್​
| Edited By: |

Updated on:Apr 18, 2024 | 2:57 PM

Share

ಆನೇಕಲ್, ಏಪ್ರಿಲ್ 18: ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರು (HD Deve Gowda) ಕ್ಷುಲ್ಲಕ ರಾಜಕಾರಣ ಮಾಡುವುದಕ್ಕೆ ಹೆಸರುವಾಸಿಯಾದವರು. ಅವರು ಹಿರಿಯರು, ಹಾಗಾಗಿ ಹೆಚ್ಚು ಮಾತನಾಡಲು ಹೋಗುವುದಿಲ್ಲ. ಅವರ ಆರೋಪಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ಕೊಡುತ್ತೇವೆ ಎಂದು ಕಾಂಗ್ರೆಸ್ (Congress) ಸಂಸದ ಡಿಕೆ ಸುರೇಶ್ (DK Suresh) ತಿರುಗೇಟು ನೀಡಿದರು. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ ಮಾತನಾಡಿದ ಅವರು, ನಾನು ಮತ್ತು ಡಿಕೆ ಶಿವಕುಮಾರ್​ ಕಲ್ಲು ಹೊಡೆದರು ಎಂದು ಆರೋಪಿಸುತ್ತಾರಲ್ಲವೇ, ಅವರ ಕುಟುಂಬದಲ್ಲಿ ಯಾಱರು ಕಲ್ಲು ಹೊಡೆದಿದ್ದಾರೆ ತೋರಿಸುತ್ತೇನೆ. ಯಾಱರ ಜಮೀನನ್ನು ವಶಪಡಿಸಿಕೊಂಡಿದ್ದಾರೆ ಎಂಬುದನ್ನು ತೋರಿಸುತ್ತೇನೆ ಎಂದರು.

ಏನು ಹೇಳಿದ್ದರು ದೇವೇಗೌಡ?

ಹಾಸನದಲ್ಲಿ ಬುಧವಾರ ಮಾತನಾಡಿದ್ದ ದೇವೇಗೌಡರು, ಹಿಂದೊಮ್ಮ ಡಿಕೆ ಶಿವಕುಮಾರ್ ಆಸ್ತಿಗಾಗಿ 9 ವರ್ಷದ ಬಾಲಕಿಯನ್ನು ಅಪಹರಿಸಿ ಬೆದರಿಕೆ ಹಾಕಿದ್ದರು. ಆ ಮೂಲಕ ಮಹಿಳೆಯೊಬ್ಬರನ್ನು ಬೆದರಿಸಿ ಬೆಂಗಳೂರು ಮೈಸೂರು ಹೆದ್ದಾರಿ ಬಳಿ ಆಸ್ತಿ ಬರೆಸಿಕೊಂಡಿದ್ದರು. ಈ ವಿಚಾರದಲ್ಲಿ ಹೈಕೋರ್ಟ್​, ಸುಪ್ರೀಂ ಕೋರ್ಟ್​ನಲ್ಲಿಯೂ ಅವರಿಗೆ ಹಿನ್ನಡೆಯಾಗಿದೆ. ಇದಕ್ಕೆ ದಾಖಲೆಗಳು ಇವೆ ಎಂದು ಹೇಳಿದ್ದರು.

ದೇವೇಗೌಡ ಆರೋಪದ ವಿಡಿಯೋ ಇಲ್ಲಿದೆ ನೋಡಿ

ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ್ದ ಕುಮಾರಸ್ವಾಮಿ ಸಹ ಇದೇ ಆರೋಪ ಮಾಡಿದ್ದರು. ಡಿಕೆ ಶಿವಕುಮಾರ್ ಮಹಿಳೆಯನ್ನು ಅಪಹರಿಸಿ ಬೆದರಿಸಿ ಜಮೀನು ಬರೆಸಿಕೊಂಡಿದ್ದು ನಿಜ. ಆ ಘಟನೆ ನಡೆದದ್ದು 1996-97 ರಲ್ಲಿ, ಅದರ ದಾಖಲೆಗಳಿವೆ ಎಂದು ಹೇಳಿದ್ದರು.

ಸೋಲಿನ ಭೀತಿಯಿಂದ ಐಟಿ ದಾಳಿ: ಸುರೇಶ್

ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ನಮ್ಮ ಮೇಲೆ ಐಟಿ, ಇ.ಡಿ ದಾಳಿ ಮಾಡಿಸಲಾಗುತ್ತಿದೆ ಎಂದು ಡಿಕಡ ಸುರೇಶ್ ಆರೋಪಿಸಿದರು. ಐಟಿ, ಇ.ಡಿ ಅಧಿಕಾರಿಗಳ ಮುಖಾಂತರ ಕಾರ್ಯಕರ್ತರನ್ನು ಬೆದರಿಸುತ್ತಿದ್ದಾರೆ. ನಿನ್ನೆ ಐಟಿ ಅಧಿಕಾರಿಗಳು ನಮ್ಮ ಮುಖಂಡರನ್ನು ಗುರಿಯಾಗಿಸಿ ದಾಳಿ ಮಾಡಿದ್ದಾರೆ. ಬೆದರಿಕೆ ಹಾಕುವುದು, ಬಿಜೆಪಿ ಪರವಾಗಿ ಕೆಲಸ ಮಾಡುವುದು ಸರಿಯಲ್ಲ ಎಂದು ಈ ಮೂಲಕ ಐಟಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡುತ್ತಿದ್ದೇನೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಡಿಕೆಶಿ ಮಹಿಳೆಯ ಅಪಹರಿಸಿ ಬೆದರಿಸಿ ಜಮೀನು ಬರೆಸಿಕೊಂಡಿದ್ದಕ್ಕೆ ದಾಖಲೆ ಇದೆ: ಮತ್ತೆ ಗುಡುಗಿದ ಹೆಚ್​ಡಿ ಕುಮಾರಸ್ವಾಮಿ

‘ಆಸ್ತಿ ಉಳಿಸಿಕೊಳ್ಳಲು ರಾಜಕಾರಣ ಮಾಡುತ್ತಿರುವ ದೇವೇಗೌಡ’

ಬಿಜೆಪಿಗರು ಮಾಡುವ ತಂತ್ರಗಾರಿಕೆ ಅಕ್ಷಮ್ಯ ಅಪರಾಧ. ಐಟಿ ಹಾಗೂ ಇಡಿ ಬಿಜೆಪಿ & ದೇವೇಗೌಡರ ಕೈಬೊಂಬೆಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಆರೋಪ ಮಾಡುವುದು ನಡೆಯುತ್ತಿದೆ. ದೇವೇಗೌಡರು ತಮ್ಮ ಆಸ್ತಿ ಉಳಿಸಿಕೊಳ್ಳಲು ರಾಜಕಾರಣ ಮಾಡುತ್ತಿದ್ದಾರೆ ಎಂದು ಡಿಕೆ ಸುರೇಶ್ ಕಿಡಿಕಾರಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:55 pm, Thu, 18 April 24

Follow Us
Ramu Ram
Ramu Ram

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?