AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್​ ಬೆದರಿಕೆ ಸಂದೇಶ!

ಎರಡು ತಿಂಗಳ ಹಿಂದೆ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್​ ಸ್ಫೋಟ ಸಂಭವಿಸಿತ್ತು. ಇದಾದ ಬೆನ್ನಲ್ಲೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗಳಿಗೆ ಬಾಂಬ್​ ಬೆದರಿಕೆ ಸಂದೇಶ ಬಂದಿತ್ತು. ಈ ಎರಡೂ ಪ್ರಕರಣಗಳು ಜನಮನದಿಂದ ಮಾಸುವ ಮುನ್ನವೇ ಇದೀಗ ನಗರದ ಖಾಸಗಿ ಶಾಲೆಗೆ ಹುಸಿ ಬಾಂಬ್​ ಬೆದರಿಕೆ ಸಂದೇಶ ಬಂದಿದೆ.

ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್​ ಬೆದರಿಕೆ ಸಂದೇಶ!
ಸಾಂದರ್ಭಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Edited By: ವಿವೇಕ ಬಿರಾದಾರ|

Updated on:May 14, 2024 | 11:38 AM

Share

ಬೆಂಗಳೂರು, ಮೇ 14: ಕಳೆದ ಕೆಲವು ದಿನಗಳ ಹಿಂದೆ ನಗರದ ಹಲವು ಖಾಸಗಿ ಆಸ್ಪತ್ರೆಗಳಿಗೆ ಬಾಂಬ್​ ಬೆದರಿಕೆ (Bomb threat) ಇ-ಮೇಲ್​ ಬಂದಿತ್ತು. ಇದರ ಬೆನ್ನಲ್ಲೇ ಇದೀಗ, ಅಮೃತಹಳ್ಳಿ ಪೊಲೀಸ್​ ಠಾಣಾ ವ್ಯಾಪ್ತಿಯ ಕೆಂಪಾಪುರದ ಜೈನ್ ಹೆರಿಟೇಜ್ ಶಾಲೆಗೆ (School) ಬಾಂಬ್ ಬೆದರಿಕೆ ಇ-ಮೇಲ್ (E-Mail) ಬಂದಿದೆ. ದುಷ್ಕರ್ಮಿಗಳು ಮಧ್ಯರಾತ್ರಿ 12.20ರ ಸುಮಾರಿಗೆ ಬಾಂಬ್ ಮೇಲ್ ಕಳಿಸಿದ್ದು, ಬೆಳಗ್ಗೆ 7.30ಕ್ಕೆ ಶಾಲೆ ಸಿಬ್ಬಂದಿ ಇ-ಮೇಲ್​ ಪರಿಶೀಲಿಸಿದಾಗ ಬಾಂಬ್​ ಬೆದರಿಕೆ ಸಂದೇಶ ಬಂದಿತ್ತು.

ಶಾಲಾ ಸಿಬ್ಬಂದಿ ಕೂಡಲೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಹಾಗೂ ಬಾಂಬ್​ ನಿಷ್ಕ್ರಿಯ ದಳ ಶಾಲೆಯಲ್ಲಿ ಪರಿಶೀಲನೆ ನಡೆಸಿದರು. ಪರಿಶೀಲನೆ ಬಳಿಕ ಹುಸಿ ಬಾಂಬ್ ಇ-ಮೇಲ್ ಎಂದು ದೃಢವಾಗಿದೆ.

ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಬಾಂಬ್​ ಬೆದರಿಕೆ ಇ-ಮೇಲ್​ಗಳು ಬಂದಿರುವುದು ಇದೇ ಮೊದಲಲ್ಲ. ಈ ಹಿಂದೆ ಕೂಡ ಹಲವು ಶಾಲೆಗಳಿಗೆ ಬಾಂಬ್​ ಬೆದರಿಕೆ ಇ-ಮೇಲ್​ಗಳು ಬಂದಿದ್ದವು. ಈ ಬಾಂಬ್​ ಬೆದರಿಕೆ ಪ್ರಕರಣಗಳನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೇಲಿಂದ ಮೇಲೆ ಈ ರೀತಿಯಾದ ಬಾಂಬ್​ ಬೆದರಿಕೆ ಇ-ಮೇಲ್​ಗಳು ಬರುತ್ತಿದ್ದರೂ, ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್: ಪೊಲೀಸರ ತಪಾಸಣೆ

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ

ಇತ್ತೀಚೆಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1 ಮತ್ತು ಕೆಲವು ವಿಮಾನಗಳಲ್ಲಿ ಬಾಂಬ್ ಇರಿಸಲಾಗಿದೆ ಎಂದು ಹುಸಿ ಬಾಂಬ್​ ಬೆದರಿಕೆ ಬಂದಿತ್ತು. ಬಾಂಬ್​ ಬೆದರಿಕೆ ಕಳಸಿದ್ದ ಅಪರಿಚಿತ ವ್ಯಕ್ತಿಯ ವಿರುದ್ಧ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಮ್ಯಾನೇಜರ್ ದೂರು ದಾಖಲಿಸಿದ್ದರು.

ಅಪರಿಚಿತ ಆರೋಪಿ ವಿರುದ್ಧ ಮೇ 2 ರಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

“ವಿಮಾನ ನಿಲ್ದಾಣದ ಇ-ಮೇಲ್ ಐಡಿಗೆ ಮೇಲ್ ಕಳುಹಿಸಲಾಗಿದೆ. ಬಾಂಬ್‌ಗಳನ್ನು ಇಟ್ಟಿದ್ದು, ಅವು ಕೆಲವೇ ಗಂಟೆಗಳಲ್ಲಿ ಸ್ಫೋಟಗೊಳ್ಳುತ್ತವೆ. ಮೇಲ್ ಮಾಡಿದವನು ತಾನು ಭಯೋತ್ಪಾದಕ ಗುಂಪಿನಿಂದ ಬಂದವನು” ಅಂತ ಸಂದೇಶ ಕಳಿಸಿದ್ದಾನೆ ಎಂದು ಟರ್ಮಿನಲ್ ಮ್ಯಾನೇಜರ್ ಗೀತಾ ರಾಣಿ ಅವರು ತಮ್ಮ ದೂರಿನಲ್ಲಿ ದಾಖಲಿಸಿದ್ದಾರೆ

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:35 am, Tue, 14 May 24

Follow Us
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಭಾರತೀಯ ವಾಯುಪಡೆಗೆ ಹೆಚ್ಎಎಲ್ ನಿರ್ಮಿತ ಯುದ್ಧ ವಿಮಾನಗಳ ಹಸ್ತಾಂತರ
ಭಾರತೀಯ ವಾಯುಪಡೆಗೆ ಹೆಚ್ಎಎಲ್ ನಿರ್ಮಿತ ಯುದ್ಧ ವಿಮಾನಗಳ ಹಸ್ತಾಂತರ
ಅವಕಾಶ ಕೊಟ್ಟ ವೇದಿಕೆಗೆ ಅಗೌರವ; ಕಿಚ್ಚನ ಕ್ಲಾಸ್ ಹೇಗಿದೆ ನೋಡಿ
ಅವಕಾಶ ಕೊಟ್ಟ ವೇದಿಕೆಗೆ ಅಗೌರವ; ಕಿಚ್ಚನ ಕ್ಲಾಸ್ ಹೇಗಿದೆ ನೋಡಿ
ಕೆಪಿಎಸ್​ಸಿ ಹಗರಣ: ಜ್ಞಾನೇಂದ್ರ ಕುಮಾರ್, ಕನ್ನಾಳೆ ಬಂಧಿಸಿದ ಇಡಿ
ಕೆಪಿಎಸ್​ಸಿ ಹಗರಣ: ಜ್ಞಾನೇಂದ್ರ ಕುಮಾರ್, ಕನ್ನಾಳೆ ಬಂಧಿಸಿದ ಇಡಿ
ನಾನು ಈಗ ವೆಜ್​ಟೇರಿಯನ್, ಅಶೋಕಣ್ಣಂಗೆ ಫ್ರೆಶ್ ಮೀನು ಕಳಿಸ್ತೀನಿ: ಡಿಕೆಶಿ
ನಾನು ಈಗ ವೆಜ್​ಟೇರಿಯನ್, ಅಶೋಕಣ್ಣಂಗೆ ಫ್ರೆಶ್ ಮೀನು ಕಳಿಸ್ತೀನಿ: ಡಿಕೆಶಿ