AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್​ ಬೆದರಿಕೆ ಸಂದೇಶ!

ಎರಡು ತಿಂಗಳ ಹಿಂದೆ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್​ ಸ್ಫೋಟ ಸಂಭವಿಸಿತ್ತು. ಇದಾದ ಬೆನ್ನಲ್ಲೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗಳಿಗೆ ಬಾಂಬ್​ ಬೆದರಿಕೆ ಸಂದೇಶ ಬಂದಿತ್ತು. ಈ ಎರಡೂ ಪ್ರಕರಣಗಳು ಜನಮನದಿಂದ ಮಾಸುವ ಮುನ್ನವೇ ಇದೀಗ ನಗರದ ಖಾಸಗಿ ಶಾಲೆಗೆ ಹುಸಿ ಬಾಂಬ್​ ಬೆದರಿಕೆ ಸಂದೇಶ ಬಂದಿದೆ.

ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್​ ಬೆದರಿಕೆ ಸಂದೇಶ!
ಸಾಂದರ್ಭಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Edited By: |

Updated on:May 14, 2024 | 11:38 AM

Share

ಬೆಂಗಳೂರು, ಮೇ 14: ಕಳೆದ ಕೆಲವು ದಿನಗಳ ಹಿಂದೆ ನಗರದ ಹಲವು ಖಾಸಗಿ ಆಸ್ಪತ್ರೆಗಳಿಗೆ ಬಾಂಬ್​ ಬೆದರಿಕೆ (Bomb threat) ಇ-ಮೇಲ್​ ಬಂದಿತ್ತು. ಇದರ ಬೆನ್ನಲ್ಲೇ ಇದೀಗ, ಅಮೃತಹಳ್ಳಿ ಪೊಲೀಸ್​ ಠಾಣಾ ವ್ಯಾಪ್ತಿಯ ಕೆಂಪಾಪುರದ ಜೈನ್ ಹೆರಿಟೇಜ್ ಶಾಲೆಗೆ (School) ಬಾಂಬ್ ಬೆದರಿಕೆ ಇ-ಮೇಲ್ (E-Mail) ಬಂದಿದೆ. ದುಷ್ಕರ್ಮಿಗಳು ಮಧ್ಯರಾತ್ರಿ 12.20ರ ಸುಮಾರಿಗೆ ಬಾಂಬ್ ಮೇಲ್ ಕಳಿಸಿದ್ದು, ಬೆಳಗ್ಗೆ 7.30ಕ್ಕೆ ಶಾಲೆ ಸಿಬ್ಬಂದಿ ಇ-ಮೇಲ್​ ಪರಿಶೀಲಿಸಿದಾಗ ಬಾಂಬ್​ ಬೆದರಿಕೆ ಸಂದೇಶ ಬಂದಿತ್ತು.

ಶಾಲಾ ಸಿಬ್ಬಂದಿ ಕೂಡಲೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಹಾಗೂ ಬಾಂಬ್​ ನಿಷ್ಕ್ರಿಯ ದಳ ಶಾಲೆಯಲ್ಲಿ ಪರಿಶೀಲನೆ ನಡೆಸಿದರು. ಪರಿಶೀಲನೆ ಬಳಿಕ ಹುಸಿ ಬಾಂಬ್ ಇ-ಮೇಲ್ ಎಂದು ದೃಢವಾಗಿದೆ.

ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಬಾಂಬ್​ ಬೆದರಿಕೆ ಇ-ಮೇಲ್​ಗಳು ಬಂದಿರುವುದು ಇದೇ ಮೊದಲಲ್ಲ. ಈ ಹಿಂದೆ ಕೂಡ ಹಲವು ಶಾಲೆಗಳಿಗೆ ಬಾಂಬ್​ ಬೆದರಿಕೆ ಇ-ಮೇಲ್​ಗಳು ಬಂದಿದ್ದವು. ಈ ಬಾಂಬ್​ ಬೆದರಿಕೆ ಪ್ರಕರಣಗಳನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೇಲಿಂದ ಮೇಲೆ ಈ ರೀತಿಯಾದ ಬಾಂಬ್​ ಬೆದರಿಕೆ ಇ-ಮೇಲ್​ಗಳು ಬರುತ್ತಿದ್ದರೂ, ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್: ಪೊಲೀಸರ ತಪಾಸಣೆ

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ

ಇತ್ತೀಚೆಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1 ಮತ್ತು ಕೆಲವು ವಿಮಾನಗಳಲ್ಲಿ ಬಾಂಬ್ ಇರಿಸಲಾಗಿದೆ ಎಂದು ಹುಸಿ ಬಾಂಬ್​ ಬೆದರಿಕೆ ಬಂದಿತ್ತು. ಬಾಂಬ್​ ಬೆದರಿಕೆ ಕಳಸಿದ್ದ ಅಪರಿಚಿತ ವ್ಯಕ್ತಿಯ ವಿರುದ್ಧ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಮ್ಯಾನೇಜರ್ ದೂರು ದಾಖಲಿಸಿದ್ದರು.

ಅಪರಿಚಿತ ಆರೋಪಿ ವಿರುದ್ಧ ಮೇ 2 ರಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

“ವಿಮಾನ ನಿಲ್ದಾಣದ ಇ-ಮೇಲ್ ಐಡಿಗೆ ಮೇಲ್ ಕಳುಹಿಸಲಾಗಿದೆ. ಬಾಂಬ್‌ಗಳನ್ನು ಇಟ್ಟಿದ್ದು, ಅವು ಕೆಲವೇ ಗಂಟೆಗಳಲ್ಲಿ ಸ್ಫೋಟಗೊಳ್ಳುತ್ತವೆ. ಮೇಲ್ ಮಾಡಿದವನು ತಾನು ಭಯೋತ್ಪಾದಕ ಗುಂಪಿನಿಂದ ಬಂದವನು” ಅಂತ ಸಂದೇಶ ಕಳಿಸಿದ್ದಾನೆ ಎಂದು ಟರ್ಮಿನಲ್ ಮ್ಯಾನೇಜರ್ ಗೀತಾ ರಾಣಿ ಅವರು ತಮ್ಮ ದೂರಿನಲ್ಲಿ ದಾಖಲಿಸಿದ್ದಾರೆ

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:35 am, Tue, 14 May 24

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ