Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿಮಾನ ನಿಲ್ದಾಣದ ಸಿಬ್ಬಂದಿ ಕಚೇರಿಗೆ ಹುಸಿ ಬಾಂಬ್​ ಬೆದರಿಕೆ

ಇತ್ತೀಚಿಗೆ ಖಾಸಗಿ ಆಸ್ಪತ್ರೆಗಳಿಗೆ ಮತ್ತು ಬಾಂಬ್​ ಬೆದರಿಕೆ ಸಂದೇಶ ಬಂದಿತ್ತು. ಇದರ ಬೆನ್ನಲ್ಲೇ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮತ್ತು ವಿಮಾನದಲ್ಲಿ ಬಾಂಬ್​ ಇಡಲಾಗಿದೆ ಎಂದು ಹುಸಿ ಬೆದರಿಕೆ ಸಂದೇಶ ಬಂದಿತ್ತು. ಇದೀಗ ಮತ್ತೆ ವಿಮಾನ ನಿಲ್ದಾಣದ ಸಿಬ್ಬಂದಿ ಕಟ್ಟಡಕ್ಕೆ ಬಾಂಬ್​ ಬೆದರಿಕೆ ಸಂದೇಶ ಬಂದಿದೆ.

ಬೆಂಗಳೂರು ವಿಮಾನ ನಿಲ್ದಾಣದ ಸಿಬ್ಬಂದಿ ಕಚೇರಿಗೆ ಹುಸಿ ಬಾಂಬ್​ ಬೆದರಿಕೆ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
Follow us
ನವೀನ್ ಕುಮಾರ್ ಟಿ
| Updated By: ವಿವೇಕ ಬಿರಾದಾರ

Updated on:May 29, 2024 | 1:32 PM

ದೇವನಹಳ್ಳಿ, ಮೇ 29: ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (Kempegowda International Aiport) ಆಡಳಿತ ಮಂಡಳಿ, ಸಿಬ್ಬಂದಿ ಕಚೇರಿಯನ್ನು ಸ್ಫೋಟಿಸುವುದಾಗಿ ಶೌಚಾಲಯದ ಕನ್ನಡಿ ಮೇಲೆ ಬೆದರಿಕೆ ಸಂದೇಶ ಬರೆಯಲಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಕೂಡಲೆ ಶ್ವಾನದಳ‌ ಹಾಗೂ ಸಿಐಎಸ್ಎಫ್​ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಹುಸಿ ಬಾಂಬ್ (Fake bomb)​ ಬೆದರಿಕೆ ಎಂದು ತಿಳಿದುಬಂದಿದೆ.

ವಿಮಾನ ನಿಲ್ದಾಣದ ಆಲ್ಪಾ 3 ಬಿಲ್ಡಿಂಗ್​ನಲ್ಲಿನ ಶೌಚಾಲಯದ ಕನ್ನಡಿ ಮೇಲೆ 25 ನಿಮಿಷದಲ್ಲಿ ಕಟ್ಟಡಗಳು ಸ್ಟೋಟವಾಗುವುದಾಗಿ ಬೆದರಿಕೆ ಸಂದೇಶ ಬರೆಯಲಾಗಿತ್ತು. ಬೆಳಗ್ಗೆ ಶೌಚಾಲಯಕ್ಕೆ ಸಿಬ್ಬಂದಿ ತೆರಳಿದ ವೇಳೆ ಬರಹವನ್ನು ನೋಡಿದ್ದಾರೆ. ಕೂಡಲೆ ಈ ವಿಚಾರವನ್ನು ಭದ್ರತಾ ಪಡೆಗೆ ತಿಳಿಸಿದ್ದಾರೆ. ಬೆದರಿಕೆ ಸಂದೇಶದಿಂದ ಸಿಬ್ಬಂದಿ ಹಾಗೂ ಭದ್ರತಾ ಪಡೆ ಕೆಲಕಾಲ ಆತಂಕಕ್ಕೆ ಒಳಗಾಗಿದ್ದರು.

ಪರಿಶೀಲನೆ ಬಳಿಕ ಹುಸಿ ಬಾಂಬ್ ಸಂದೇಶ ಅಂತ ತಿಳಿದ ಮೇಲೆ ಸಿಬ್ಬಂದಿ ನಿಟ್ಟುಸಿರು ಬಿಟ್ಟರು. ಸಿಬ್ಬಂದಿಯೇ ಹುಸಿ ಬೆದರಿಕೆ ಸಂದೇಶ ಬರೆದಿರುವ ಶಂಕೆ ವ್ಯಕ್ತವಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರಿನ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್: ಪೊಲೀಸರ ತಪಾಸಣೆ

ಏ.29 ರಂದು ವಿಮಾನ ನಿಲ್ದಾಣದ ಮ್ಯಾನೇಜರ್​​ ಅವರ ಮೇಲ್​ಗೆ “ವಿಮಾನದಲ್ಲಿ ಟೈಂ ಬಾಂಬ್​ ಇಡಲಾಗಿದೆ. ಯಾವುದೇ ಸಮಯದಲ್ಲಿ ಸ್ಫೋಟಗೊಳ್ಳಬಹುದು. ಜೊತೆಗೆ, ಗುಂಪಿನಿಂದ ಟರ್ಮಿನಲ್ 1 ರ ಒಳಗೆ ವಿವಿಧ ಸ್ಥಳಗಳಲ್ಲಿ ಸ್ಫೋಟಕ ವಸ್ತುಗಳನ್ನು ಇರಿಸಲಾಗಿದೆ” ಅಂತ ಸಂದೇಶ ಬಂದಿತ್ತು.

ಮಂಗಳೂರು ವಿಮಾನ ನಿಲ್ದಾಣಕ್ಕೂ ಅದೇ ದಿನ (ಏಪ್ರಿಲ್ 29) ಬಾಂಬ್​ ಬೆದರಿಕೆ ಮೇಲ್​ ಬಂದಿತ್ತು. ಅಲ್ಲದೆ ದೇಶದ ಇತರ ಕೆಲವು ಖಾಸಗಿ ವಿಮಾನ ನಿಲ್ದಾಣಗಳಿಗೂ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ದೆಹಲಿ ಮತ್ತು ಎನ್‌ಸಿಆರ್‌ನ ಶಾಲೆಗಳಿಗೆ ಮೇ 1 ರಂದು ಇದೇ ರೀತಿಯ ಬೆದರಿಕೆಗಳು ಬಂದಿದ್ದರೇ, ಅಹಮದಾಬಾದ್‌ನ ಶಾಲೆಗಳಿಗೆ ಸೋಮವಾರ (ಮೇ 6) ಬೆದರಿಕೆ ಸಂದೇಶ ಬಂದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:24 pm, Wed, 29 May 24

ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!