AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಸ್​ಪೆಕ್ಟರ್​, ಎಸಿಪಿಗೆ ಪೊಲೀಸ್​ ಪೇದೆಯಿಂದ ಕೊಲೆ ಬೆದರಿಕೆ!

ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಮಾನತುಗೊಳಿಸುವಂತೆ ಶಿಫಾರಸು ಮಾಡಿದ್ದಕ್ಕೆ ಪೊಲೀಸ್​ ಪೇದೆ ರೇಣುಕಾ ನಾಯಕ್​ ಬಾಣಸವಾಡಿ ಉಪ ವಿಭಾಗದ ಎಸಿಪಿ ಹಾಗೂ ಇನ್ಸ್​ಪೆಕ್ಟರ್​ ಅವರಿಗೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

ಇನ್ಸ್​ಪೆಕ್ಟರ್​, ಎಸಿಪಿಗೆ ಪೊಲೀಸ್​ ಪೇದೆಯಿಂದ ಕೊಲೆ ಬೆದರಿಕೆ!
ಸಾಂದರ್ಭಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Edited By: |

Updated on:May 22, 2024 | 9:56 AM

Share

ಬೆಂಗಳೂರು, ಮೇ 17: ಅಮಾನತು ಶಿಕ್ಷಿಗೆ ಶಿಫಾರಸು ಮಾಡಿದರು ಅಂತ ಬಾಣಸವಾಡಿ ಠಾಣೆಯ ಇನ್ಸ್​ಪೆಕ್ಟರ್ (Inspector) ಮತ್ತು ಎಸಿಪಿ (ACP) ಅವರಿಗೆ ಪೊಲೀಸ್​ ಪೇದೆ (Constable) ಚಾಕುವಿನಿಂದ ಇರಿದು ಕೊಲೆ‌ ಮಾಡೋದಾಗಿ ಜೀವ ಬೆದರಿಕೆ ಹಾಕಿದ್ದಾರೆ. ರೇಣುಕಾ ನಾಯಕ್ ಜೀವ ಬೆದರಿಕೆ ಹಾಕಿದ ಪೊಲೀಸ್​ ಪೇದೆ.

ಕೆಲ ದಿನಗಳ ಹಿಂದೆ ಬೆಂಗಳೂರಿನ ಬಾಣಸವಾಡಿ ವ್ಯಾಪ್ತಿಯ ರೌಡಿಶೀಟರ್ ಕಾರ್ತಿಕೇಯನ್ ಹತ್ಯೆಯಾಗಿತ್ತು. ಈ ಕೃತ್ಯದಲ್ಲಿ ಕರ್ತವ್ಯಲೋಪ ಎಸಗಿರುವ ಆರೋಪದ ಮೇಲೆ ಪೊಲೀಸ್​ ಪೇದೆಗಳಾದ ಸಂತೋಷ್, ಪುಟ್ಟಸ್ವಾಮಿ, ವಿನೋದ್​ ಅವರನ್ನು ಪೂರ್ವವಿಭಾಗದ ಡಿಸಿಪಿ ಕುಲದೀಪ್​ ಕುಮಾರ್ ಆರ್​. ಜೈನ್​ ಅಮಾನತುಗೊಳಿಸಿದ್ದರು.

ಇದನ್ನೂ ಓದಿ: ಹುಬ್ಬಳ್ಳಿ-ಧಾರವಾಡ ಅವಳಿ ನಗರಕ್ಕೆ ಬೇಕಿದೆ ಮತ್ತಷ್ಟು ಪೊಲೀಸ್ ಠಾಣೆ, ಸಿಬ್ಬಂದಿ

ಪೊಲೀಸ್​ ಪೇದೆ ರೇಣುಕಾ ನಾಯಕ್ ಅವರನ್ನೂ ಅಮಾನತು ಮಾಡುವಂತೆ ಶಿಫಾರಸು ಮಾಡಲಾಗಿತ್ತು. ತನ್ನ ಹೆಸರನ್ನು ಅಮಾನತು ಶಿಕ್ಷೆಗೆ ಶಿಫಾರಸು ಮಾಡಿದ ಕಾರಣಕ್ಕೆ ಬಾಣಸವಾಡಿ ಉಪ ವಿಭಾಗದ ಎಸಿಪಿ ಹಾಗೂ ಇನ್ಸ್​ಪೆಕ್ಟರ್​ ಅವರಿಗೆ ಪೇದೆ ರೇಣುಕಾ ನಾಯಕ್​ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಇದರಿಂದ ಆತಂಕಗೊಂಡ ಎಸಿಪಿ ಅವರು, ಕೊನೆ ಕ್ಷಣದಲ್ಲಿ ತಮ್ಮ ಶಿಫಾರಸು ಹಿಂಪಡೆದು. ಒಂದು ತಿಂಗಳು ರಜೆ ಕೊಟ್ಟು ಕಳಿಸಿದ್ದಾರೆ.

ಈ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಿ ನಗರ ಪೊಲೀಸ್​ ಆಯುಕ್ತ ಬಿ. ​ದಯಾನಂದ್ ಆದೇಶ ಹೊರಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:15 am, Wed, 22 May 24

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ